<p><strong>ಮಸ್ಕಿ: </strong>’ಉಪ ಚುನಾವಣೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯವರ ಮನೆಗೆ ಹೋಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಪಾಹಾರ ಮಾಡಿದ್ದು ರಾಜಕೀಯ ಗಿಮಿಕ್ ಅಲ್ಲದೆ ಮತ್ತೇನು ಅಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಟೀಕಿಸಿದರು.</p>.<p>‘ಪರಿಶಿಷ್ಟ ಜಾತಿಯವರ ಮನೆಗೆ ಸಿಎಂ ಭೇಟಿ ನೀಡಿದ್ದಕ್ಕೆ ನಮ್ಮ ವಿರೋಧ ಇಲ್ಲ. ಈ ಹಿಂದೆ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿಯವರಿಗೆ ಹೆಚ್ಚಿನ ಅನುದಾನ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ನೀಡಿದ್ದ ಅನುದಾನ ಕಡಿತಗೊಳಿಸಿ ವಂಚನೆ ಮಾಡಿದೆ‘ ಎಂದು ಆರೋಪಿಸಿದರು.</p>.<p>ಇದೀಗ ಮಸ್ಕಿ ಉಪ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಯವರ ಮತ ಪಡೆಯಲು ಅವರ ಮನೆಗೆ ತೆರಳಿ ಉಪಾಹಾರ ಸೇವಿಸುವ ಮೂಲಕ ಅವರ ಮತ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ದೂರಿದರು.</p>.<p><strong>ಇಂದು ಬಹಿರಂಗ ಸಭೆ:</strong> ಭಾನುವಾರ ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ಪರವಾಗಿ ಕಾರ್ಯಕರ್ತರ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.</p>.<p>ಕೆಪಿಸಿಸಿ ಉಸ್ತುವಾರಿ ಸುರ್ಜಿತವಾಲ್, ರಾಜ್ಯ ಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>’ಉಪ ಚುನಾವಣೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯವರ ಮನೆಗೆ ಹೋಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಪಾಹಾರ ಮಾಡಿದ್ದು ರಾಜಕೀಯ ಗಿಮಿಕ್ ಅಲ್ಲದೆ ಮತ್ತೇನು ಅಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಟೀಕಿಸಿದರು.</p>.<p>‘ಪರಿಶಿಷ್ಟ ಜಾತಿಯವರ ಮನೆಗೆ ಸಿಎಂ ಭೇಟಿ ನೀಡಿದ್ದಕ್ಕೆ ನಮ್ಮ ವಿರೋಧ ಇಲ್ಲ. ಈ ಹಿಂದೆ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿಯವರಿಗೆ ಹೆಚ್ಚಿನ ಅನುದಾನ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ನೀಡಿದ್ದ ಅನುದಾನ ಕಡಿತಗೊಳಿಸಿ ವಂಚನೆ ಮಾಡಿದೆ‘ ಎಂದು ಆರೋಪಿಸಿದರು.</p>.<p>ಇದೀಗ ಮಸ್ಕಿ ಉಪ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಯವರ ಮತ ಪಡೆಯಲು ಅವರ ಮನೆಗೆ ತೆರಳಿ ಉಪಾಹಾರ ಸೇವಿಸುವ ಮೂಲಕ ಅವರ ಮತ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ದೂರಿದರು.</p>.<p><strong>ಇಂದು ಬಹಿರಂಗ ಸಭೆ:</strong> ಭಾನುವಾರ ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ಪರವಾಗಿ ಕಾರ್ಯಕರ್ತರ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.</p>.<p>ಕೆಪಿಸಿಸಿ ಉಸ್ತುವಾರಿ ಸುರ್ಜಿತವಾಲ್, ರಾಜ್ಯ ಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>