<p><strong>ಮಸ್ಕಿ:</strong> ಮಸ್ಕಿ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 9 ಹಾಗೂ ಕೋವಿಡ್ ನಿಯಮ ಉಲ್ಲಂಘಿಸಿದ ಬಗ್ಗೆ 14 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಚುನಾವಣಾಧಿಕಾರಿ ರಾಜಶೇಖರ ಡಂಬಳ ಹೇಳಿದ್ದಾರೆ.</p>.<p>‘ಪಟ್ಟಣದ ಚುನಾವಣಾಧಿಕಾರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 14 ಪ್ರಕರಣಗಳಲ್ಲಿ ₹ 17,600 ದಂಡ ವಸೂಲಿ ಮಾಡಲಾಗಿದೆ. ಮತದಾರರಿಗೆ ಹರ್ವಾಪುರ ಗ್ರಾಮದಲ್ಲಿ ಹಣ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಅನಾಮಧೇಯ ಕಾರ್ಯಕರ್ತನ ವಿರುದ್ಧ ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‘ ಎಂದು ರಾಜಶೇಖರ ಡಂಬಳ ತಿಳಿಸಿದ್ದಾರೆ.</p>.<p>ಚುನಾವಣಾ ಅಕ್ರಮ ತಡೆಯಲು 110 ಜನರನ್ನೊಳಗೊಂಡ ಸಿಆರ್ಪಿಎಫ್ ತಂಡ ನಿಯೋಜನೆ ಮಾಡಲಾಗುವುದು. ಚುನಾವಣಾ ಅಕ್ರಮ ಚಟುವಟಿಕೆಗಳು ಕಂಡು ಬಂದರೆ ಸಿವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಲು ಅವಕಾಶವಿದ್ದು, ಅಂತಹ ಚಟುವಟಿಕೆಗಳು ಕಂಡು ಬಂದರೆ ದೂರು ಸಲ್ಲಿಸುಬಹುದು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ಮಸ್ಕಿ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 9 ಹಾಗೂ ಕೋವಿಡ್ ನಿಯಮ ಉಲ್ಲಂಘಿಸಿದ ಬಗ್ಗೆ 14 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಚುನಾವಣಾಧಿಕಾರಿ ರಾಜಶೇಖರ ಡಂಬಳ ಹೇಳಿದ್ದಾರೆ.</p>.<p>‘ಪಟ್ಟಣದ ಚುನಾವಣಾಧಿಕಾರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 14 ಪ್ರಕರಣಗಳಲ್ಲಿ ₹ 17,600 ದಂಡ ವಸೂಲಿ ಮಾಡಲಾಗಿದೆ. ಮತದಾರರಿಗೆ ಹರ್ವಾಪುರ ಗ್ರಾಮದಲ್ಲಿ ಹಣ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಅನಾಮಧೇಯ ಕಾರ್ಯಕರ್ತನ ವಿರುದ್ಧ ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‘ ಎಂದು ರಾಜಶೇಖರ ಡಂಬಳ ತಿಳಿಸಿದ್ದಾರೆ.</p>.<p>ಚುನಾವಣಾ ಅಕ್ರಮ ತಡೆಯಲು 110 ಜನರನ್ನೊಳಗೊಂಡ ಸಿಆರ್ಪಿಎಫ್ ತಂಡ ನಿಯೋಜನೆ ಮಾಡಲಾಗುವುದು. ಚುನಾವಣಾ ಅಕ್ರಮ ಚಟುವಟಿಕೆಗಳು ಕಂಡು ಬಂದರೆ ಸಿವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಲು ಅವಕಾಶವಿದ್ದು, ಅಂತಹ ಚಟುವಟಿಕೆಗಳು ಕಂಡು ಬಂದರೆ ದೂರು ಸಲ್ಲಿಸುಬಹುದು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>