<p><strong>ಸಿಂಧನೂರು:</strong> ‘ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಸದ್ಯದಲ್ಲೇ ಹುಚ್ಚಾಸ್ಪತ್ರೆಗೆ ಸೇರಲಿದ್ದಾರೆ. ಅವರ ಹೇಳಿಕೆಗಳು ಯಾವ ನಾಯಕರು ಮೆಚ್ಚುವಂತಿಲ್ಲ‘ ಎಂದು ಶಾಸಕ ರೇಣುಕಾಚಾರ್ಯ ಟೀಕಿಸಿದರು.</p>.<p>ನಗರದ ಕೋಟೆ ಬಡಾವಣೆಯಲ್ಲಿರುವ ಬಸಪ್ಪಯ್ಯಸ್ವಾಮಿ ಸಾಲಿಮಠ ಅವರ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಬಿಜೆಪಿಗೆ ಮತ ಹಾಕುತ್ತಾರೆ’ ಎಂದರು.</p>.<p>‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಅವರು ಹಗುರವಾಗಿ ಮಾತನಾಡುತ್ತಿದ್ದಾರೆ. ಉಪ ಚುನಾವಣೆಗಳ ನಂತರ ಪಕ್ಷದಲ್ಲಿ ಬಿರುಕು ಉಂಟಾಗುವುದಿಲ್ಲ. ಸಚಿವ ಸ್ಥಾನಕ್ಕಾಗಿ ಯಾರು ಕಿತ್ತಾಡುವುದಿಲ್ಲ. ಪಕ್ಷ ಸಂಘಟನೆಗೆ ಶಾಸಕರು ದುಡಿಯುತ್ತೇವೆ’ ಎಂದರು. ಜಂಗಮ ಸಮಾಜದ ಮುಖಂಡರಾದ ಬಸವರಾಜ್ ಬಾದರ್ಲಿ ಹಿರೇಮಠ, ಬಸಪ್ಪಯ್ಯಸ್ವಾಮಿ ಸಾಲಿಮಠ, ಕುಮಾರ್, ಶ್ರೀಕಾಂತ್ ಹಿರೇಮಠ್, ಶಶಿಧರ್ ಹಿರೇಮಠ್, ಆದಿಬಸವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ‘ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಸದ್ಯದಲ್ಲೇ ಹುಚ್ಚಾಸ್ಪತ್ರೆಗೆ ಸೇರಲಿದ್ದಾರೆ. ಅವರ ಹೇಳಿಕೆಗಳು ಯಾವ ನಾಯಕರು ಮೆಚ್ಚುವಂತಿಲ್ಲ‘ ಎಂದು ಶಾಸಕ ರೇಣುಕಾಚಾರ್ಯ ಟೀಕಿಸಿದರು.</p>.<p>ನಗರದ ಕೋಟೆ ಬಡಾವಣೆಯಲ್ಲಿರುವ ಬಸಪ್ಪಯ್ಯಸ್ವಾಮಿ ಸಾಲಿಮಠ ಅವರ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಬಿಜೆಪಿಗೆ ಮತ ಹಾಕುತ್ತಾರೆ’ ಎಂದರು.</p>.<p>‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಅವರು ಹಗುರವಾಗಿ ಮಾತನಾಡುತ್ತಿದ್ದಾರೆ. ಉಪ ಚುನಾವಣೆಗಳ ನಂತರ ಪಕ್ಷದಲ್ಲಿ ಬಿರುಕು ಉಂಟಾಗುವುದಿಲ್ಲ. ಸಚಿವ ಸ್ಥಾನಕ್ಕಾಗಿ ಯಾರು ಕಿತ್ತಾಡುವುದಿಲ್ಲ. ಪಕ್ಷ ಸಂಘಟನೆಗೆ ಶಾಸಕರು ದುಡಿಯುತ್ತೇವೆ’ ಎಂದರು. ಜಂಗಮ ಸಮಾಜದ ಮುಖಂಡರಾದ ಬಸವರಾಜ್ ಬಾದರ್ಲಿ ಹಿರೇಮಠ, ಬಸಪ್ಪಯ್ಯಸ್ವಾಮಿ ಸಾಲಿಮಠ, ಕುಮಾರ್, ಶ್ರೀಕಾಂತ್ ಹಿರೇಮಠ್, ಶಶಿಧರ್ ಹಿರೇಮಠ್, ಆದಿಬಸವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>