ಮಸ್ಕಿ: ಸತತ 12 ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಸಹ ನಾರಾಯಣಪೂರ ಬಲದಂಡೆಯ 5 (ಎ) ಕಾಲುವೆ ಯೋಜನೆಯನ್ನು ಜಾರಿಗೊಳಿಸುವಲ್ಲಿ ವಿಫಲರಾದ ಪ್ರತಾಪಗೌಡ ಪಾಟೀಲ ಅವರ ವಿರುದ್ಧ ಮತ ಹಾಕುವ ಮೂಲಕ ಬಿಜೆಪಿಯನ್ನು ಸೋಲಿಸಬೇಕು ಎಂದು 5 (ಎ) ಹೋರಾಟ ಸಮನ್ವಯ ಸಮಿತಿ ಸಂಚಾಲಕ ಆರ್.ಮಾನಸಯ್ಯ ಕರೆ ನೀಡಿದರು.
ಕ್ಷೇತ್ರದ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಭಾನುವಾರ ಜನಾಂದೋಲನ ಸಭೆಯಲ್ಲಿ ಮಾತನಾಡಿ, ರೈತ ವಿರೋಧಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು. ಕಾಲುವೆಯನ್ನು ಜಾರಿಮಾಡದ ಬಿಜೆಪಿಯ ಪ್ರತಾಪಪಾಟೀಲ ಅವರನ್ನು ಸೋಲಿಸಿ, ರೈತರ ಹೋರಾಟವನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಕಾಟಗಲ್, ಮಾರಲದಿನ್ನಿ, ದಿನ್ನೆಬಾಯಿ, ಬೆಲ್ಲದಮರಡಿ ಸೇರಿದಂತೆ ಇತರೆ 5A ಕಾಲುವೆ ವ್ಯಾಪ್ತಿಯಲ್ಲಿ ಜನಾಂದೋಲನ ಸಭೆಗಳನ್ನು ನಡೆಸಲಾಯಿತು. ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಜಾಗೃತಿ ಮೂಡಿಸಲಾಯಿತು.