ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದವರು ಸೋಲುವ ಭೀತಿಯಿಂದ ಹತಾಶರಾಗಿ ಬಿಜೆಪಿ ಹಾಗೂ ಪ್ರತಾಪಗೌಡ ಪಾಟೀಲ ವಿರುದ್ಧ ಸುಳ್ಳು ಅಪಪ್ರಚಾರಕ್ಕೆ ಇಳಿದಿದ್ದಾರೆ. ಆಂತರಿಕ ಸಮೀಕ್ಷಾ ವರದಿ ಪ್ರಕಾರ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಬಹುಮತದಿಂದ ಗೆಲ್ಲುತ್ತದೆ ಎಂದು ಹೇಳಿದ್ದಾರೆ‘ ಎಂದು ತಿಳಿಸಿದರು.