<p><strong>ತುರ್ವಿಹಾಳ:</strong> ಮತದಾರರ ಪಟ್ಟಿಯ ಪರಿಷ್ಕರಣೆಯಿಂದಾಗಿ ಮತದಾರ ಪಟ್ಟಿಯಿಂದ ತಮ್ಮ ಹೆಸರನ್ನು ಕೈ ಬಿಟ್ಟಿರುವುದಕ್ಕೆ ಕಾರಣ ಉಪ ಚುನಾವಣೆಯಲ್ಲಿ ಮತ ಹಾಕುವ ಅವಕಾಶ ಕಳೆದುಕೊಂಡಿರುವುದಕ್ಕೆ ಮತದಾರರು ಶನಿವಾರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.</p>.<p>ಪಟ್ಟಣದ ಮತದಾರರು ಮತ ಚಲಾಯಿಸಲು ಬಂದಾಗ ಮತದಾರರ ಪಟ್ಟಿಯಲ್ಲಿ ಹೆಸರು ಸಿಗದೇ ಇದ್ದಾಗ, ‘ತಮ್ಮ ಅಭ್ಯರ್ಥಿಯ ಆಯ್ಕೆಯ ಕನಸು ನನಸಾಗುವ ಅವಕಾಶ ಸಿಗಲಿಲ್ಲ, ನಾವೂ ಬದುಕಿದ್ದು ಸತ್ತಂತೆ‘ ಎಂದು ಅಳಲು ತೋಡಿಕೊಂಡರು.</p>.<p>‘ಈ ಹಿಂದೆ ಅನೇಕ ಚುನಾವಣೆಯಲ್ಲಿ ಮತ ಚಲಾಯಿಸಿದ್ದೇವೆ. ಆದರೆ ಈ ಬಾರಿ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಈ ಉಪಚುನಾವಣೆಯಲ್ಲಿ ಮತ ಚಲಾಯಿಸುವ ಅವಕಾಶ ತಪ್ಪಿತು‘ ಎಂದು ಮತದಾರರು ದೂರಿದರು.</p>.<p>ಸುಮಾರು 50 ಜನ ಮತ ವಂಚಿತ ಮತದಾರರು ಚುನಾವಣಾ ಅಧಿಕಾರಿಗಳ ಮೂಲಕ ತಹಶೀಲ್ದಾರ, ಮತ್ತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದಾಗ , ಅವರು ಸಧ್ಯಕ್ಕೆ ದೂರು ಕೊಡಿ, ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಂಕ್ರಗೌಡ ದೇವರಮನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರ್ವಿಹಾಳ:</strong> ಮತದಾರರ ಪಟ್ಟಿಯ ಪರಿಷ್ಕರಣೆಯಿಂದಾಗಿ ಮತದಾರ ಪಟ್ಟಿಯಿಂದ ತಮ್ಮ ಹೆಸರನ್ನು ಕೈ ಬಿಟ್ಟಿರುವುದಕ್ಕೆ ಕಾರಣ ಉಪ ಚುನಾವಣೆಯಲ್ಲಿ ಮತ ಹಾಕುವ ಅವಕಾಶ ಕಳೆದುಕೊಂಡಿರುವುದಕ್ಕೆ ಮತದಾರರು ಶನಿವಾರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.</p>.<p>ಪಟ್ಟಣದ ಮತದಾರರು ಮತ ಚಲಾಯಿಸಲು ಬಂದಾಗ ಮತದಾರರ ಪಟ್ಟಿಯಲ್ಲಿ ಹೆಸರು ಸಿಗದೇ ಇದ್ದಾಗ, ‘ತಮ್ಮ ಅಭ್ಯರ್ಥಿಯ ಆಯ್ಕೆಯ ಕನಸು ನನಸಾಗುವ ಅವಕಾಶ ಸಿಗಲಿಲ್ಲ, ನಾವೂ ಬದುಕಿದ್ದು ಸತ್ತಂತೆ‘ ಎಂದು ಅಳಲು ತೋಡಿಕೊಂಡರು.</p>.<p>‘ಈ ಹಿಂದೆ ಅನೇಕ ಚುನಾವಣೆಯಲ್ಲಿ ಮತ ಚಲಾಯಿಸಿದ್ದೇವೆ. ಆದರೆ ಈ ಬಾರಿ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಈ ಉಪಚುನಾವಣೆಯಲ್ಲಿ ಮತ ಚಲಾಯಿಸುವ ಅವಕಾಶ ತಪ್ಪಿತು‘ ಎಂದು ಮತದಾರರು ದೂರಿದರು.</p>.<p>ಸುಮಾರು 50 ಜನ ಮತ ವಂಚಿತ ಮತದಾರರು ಚುನಾವಣಾ ಅಧಿಕಾರಿಗಳ ಮೂಲಕ ತಹಶೀಲ್ದಾರ, ಮತ್ತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದಾಗ , ಅವರು ಸಧ್ಯಕ್ಕೆ ದೂರು ಕೊಡಿ, ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಂಕ್ರಗೌಡ ದೇವರಮನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>