ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ವಂಚಿತ ಮತದಾರರ ಆಕ್ರೋಶ

Last Updated 18 ಏಪ್ರಿಲ್ 2021, 4:30 IST
ಅಕ್ಷರ ಗಾತ್ರ

ತುರ್ವಿಹಾಳ: ಮತದಾರರ ಪಟ್ಟಿಯ ಪರಿಷ್ಕರಣೆಯಿಂದಾಗಿ ಮತದಾರ ಪಟ್ಟಿಯಿಂದ ತಮ್ಮ ಹೆಸರನ್ನು ಕೈ ಬಿಟ್ಟಿರುವುದಕ್ಕೆ ಕಾರಣ ಉಪ ಚುನಾವಣೆಯಲ್ಲಿ ಮತ ಹಾಕುವ ಅವಕಾಶ ಕಳೆದುಕೊಂಡಿರುವುದಕ್ಕೆ ಮತದಾರರು ಶನಿವಾರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಪಟ್ಟಣದ ಮತದಾರರು ಮತ ಚಲಾಯಿಸಲು ಬಂದಾಗ ಮತದಾರರ ಪಟ್ಟಿಯಲ್ಲಿ ಹೆಸರು ಸಿಗದೇ ಇದ್ದಾಗ, ‘ತಮ್ಮ ಅಭ್ಯರ್ಥಿಯ ಆಯ್ಕೆಯ ಕನಸು ನನಸಾಗುವ ಅವಕಾಶ ಸಿಗಲಿಲ್ಲ, ನಾವೂ ಬದುಕಿದ್ದು ಸತ್ತಂತೆ‘ ಎಂದು ಅಳಲು ತೋಡಿಕೊಂಡರು.

‘ಈ ಹಿಂದೆ ಅನೇಕ ಚುನಾವಣೆಯಲ್ಲಿ ಮತ ಚಲಾಯಿಸಿದ್ದೇವೆ. ಆದರೆ ಈ ಬಾರಿ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಈ ಉಪಚುನಾವಣೆಯಲ್ಲಿ ಮತ ಚಲಾಯಿಸುವ ಅವಕಾಶ ತಪ್ಪಿತು‘ ಎಂದು ಮತದಾರರು ದೂರಿದರು.

ಸುಮಾರು 50 ಜನ ಮತ ವಂಚಿತ ಮತದಾರರು ಚುನಾವಣಾ ಅಧಿಕಾರಿಗಳ ಮೂಲಕ ತಹಶೀಲ್ದಾರ, ಮತ್ತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದಾಗ , ಅವರು ಸಧ್ಯಕ್ಕೆ ದೂರು ಕೊಡಿ, ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಂಕ್ರಗೌಡ ದೇವರಮನಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT