ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ಬಿಜೆಪಿ ಸರ್ಕಾರದ ಸಾಧನೆ: ಡಾ.ಯತೀಂದ್ರ

Last Updated 9 ಏಪ್ರಿಲ್ 2021, 15:14 IST
ಅಕ್ಷರ ಗಾತ್ರ

ಮಲ್ಲದಗುಡ್ಡ (ಕವಿತಾಳ): ‘ಬಿಜೆಪಿ ದುರಾಡಳಿತದಿಂದ ರಸಗೊಬ್ಬರ ಬೆಲೆ ಮತ್ತು ನಿತ್ಯ ಬಳಕೆ ಸಾಮಗ್ರಿಗಳ ಬೆಲೆ ಗಗನಕ್ಕೇರಿದ್ದು ಜನ ಸಾಮಾನ್ಯರು ಜೀವನ ನಡೆಸುವುದು ದುಸ್ತರವಾಗಿದೆ. ಬೆಲೆ ಏರಿಕೆಯೇ ಬಿಜೆಪಿ ಸರ್ಕಾರದ ಸಾಧನೆ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ಮಲ್ಲದಗುಡ್ಡ ಗ್ರಾಮದಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯ ಮತ್ತು ಕೇಂದ್ರದಲ್ಲಿರುವುದು ಬಡವರ ಪರ ಸರ್ಕಾರವಲ್ಲಿ ಶ್ರೀಮಂತರ ಪರ ಸರ್ಕಾರ, ಸಮ್ಮಿಶ್ರ ಸರ್ಕಾರ ಜಾರಿಗೆ ತಂದಿದ್ದ ಅನೇಕ ಯೋಜನೆಗಳನ್ನು ರದ್ದುಗೊಳಿಸುವ ಮೂಲಕ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗುತ್ತಿದೆ’ ಎಂದರು.

ಶಾಸಕರಾದ ಅನಿಲ್‍ ಚಿಕ್ಕಮಾದ, ಬಸನಗೌಡ ದದ್ದಲ ಮತ್ತು ಮುಖಂಡ ಕೆ.ಕರಿಯಪ್ಪ ಮಾತನಾಡಿದರು.

ಮುಖಂಡರಾದ ಕೇಶವರಾವ್‍, ಅಯ್ಯಪ್ಪ ವಕೀಲ, ಪಿ.ವಾಸು, ಗಿರಿಜಯ್ಯಸ್ವಾಮಿ, ಮಂಜುನಾಥ, ಮಲ್ಲಯ್ಯ ಗೋರ್ಕಲ್‍ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT