ನಂತರ ನಡೆದ ಸಭೆಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ, ‘ಕಳೆದ ಎರಡು ಅವದಿಯಲ್ಲೂ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿಯು ಬಡವ, ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿದೆ. ಕಪ್ಪು ಹಣ ತರುತ್ತೇವೆ. ಯುವಕರಿಗೆ ಉದ್ಯೋಗ ಕೊಡುತ್ತೇವೆ. ಮಹಿಳಾ ಸಬಲೀಕರಣ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈ ಎಲ್ಲಾ ಭರವಸೆಗಳು ಹುಸಿಯಾಗಿವೆ’ ಎಂದು ದೂರಿದರು.