ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಭ್ಯರ್ಥಿ ಪರ ರಾಮಲಿಂಗಾರೆಡ್ಡಿ, ರೇವಣ್ಣ ಪ್ರಚಾರ

Last Updated 9 ಏಪ್ರಿಲ್ 2021, 15:28 IST
ಅಕ್ಷರ ಗಾತ್ರ

ಮುದಗಲ್: ಮಸ್ಕಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಪರ ಶಾಸಕ ರಾಮಲಿಂಗಾರೆಡ್ಡಿ ಮಾಜಿ ಸಚಿವ ಎಚ್.ಎಂ.ರೇವಣ್ ಅವರು ಪ್ರಚಾರ ನಡೆಸಿದರು.

ಪಟ್ಟಣ ಸಮೀಪದ ಮಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷದ ಆಡಳಿತ ಅವಧಿಯಲ್ಲಿ ಮಾಡಿದ ಜನಪರ ಯೋಜನೆಗಳು ನಮ್ಮ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಗೆಲುವಿಗೆ ಶ್ರೀರಕ್ಷೆಯಾಗುತ್ತದೆ. ಬಿಜೆಪಿಯವರು ಸೋಲಿನ ಭಯದಿಂದ ಮನೆ ಮನೆ ಹೋಗಿ ಮತದಾರರಿಗೆ ಹಣ ಹಂಚುತ್ತಿದ್ದಾರೆ. ಬಸನಗೌಡ ತುರ್ವಿಹಾಳ ಶಾಸಕರಾಗುವುದು ಬಹುತೇಕ ಖಚಿತ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳು ನೀಡುತ್ತಿದ್ದು, ಮಸ್ಕಿ ವಿಧಾನಸಭಾ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದರು.

ಲಿಂಗಸುಗೂರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಭೂಪನಗೌಡ , ಮುಖಂಡ ಶರಣಪ್ಪ ಮೇಟಿ, ಹನುಮಂತಪ್ಪ ಕಂದಗಲ್, ಹೂನೂರು ಗ್ರಾಮ ಪಂಚಾಯಿತಿ ಸದಸ್ಯ ಆದಪ್ಪ ಬ್ಯಾಲಿಹಾಳ, ಮಟ್ಟೂರು ಗ್ರಾಮಸ್ಥರಾದ ಬಸವಂತಪ್ಪ, ಮಾನಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT