ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಸದಾಶಿವ ಆಯೋಗದ ವರದಿ ಜಾರಿಗೆ ಎರಡು ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಕಳೆದ ಬಾರಿ ಅಧಿಕಾರದಲ್ಲಿದ್ದ ಬಿಜೆಪಿ ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ತರುವುದಾಗಿ ಹೇಳಿತ್ತು. ಆದರೆ, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೂ ವರದಿ ಜಾರಿಗೆ ಮುಂದಾಗದೇ ಸಮುದಾಯದ ಜನರನ್ನು ಮತ ಬ್ಯಾಂಕ್ಗಳನ್ನಾಗಿ ಮಾಡಿಕೊಳ್ಳಲು ಹೋರಟಿದೆ’ ಎಂದು ಆರೋಪಿಸಿದರು.