<p><strong>ಮಸ್ಕಿ</strong>: ‘ಸರ್ಕಾರ ವಿವಿಧ ಇಲಾಖೆಗಳ ಮೂಲಕ ಬಡವರಿಗಾಗಿ ತಂದ ಯೋಜನೆಗಳನ್ನು ಅಧಿಕಾರಿಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಯೋಜನೆಯ ಉದ್ದೇಶ ಸಾರ್ಥಕವಾಗುತ್ತದೆ’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ‘ಆದಿ ಕರ್ಮಯೋಗಿ’ ಅಭಿಯಾನದ ಅಡಿಯಲ್ಲಿ ಏರ್ಪಡಿಸಿದ್ದ ಎರಡು ದಿನಗಳ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಈ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 243 ಗ್ರಾಮಗಳು ಆಯ್ಕೆಯಾಗಿವೆ. ಅದರಲ್ಲಿ ಮಸ್ಕಿ ಕ್ಷೇತ್ರಕ್ಕೆ 100 ಗ್ರಾಮಗಳು ಸೇರಿವೆ’ ಎಂದರು. </p>.<p>‘ಹಿಂದುಳಿದ ಗ್ರಾಮಗಳು ಅಭಿವೃದ್ಧಿಯಾಗಬೇಕು. ಆದ್ದರಿಂದ ಪ್ರತಿಯೊಂದು ಹಳ್ಳಿಗಳಲ್ಲಿ ಸಮಸ್ಯೆಗಳನ್ನು ನೋಡಿ ಉತ್ತಮ ವ್ಯವಸ್ಥೆ ಆದಾಗ ಮಾತ್ರ ಹಳ್ಳಿಗಳು ಸುಧಾರಣೆಯಾಗಲು ಸಾಧ್ಯ’ ಎಂದು ಹೇಳಿದರು.</p>.<p>‘ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿದಾಗ ಮಾತ್ರ ಯೋಜನೆಗಳು ಸಮರ್ಪಕವಾಗಿ ಮುಟ್ಟಲು ಸಾಧ್ಯವಾಗುತ್ತದೆ. ಪ್ರತಿಯೊಂದರ ಸರ್ವೆ ಕಾರ್ಯ ನಡೆಸಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಟಿ.ರೋಣಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ ಸೇರಿ ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.</p>.<p>ಎರಡು ದಿನಗಳ ನಡೆದ ತರಬೇತಿಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ 200ಕ್ಕೂ ಹೆಚ್ಚು ಫಲಾನುಭವಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ‘ಸರ್ಕಾರ ವಿವಿಧ ಇಲಾಖೆಗಳ ಮೂಲಕ ಬಡವರಿಗಾಗಿ ತಂದ ಯೋಜನೆಗಳನ್ನು ಅಧಿಕಾರಿಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಯೋಜನೆಯ ಉದ್ದೇಶ ಸಾರ್ಥಕವಾಗುತ್ತದೆ’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ‘ಆದಿ ಕರ್ಮಯೋಗಿ’ ಅಭಿಯಾನದ ಅಡಿಯಲ್ಲಿ ಏರ್ಪಡಿಸಿದ್ದ ಎರಡು ದಿನಗಳ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಈ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 243 ಗ್ರಾಮಗಳು ಆಯ್ಕೆಯಾಗಿವೆ. ಅದರಲ್ಲಿ ಮಸ್ಕಿ ಕ್ಷೇತ್ರಕ್ಕೆ 100 ಗ್ರಾಮಗಳು ಸೇರಿವೆ’ ಎಂದರು. </p>.<p>‘ಹಿಂದುಳಿದ ಗ್ರಾಮಗಳು ಅಭಿವೃದ್ಧಿಯಾಗಬೇಕು. ಆದ್ದರಿಂದ ಪ್ರತಿಯೊಂದು ಹಳ್ಳಿಗಳಲ್ಲಿ ಸಮಸ್ಯೆಗಳನ್ನು ನೋಡಿ ಉತ್ತಮ ವ್ಯವಸ್ಥೆ ಆದಾಗ ಮಾತ್ರ ಹಳ್ಳಿಗಳು ಸುಧಾರಣೆಯಾಗಲು ಸಾಧ್ಯ’ ಎಂದು ಹೇಳಿದರು.</p>.<p>‘ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿದಾಗ ಮಾತ್ರ ಯೋಜನೆಗಳು ಸಮರ್ಪಕವಾಗಿ ಮುಟ್ಟಲು ಸಾಧ್ಯವಾಗುತ್ತದೆ. ಪ್ರತಿಯೊಂದರ ಸರ್ವೆ ಕಾರ್ಯ ನಡೆಸಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಟಿ.ರೋಣಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ ಸೇರಿ ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.</p>.<p>ಎರಡು ದಿನಗಳ ನಡೆದ ತರಬೇತಿಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ 200ಕ್ಕೂ ಹೆಚ್ಚು ಫಲಾನುಭವಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>