<p><strong>ಮಸ್ಕಿ:</strong> ಗೃಹಲಕ್ಷ್ಮೀ ಯೋಜನೆಯಡಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ 44 ಸಾವಿರ ಮಹಿಳೆಯರ ಖಾತೆಗೆ 24 ಕಂತುಗಳಲ್ಲಿ ಒಟ್ಟು ₹8.93 ಕೋಟಿ ಹಣ ಪಾವತಿಸಲಾಗಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಮೈಬುಸಾಬ ಮುದ್ದಾಪುರ ತಿಳಿಸಿದ್ದಾರೆ.</p>.<p>ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಫಲಾನುಭವಿಗಳಿಗೆ ಬಾಕಿ ಉಳಿದ ಮೂರು ಕಂತುಗಳ ಹಣವನ್ನು ಶೀಘ್ರ ಜಮಾ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಅನ್ನಭಾಗ್ಯ ಯೋಜನೆಯ ಅನುಷ್ಠಾನಕ್ಕಾಗಿ ಮುಂದಿನ ತಿಂಗಳಿನಿಂದ ಮಸ್ಕಿಯಲ್ಲಿ ಆಹಾರ ಇಲಾಖೆ ಕಚೇರಿ ಆರಂಭವಾಗಲಿದೆ. ಯುವನಿಧಿ ಯೋಜನೆಯಡಿ 1,977 ಪದವೀಧರರು ಹಾಗೂ 26 ಡಿಪ್ಲೋಮಾ ವಿದ್ಯಾರ್ಥಿಗಳು ಲಾಭ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಸ್ತ್ರೀಶಕ್ತಿ ಯೋಜನೆಯಡಿ ಕ್ಷೇತ್ರದಲ್ಲಿ 1.42 ಲಕ್ಷ ಮಹಿಳೆಯರು ಉಚಿತ ಸಾರಿಗೆ ಸೌಲಭ್ಯ ಪಡೆದಿದ್ದು, ಅದರಿಂದ ಸಾರಿಗೆ ಇಲಾಖೆಗೆ ₹58.69 ಕೋಟಿ ಆದಾಯ ಲಭಿಸಿದೆ. ಈಗಾಗಲೇ ಶೇ 70ರಷ್ಟು ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗೆ ಭರಿಸಿದೆ. ಉಳಿದ ಶೇ 30ರಷ್ಟು ಹಣವನ್ನು ಶೀಘ್ರದಲ್ಲೇ ಜಮಾ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಗೃಹಜ್ಯೋತಿ ಯೋಜನೆಯಡಿ 18,588 ಫಲಾನುಭವಿಗಳು ಲಾಭ ಪಡೆದಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಯಶಸ್ವಿಯಾಗಲು ಅಧಿಕಾರಿಗಳ ಸಹಕಾರ ಅಗತ್ಯ’ ಎಂದರು. </p>.<p>ತಾ.ಪಂ ಸಹಾಯಕ ನಿರ್ದೇಶಕ ಸೋಮನಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ಯಾರಂಟಿ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ಗೃಹಲಕ್ಷ್ಮೀ ಯೋಜನೆಯಡಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ 44 ಸಾವಿರ ಮಹಿಳೆಯರ ಖಾತೆಗೆ 24 ಕಂತುಗಳಲ್ಲಿ ಒಟ್ಟು ₹8.93 ಕೋಟಿ ಹಣ ಪಾವತಿಸಲಾಗಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಮೈಬುಸಾಬ ಮುದ್ದಾಪುರ ತಿಳಿಸಿದ್ದಾರೆ.</p>.<p>ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಫಲಾನುಭವಿಗಳಿಗೆ ಬಾಕಿ ಉಳಿದ ಮೂರು ಕಂತುಗಳ ಹಣವನ್ನು ಶೀಘ್ರ ಜಮಾ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಅನ್ನಭಾಗ್ಯ ಯೋಜನೆಯ ಅನುಷ್ಠಾನಕ್ಕಾಗಿ ಮುಂದಿನ ತಿಂಗಳಿನಿಂದ ಮಸ್ಕಿಯಲ್ಲಿ ಆಹಾರ ಇಲಾಖೆ ಕಚೇರಿ ಆರಂಭವಾಗಲಿದೆ. ಯುವನಿಧಿ ಯೋಜನೆಯಡಿ 1,977 ಪದವೀಧರರು ಹಾಗೂ 26 ಡಿಪ್ಲೋಮಾ ವಿದ್ಯಾರ್ಥಿಗಳು ಲಾಭ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಸ್ತ್ರೀಶಕ್ತಿ ಯೋಜನೆಯಡಿ ಕ್ಷೇತ್ರದಲ್ಲಿ 1.42 ಲಕ್ಷ ಮಹಿಳೆಯರು ಉಚಿತ ಸಾರಿಗೆ ಸೌಲಭ್ಯ ಪಡೆದಿದ್ದು, ಅದರಿಂದ ಸಾರಿಗೆ ಇಲಾಖೆಗೆ ₹58.69 ಕೋಟಿ ಆದಾಯ ಲಭಿಸಿದೆ. ಈಗಾಗಲೇ ಶೇ 70ರಷ್ಟು ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗೆ ಭರಿಸಿದೆ. ಉಳಿದ ಶೇ 30ರಷ್ಟು ಹಣವನ್ನು ಶೀಘ್ರದಲ್ಲೇ ಜಮಾ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಗೃಹಜ್ಯೋತಿ ಯೋಜನೆಯಡಿ 18,588 ಫಲಾನುಭವಿಗಳು ಲಾಭ ಪಡೆದಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಯಶಸ್ವಿಯಾಗಲು ಅಧಿಕಾರಿಗಳ ಸಹಕಾರ ಅಗತ್ಯ’ ಎಂದರು. </p>.<p>ತಾ.ಪಂ ಸಹಾಯಕ ನಿರ್ದೇಶಕ ಸೋಮನಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ಯಾರಂಟಿ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>