ಶ್ರಾವಣಮಾಸದ ಒಂದು ತಿಂಗಳು ಮಸ್ಕಿ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಭಕ್ತರು ಕಾಲ್ನಡೆಗೆಯಲ್ಲಿ ಬೆಟ್ಟ ಹತ್ತಿ ಮಲ್ಲಿಕಾರ್ಜುನನ ದರ್ಶನ ಪಡೆಯುತ್ತಾರೆ. ಶ್ರಾವಣಮಾಸ ಮುನ್ನದಿನವಾದ ಭೀಮನ ಅಮವಾಸೆಯಾಗಿದ್ದರಿಂದ ಬೆಳಿಗ್ಗೆ 5 ಗಂಟೆಯಿಂದಲೇ ಬರುತ್ತಿದ್ದ ಭಕ್ತರಿಗೆ ಪ್ರವೇಶ ದ್ವಾರಗಳನ್ನು ಬಂದ್ ಮಾಡಲಾಗಿತ್ತು.