<p><strong>ಮಸ್ಕಿ:</strong> ನೆತ್ತಿಸುಡುವ ಬಿಸಿಲಿನ ತಾಪದ ನಡುವೆಯೂ ಪಟ್ಟಣದ ನರಸನಗೌಡ ಸ್ಮಾರಕ ಆಂಗ್ಲ ಮಾಧ್ಯಮ ಶಾಲಾ ಆವರಣದ ತುಂಪು ನೀಡುವ ಮರಗಳ ನೆರಳಿನಲ್ಲಿ ನಡೆಯುತ್ತಿರುವ ಹತ್ತು ದಿನಗಳ ಮಕ್ಕಳ ಬೇಸಿಗೆ ಶಿಬಿರ ‘ರಂಗ ಸಂಭ್ರಮ’ ಎಲ್ಲರ ಗಮನ ಸೆಳೆಯುತ್ತಿದೆ.</p>.<p>ಕನ್ನಡ ಸಾಹಿತ್ಯ ಪರಿಷತ್ತು, ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ನರಸನಗೌಡ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ. ಪಟ್ಟಣದ ವಿವಿಧ ಶಾಲೆಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುತ್ತಿದ್ದು, ಶಿಬಿರವು ಮಕ್ಕಳಿಗೆ ಸೃಜನಾತ್ಮಕ ಚಟುವಟಿಕೆಗಳ ಮೂಲಕ ಹೊಸ ಅನುಭವಗಳನ್ನು ನೀಡುತ್ತಿದೆ.</p>.<p>ಶಿಬಿರದಲ್ಲಿ ನಾಟಕ, ಸಂಗೀತ, ನೃತ್ಯ, ಚಿತ್ರಕಲೆ, ದೇಶಿಯ ಆಟಗಳು ಸೇರಿದಂತೆ ವಿವಿಧ ಕಲಾ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಮಕ್ಕಳು ತಮ್ಮ ಪ್ರತಿಭೆಯನ್ನು ಹೊರಹಾಕುವ ಅವಕಾಶ ಪಡೆಯುತ್ತಿದ್ದಾರೆ. ತರಬೇತುದಾರರು ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿದ್ದು, ಅವರಲ್ಲಿನ ಸೃಜನಶೀಲತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತಿದೆ.</p>.<p>ಪೋಷಕರು ಹಾಗೂ ಸ್ಥಳೀಯರು ಕೂಡ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಸಹಾಯಕವಾಗುತ್ತವೆ ಎಂಬ ಅಭಿಪ್ರಾಯವನ್ನು ಪಾಲಕರು ವ್ಯಕ್ತಪಡಿಸಿದ್ದಾರೆ.</p>.<p><strong>ಬಿಇಒರಿಂದ ಹಾಡು-ನೃತ್ಯ ರಂಜನೆ</strong></p><p>ನರಸನಗೌಡ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ‘ರಂಗ ಸಂಭ್ರಮ’ ಶಿಬಿರಕ್ಕೆ ಮಂಗಳವಾರ ಲಿಂಗಸುಗೂರು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೊನೂರು ಭೇಟಿ ನೀಡಿ ಮಕ್ಕಳೊಂದಿಗೆ ನೃತ್ಯಮಾಡಿ ಹಾಡು ಹೇಳಿಸಿ ರಂಜಿಸಿದರು.</p><p>ಅವರ ಜತೆ ಮಕ್ಕಳು ಸಹ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಇನ್ನಷ್ಟು ಕಳೆ ತಂದರು. ಬೇಸಿಗೆಯಲ್ಲಿನ ಈ ಶಿಬಿರ ಮಕ್ಕಳ ಮಕ್ಕಳ ಉತ್ಸಾಹವನ್ನು ಇಮ್ಮುಡಿಗೊಳಿಸಿದೆ. ಶಿಬಿರ ಆಯೋಜನೆ ಮಾಡಿದ ಸಂಘಟನೆಗಳಿಗೆ ಶಿಕ್ಷಣ ಇಲಾಖೆ ಅಭಿನಂದಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೊನೂರು ಹೇಳಿದರು.</p>.<div><blockquote>ಇಂತಹ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ. ಕಲೆಯ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಾಸ ಸಾಧ್ಯ. </blockquote><span class="attribution">–ಮಹಾಂತೇಸ ಮಸ್ಕಿ, ಉಪನ್ಯಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ನೆತ್ತಿಸುಡುವ ಬಿಸಿಲಿನ ತಾಪದ ನಡುವೆಯೂ ಪಟ್ಟಣದ ನರಸನಗೌಡ ಸ್ಮಾರಕ ಆಂಗ್ಲ ಮಾಧ್ಯಮ ಶಾಲಾ ಆವರಣದ ತುಂಪು ನೀಡುವ ಮರಗಳ ನೆರಳಿನಲ್ಲಿ ನಡೆಯುತ್ತಿರುವ ಹತ್ತು ದಿನಗಳ ಮಕ್ಕಳ ಬೇಸಿಗೆ ಶಿಬಿರ ‘ರಂಗ ಸಂಭ್ರಮ’ ಎಲ್ಲರ ಗಮನ ಸೆಳೆಯುತ್ತಿದೆ.</p>.<p>ಕನ್ನಡ ಸಾಹಿತ್ಯ ಪರಿಷತ್ತು, ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ನರಸನಗೌಡ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ. ಪಟ್ಟಣದ ವಿವಿಧ ಶಾಲೆಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುತ್ತಿದ್ದು, ಶಿಬಿರವು ಮಕ್ಕಳಿಗೆ ಸೃಜನಾತ್ಮಕ ಚಟುವಟಿಕೆಗಳ ಮೂಲಕ ಹೊಸ ಅನುಭವಗಳನ್ನು ನೀಡುತ್ತಿದೆ.</p>.<p>ಶಿಬಿರದಲ್ಲಿ ನಾಟಕ, ಸಂಗೀತ, ನೃತ್ಯ, ಚಿತ್ರಕಲೆ, ದೇಶಿಯ ಆಟಗಳು ಸೇರಿದಂತೆ ವಿವಿಧ ಕಲಾ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಮಕ್ಕಳು ತಮ್ಮ ಪ್ರತಿಭೆಯನ್ನು ಹೊರಹಾಕುವ ಅವಕಾಶ ಪಡೆಯುತ್ತಿದ್ದಾರೆ. ತರಬೇತುದಾರರು ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿದ್ದು, ಅವರಲ್ಲಿನ ಸೃಜನಶೀಲತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತಿದೆ.</p>.<p>ಪೋಷಕರು ಹಾಗೂ ಸ್ಥಳೀಯರು ಕೂಡ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಸಹಾಯಕವಾಗುತ್ತವೆ ಎಂಬ ಅಭಿಪ್ರಾಯವನ್ನು ಪಾಲಕರು ವ್ಯಕ್ತಪಡಿಸಿದ್ದಾರೆ.</p>.<p><strong>ಬಿಇಒರಿಂದ ಹಾಡು-ನೃತ್ಯ ರಂಜನೆ</strong></p><p>ನರಸನಗೌಡ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ‘ರಂಗ ಸಂಭ್ರಮ’ ಶಿಬಿರಕ್ಕೆ ಮಂಗಳವಾರ ಲಿಂಗಸುಗೂರು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೊನೂರು ಭೇಟಿ ನೀಡಿ ಮಕ್ಕಳೊಂದಿಗೆ ನೃತ್ಯಮಾಡಿ ಹಾಡು ಹೇಳಿಸಿ ರಂಜಿಸಿದರು.</p><p>ಅವರ ಜತೆ ಮಕ್ಕಳು ಸಹ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಇನ್ನಷ್ಟು ಕಳೆ ತಂದರು. ಬೇಸಿಗೆಯಲ್ಲಿನ ಈ ಶಿಬಿರ ಮಕ್ಕಳ ಮಕ್ಕಳ ಉತ್ಸಾಹವನ್ನು ಇಮ್ಮುಡಿಗೊಳಿಸಿದೆ. ಶಿಬಿರ ಆಯೋಜನೆ ಮಾಡಿದ ಸಂಘಟನೆಗಳಿಗೆ ಶಿಕ್ಷಣ ಇಲಾಖೆ ಅಭಿನಂದಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೊನೂರು ಹೇಳಿದರು.</p>.<div><blockquote>ಇಂತಹ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ. ಕಲೆಯ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಾಸ ಸಾಧ್ಯ. </blockquote><span class="attribution">–ಮಹಾಂತೇಸ ಮಸ್ಕಿ, ಉಪನ್ಯಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>