ಮಸ್ಕಿ (ರಾಯಚೂರು ಜಿಲ್ಲೆ): ಕಬ್ಬಿಣದ ಸರಳು ತುಂಬಿದ್ದಲಾರಿ ಮಗುಚಿಅದರ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಅಂತರಗಂಗಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಮೃತ ಚಾಲಕ ಮುದಗಲ್ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಹೆಸರು ತಿಳಿದು ಬಂದಿಲ್ಲ.
ಬೆಳಗಾವಿಯಿಂದ ಬಳ್ಳಾರಿ ಕಡೆಗೆ ಲಾರಿ ಹೊರಟಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿ ಸಬ್ ಇನ್ಸ್ಪೆಕ್ಟರ್ ಸಿದ್ಧರಾಮ ಬಿದರಾಣಿ ಮತ್ತು ಪೋಲಿಸರು ಎರಡು ಜೆಸಿಬಿ ಯಂತ್ರಗಳ ಸಹಾಯದಿಂದ ಲಾರಿಯ ಅಡಿಯಲ್ಲಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ.