<p><strong>ಕವಿತಾಳ:</strong> ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪದೂರು ಗ್ರಾಮವು ಕುಡಿಯುವ ನೀರು, ಚರಂಡಿ, ರಸ್ತೆ, ಶೌಚಾಲಯ ಮತ್ತು ಬಸ್ ವ್ಯವಸ್ಥೆ ಸೇರಿದಂತೆ ಹಲವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.</p>.<p>ಅಂದಾಜು 1500 ಜನಸಂಖ್ಯೆ, 800 ಮತದಾರರನ್ನು ಒಳಗೊಂಡ ಗ್ರಾಮದಲ್ಲಿ ಹಲವರಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಇದುವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ಬಯಲು ಶೌಚಾಲಯ ವ್ಯವಸ್ಥೆ ಮುಂದುವರೆದಿದೆ.</p>.<p>ಶುದ್ಧೀಕರಣ ಘಟಕ ಇಲ್ಲದ ಕಾರಣ ಫ್ಲೋರೈಡ್ ಯಕ್ತ ಕೊಳವೆಬಾವಿ ನೀರು ಕುಡಿಯುವುದು ಜನರಿಗೆ ಅನಿವಾರ್ಯವಾಗಿದೆ. ಶುದ್ಧ ಕುಡಿಯುವ ನೀರು ಬೇಕೆಂದರೆ 1 .ಕಿ.ಮೀ. ದೂರದ ಹರ್ವಾಪುರ ಗ್ರಾಮಕ್ಕೆ ಹೋಗಬೇಕು. ದಶಕದ ಹಿಂದೆ ಕೆಲವು ಓಣಿಗಳಲ್ಲಿ ನಿರ್ಮಿಸಿದ್ದ ಚರಂಡಿ ಬಹುತೇಕ ಕಿತ್ತು ಹೋಗಿದ್ದು ಬಚ್ಚಲು ಮತ್ತು ಬಟ್ಟೆ ತೊಳೆದ ನೀರು ರಸ್ತೆ ಮೇಲೆ ಹರಿದು ಗಲೀಜು ಉಂಟಾಗುತ್ತಿದೆ.</p>.<p>ಜನತಾ ಓಣಿಯಲ್ಲಿ ರಸ್ತೆ ಹದಗೆಟ್ಟಿದ್ದು ಸ್ವಲ್ಪ ಮಳೆಯಾದರೂ ಸಾಕು ರಸ್ತೆ ಗದ್ಧೆಯಂತಾಗುತ್ತದೆ. ಕೆಸರಿನಲ್ಲಿಯೇ ತಿರುಗಾಡ ಬೇಕಾದಂತಹ ಪರಿಸ್ಥಿತಿ ಇದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಶಾಲಾ ಕಾಲೇಜುಗಳಿಗೆ ಪಟ್ಟಣಗಳಿಗೆ ಹೋಗುವ ವಿದ್ಯಾರ್ಥಿಗಳು ಪಾಮನಕಲ್ಲೂರು ವರೆಗೆ ಬರಲು ಟಂ ಟಂ ವಾಹನ ಅವಲಂಬಿಸಿದ್ದಾರೆ. ಅದೇ ರೀತಿ ಆಸ್ಪತ್ರೆ ಮತ್ತಿತರ ತುರ್ತು ಸಂದರ್ಭಗಳಲ್ಲಿ ಗ್ರಾಮದ ಜನತೆಗೆ ಟಂಟಂ ವಾಹನ ಅಥವಾ ಬೈಕ್ ಆಸರೆಯಾಗಿದೆ.</p>.<p>ಈಚೆಗೆ ಸುರಿದ ಮಳೆಯಿಂದ ರಸ್ತೆ ಸಂಪೂರ್ಣ ಕೆಸರಾಗಿದ್ದು ಬೈಕ್ ಸವಾರರು, ಮಕ್ಕಳು, ವೃದ್ಧರು ಓಡಾಡಲು ಪರದಾಡುತ್ತಿದ್ದಾರೆ ಎಂದು ಗ್ರಾಮದ ಹನುಮಂತ ಹೇಳುತ್ತಾರೆ.</p>.<p>ಕಾಂಕ್ರೀಟ್ ರಸ್ತೆ, ಚರಂಡಿ, ನಿರ್ಮಾಣ, ಕುಡಿಯುವ ನೀರಿನ ಶುದ್ಧೀಕರಣ ಘಟಕ ಸ್ಥಾಪನೆ, ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ನೀಡುವುದು ಮತ್ತು ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪದೂರು ಗ್ರಾಮವು ಕುಡಿಯುವ ನೀರು, ಚರಂಡಿ, ರಸ್ತೆ, ಶೌಚಾಲಯ ಮತ್ತು ಬಸ್ ವ್ಯವಸ್ಥೆ ಸೇರಿದಂತೆ ಹಲವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.</p>.<p>ಅಂದಾಜು 1500 ಜನಸಂಖ್ಯೆ, 800 ಮತದಾರರನ್ನು ಒಳಗೊಂಡ ಗ್ರಾಮದಲ್ಲಿ ಹಲವರಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಇದುವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ಬಯಲು ಶೌಚಾಲಯ ವ್ಯವಸ್ಥೆ ಮುಂದುವರೆದಿದೆ.</p>.<p>ಶುದ್ಧೀಕರಣ ಘಟಕ ಇಲ್ಲದ ಕಾರಣ ಫ್ಲೋರೈಡ್ ಯಕ್ತ ಕೊಳವೆಬಾವಿ ನೀರು ಕುಡಿಯುವುದು ಜನರಿಗೆ ಅನಿವಾರ್ಯವಾಗಿದೆ. ಶುದ್ಧ ಕುಡಿಯುವ ನೀರು ಬೇಕೆಂದರೆ 1 .ಕಿ.ಮೀ. ದೂರದ ಹರ್ವಾಪುರ ಗ್ರಾಮಕ್ಕೆ ಹೋಗಬೇಕು. ದಶಕದ ಹಿಂದೆ ಕೆಲವು ಓಣಿಗಳಲ್ಲಿ ನಿರ್ಮಿಸಿದ್ದ ಚರಂಡಿ ಬಹುತೇಕ ಕಿತ್ತು ಹೋಗಿದ್ದು ಬಚ್ಚಲು ಮತ್ತು ಬಟ್ಟೆ ತೊಳೆದ ನೀರು ರಸ್ತೆ ಮೇಲೆ ಹರಿದು ಗಲೀಜು ಉಂಟಾಗುತ್ತಿದೆ.</p>.<p>ಜನತಾ ಓಣಿಯಲ್ಲಿ ರಸ್ತೆ ಹದಗೆಟ್ಟಿದ್ದು ಸ್ವಲ್ಪ ಮಳೆಯಾದರೂ ಸಾಕು ರಸ್ತೆ ಗದ್ಧೆಯಂತಾಗುತ್ತದೆ. ಕೆಸರಿನಲ್ಲಿಯೇ ತಿರುಗಾಡ ಬೇಕಾದಂತಹ ಪರಿಸ್ಥಿತಿ ಇದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಶಾಲಾ ಕಾಲೇಜುಗಳಿಗೆ ಪಟ್ಟಣಗಳಿಗೆ ಹೋಗುವ ವಿದ್ಯಾರ್ಥಿಗಳು ಪಾಮನಕಲ್ಲೂರು ವರೆಗೆ ಬರಲು ಟಂ ಟಂ ವಾಹನ ಅವಲಂಬಿಸಿದ್ದಾರೆ. ಅದೇ ರೀತಿ ಆಸ್ಪತ್ರೆ ಮತ್ತಿತರ ತುರ್ತು ಸಂದರ್ಭಗಳಲ್ಲಿ ಗ್ರಾಮದ ಜನತೆಗೆ ಟಂಟಂ ವಾಹನ ಅಥವಾ ಬೈಕ್ ಆಸರೆಯಾಗಿದೆ.</p>.<p>ಈಚೆಗೆ ಸುರಿದ ಮಳೆಯಿಂದ ರಸ್ತೆ ಸಂಪೂರ್ಣ ಕೆಸರಾಗಿದ್ದು ಬೈಕ್ ಸವಾರರು, ಮಕ್ಕಳು, ವೃದ್ಧರು ಓಡಾಡಲು ಪರದಾಡುತ್ತಿದ್ದಾರೆ ಎಂದು ಗ್ರಾಮದ ಹನುಮಂತ ಹೇಳುತ್ತಾರೆ.</p>.<p>ಕಾಂಕ್ರೀಟ್ ರಸ್ತೆ, ಚರಂಡಿ, ನಿರ್ಮಾಣ, ಕುಡಿಯುವ ನೀರಿನ ಶುದ್ಧೀಕರಣ ಘಟಕ ಸ್ಥಾಪನೆ, ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ನೀಡುವುದು ಮತ್ತು ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>