<p><strong>ಮಸ್ಕಿ</strong>: ಶವ ಪರೀಕ್ಷೆಗಾಗಿ ಪೊಲೀಸರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಭೂ ವಿವಾದ ನ್ಯಾಯಾಲಯದಲ್ಲಿರುವ ಕಾರಣ ಮಾಲೀಕರು ಆಸ್ಪತ್ರೆಯ ಕಟ್ಟಡ ಹೊರತುಪಡಿಸಿ ಆಸ್ಪತ್ರೆಯ ಖಾಲಿ ಜಾಗ ಹಾಗೂ ಶವಪರೀಕ್ಷೆ ನಡೆಸುವ ಕೊಠಡಿಯ ಸುತ್ತ ಕಳೆದ 15 ದಿನಗಳಿಂದ ತಂತಿ ಬೇಲಿ ಹಾಕಿದ ಕಾರಣ ಶವ ಪರೀಕ್ಷೆಗೆ ತೊಂದರೆಯಾಗಿದೆ.</p>.<p>ಎರಡು ದಿನಗಳಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಅವರ ಶವ ಪರೀಕ್ಷೆ ನಡೆಸಲು ಪೊಲೀಸರು ಹಾಗೂ ಕುಟುಂಬಸ್ಥರು ಪರದಾಡಬೇಕಾಯಿತು.</p>.<p>ಸೋಮವಾರ ತಡ ರಾತ್ರಿ ಮೃತಪಟ್ಟ ವ್ಯಕ್ತಿಯ ಶವವನ್ನು ಮಸ್ಕಿ ಆಸ್ಪತ್ರೆಗೆ ತಂದ ಪೊಲೀಸರು ಹಾಗೂ ಕುಟುಂಬ ಸದಸ್ಯರು ಶವ ಪರೀಕ್ಷಾ ಕೊಠಡಿಗೆ ತಂತಿ ಬೇಲಿ ಹಾಕಿದ್ದನ್ನು ಕಂಡು 28 ಕಿ.ಮೀ. ದೂರದ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ತೆರಳಿ ಶವ ಪರೀಕ್ಷೆ ಮಾಡಿಸಿದರು.</p>.<p>ಮಂಗಳವಾರ ಮಧ್ಯಾಹ್ನ ತಾಲ್ಲೂಕಿನ ಮೆದಿಕಿನಾಳ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನ ಶವವನ್ನು 25 ಕಿ.ಮೀ. ದೂರದ ಮುದಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆಗೆದುಕೊಂಡು ಹೋಗಿ ಶವ ಪರೀಕ್ಷೆ ಮಾಡಿಸಲಾಯಿತು.</p>.<p>ಈ ಭಾಗದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚಾಗುತ್ತಿವೆ. ಶವ ಪರೀಕ್ಷೆ ಮಾಡಿಸುವುದು ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಅಪಘಾತಗಳಲ್ಲಿ ಕುಟುಂಬದವರನ್ನು ಕಳೆದುಕೊಂಡ ಸಂಬಂಧಿಕರು ಶವ ಪರೀಕ್ಷೆಗಾಗಿ ದಿನಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಬಂದಿದೆ.</p>.<p>ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಧ್ಯ ಪ್ರವೇಶಿಸಿ ಆಸ್ಪತ್ರೆಯ ಭೂ ವಿವಾದ ಇತ್ಯರ್ಥಪಡಿಸಿ ತಂತಿ ಬೇಲಿ ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಶವ ಪರೀಕ್ಷೆಗಾಗಿ ಪೊಲೀಸರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಭೂ ವಿವಾದ ನ್ಯಾಯಾಲಯದಲ್ಲಿರುವ ಕಾರಣ ಮಾಲೀಕರು ಆಸ್ಪತ್ರೆಯ ಕಟ್ಟಡ ಹೊರತುಪಡಿಸಿ ಆಸ್ಪತ್ರೆಯ ಖಾಲಿ ಜಾಗ ಹಾಗೂ ಶವಪರೀಕ್ಷೆ ನಡೆಸುವ ಕೊಠಡಿಯ ಸುತ್ತ ಕಳೆದ 15 ದಿನಗಳಿಂದ ತಂತಿ ಬೇಲಿ ಹಾಕಿದ ಕಾರಣ ಶವ ಪರೀಕ್ಷೆಗೆ ತೊಂದರೆಯಾಗಿದೆ.</p>.<p>ಎರಡು ದಿನಗಳಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಅವರ ಶವ ಪರೀಕ್ಷೆ ನಡೆಸಲು ಪೊಲೀಸರು ಹಾಗೂ ಕುಟುಂಬಸ್ಥರು ಪರದಾಡಬೇಕಾಯಿತು.</p>.<p>ಸೋಮವಾರ ತಡ ರಾತ್ರಿ ಮೃತಪಟ್ಟ ವ್ಯಕ್ತಿಯ ಶವವನ್ನು ಮಸ್ಕಿ ಆಸ್ಪತ್ರೆಗೆ ತಂದ ಪೊಲೀಸರು ಹಾಗೂ ಕುಟುಂಬ ಸದಸ್ಯರು ಶವ ಪರೀಕ್ಷಾ ಕೊಠಡಿಗೆ ತಂತಿ ಬೇಲಿ ಹಾಕಿದ್ದನ್ನು ಕಂಡು 28 ಕಿ.ಮೀ. ದೂರದ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ತೆರಳಿ ಶವ ಪರೀಕ್ಷೆ ಮಾಡಿಸಿದರು.</p>.<p>ಮಂಗಳವಾರ ಮಧ್ಯಾಹ್ನ ತಾಲ್ಲೂಕಿನ ಮೆದಿಕಿನಾಳ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನ ಶವವನ್ನು 25 ಕಿ.ಮೀ. ದೂರದ ಮುದಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆಗೆದುಕೊಂಡು ಹೋಗಿ ಶವ ಪರೀಕ್ಷೆ ಮಾಡಿಸಲಾಯಿತು.</p>.<p>ಈ ಭಾಗದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚಾಗುತ್ತಿವೆ. ಶವ ಪರೀಕ್ಷೆ ಮಾಡಿಸುವುದು ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಅಪಘಾತಗಳಲ್ಲಿ ಕುಟುಂಬದವರನ್ನು ಕಳೆದುಕೊಂಡ ಸಂಬಂಧಿಕರು ಶವ ಪರೀಕ್ಷೆಗಾಗಿ ದಿನಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಬಂದಿದೆ.</p>.<p>ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಧ್ಯ ಪ್ರವೇಶಿಸಿ ಆಸ್ಪತ್ರೆಯ ಭೂ ವಿವಾದ ಇತ್ಯರ್ಥಪಡಿಸಿ ತಂತಿ ಬೇಲಿ ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>