<p><strong>ಮಸ್ಕಿ:</strong> ‘ದೀಪಾವಳಿ ಬೆಳಕು ಮತ್ತು ಜ್ಞಾನದ ಹಬ್ಬವಾಗಬೇಕೇ ಹೊರೆತು ಪರಿಸರ ಮಾಲಿನ್ಯ ಉಂಟುಮಾಡುವ ಹಬ್ಬವಾಗಬಾರದು’ ಎಂದು ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಅಭಿಪ್ರಾಯಪಟ್ಟರು.</p>.<p>ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ‘ಸ್ವಚ್ಛ ದೀಪಾವಳಿ– ಶುಭ ದೀಪಾವಳಿ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದೀಪಾವಳಿಯನ್ನು ಪರಿಸರ ಸ್ನೇಹಿ ಹಬ್ಬವನ್ನಾಗಿ ಆಚರಿಸಬೇಕು. ಶಬ್ದ, ಬೆಳಕು, ವಾಯು, ಜಲ ಮಾಲಿನ್ಯವಾಗದ ಪಟಾಕಿಗಳನ್ನೇ ಬಳಸಿ’ ಎಂದು ಕರೆ ನೀಡಿದರು.</p>.<p>‘ಹಾನಿಕಾರಕ ಪಟಾಕಿಗಳ ಬಳಕೆ ಸಲ್ಲದು. ಸರ್ಕಾರ ಸೂಚಿಸಿದ ಹಸಿರು ಪಟಾಕಿಗಳನ್ನೇ ಬಳಸಬೇಕು. ಪಟಾಕಿ ಬಳಸುವಾಗ ಯಾವುದೇ ಜೀವಿಯ ದೇಹಕ್ಕೆ, ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗದಂತೆ ಕಟ್ಟೆಚ್ಚರ ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪುರಸಭೆ ಆವರಣದಲ್ಲಿ ಸೆಲ್ಫಿ ಬೋರ್ಡ್ ಅಳವಡಿಸಲಾಗಿತ್ತು. ಸಹಿ ಅಭಿಯಾನವನ್ನೂ ನಡೆಸಲಾಯಿತು. ಸಿಬ್ಬಂದಿ ಸೆಲ್ಫಿ ಬೋರ್ಡ್ನಲ್ಲಿ ಚಿತ್ರ ತೆಗೆಸಿಕೊಂಡು ಪರಿಸರಸ್ನೇಹಿ ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಿದರು.</p>.<p>ಪುರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ‘ದೀಪಾವಳಿ ಬೆಳಕು ಮತ್ತು ಜ್ಞಾನದ ಹಬ್ಬವಾಗಬೇಕೇ ಹೊರೆತು ಪರಿಸರ ಮಾಲಿನ್ಯ ಉಂಟುಮಾಡುವ ಹಬ್ಬವಾಗಬಾರದು’ ಎಂದು ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಅಭಿಪ್ರಾಯಪಟ್ಟರು.</p>.<p>ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ‘ಸ್ವಚ್ಛ ದೀಪಾವಳಿ– ಶುಭ ದೀಪಾವಳಿ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದೀಪಾವಳಿಯನ್ನು ಪರಿಸರ ಸ್ನೇಹಿ ಹಬ್ಬವನ್ನಾಗಿ ಆಚರಿಸಬೇಕು. ಶಬ್ದ, ಬೆಳಕು, ವಾಯು, ಜಲ ಮಾಲಿನ್ಯವಾಗದ ಪಟಾಕಿಗಳನ್ನೇ ಬಳಸಿ’ ಎಂದು ಕರೆ ನೀಡಿದರು.</p>.<p>‘ಹಾನಿಕಾರಕ ಪಟಾಕಿಗಳ ಬಳಕೆ ಸಲ್ಲದು. ಸರ್ಕಾರ ಸೂಚಿಸಿದ ಹಸಿರು ಪಟಾಕಿಗಳನ್ನೇ ಬಳಸಬೇಕು. ಪಟಾಕಿ ಬಳಸುವಾಗ ಯಾವುದೇ ಜೀವಿಯ ದೇಹಕ್ಕೆ, ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗದಂತೆ ಕಟ್ಟೆಚ್ಚರ ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪುರಸಭೆ ಆವರಣದಲ್ಲಿ ಸೆಲ್ಫಿ ಬೋರ್ಡ್ ಅಳವಡಿಸಲಾಗಿತ್ತು. ಸಹಿ ಅಭಿಯಾನವನ್ನೂ ನಡೆಸಲಾಯಿತು. ಸಿಬ್ಬಂದಿ ಸೆಲ್ಫಿ ಬೋರ್ಡ್ನಲ್ಲಿ ಚಿತ್ರ ತೆಗೆಸಿಕೊಂಡು ಪರಿಸರಸ್ನೇಹಿ ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಿದರು.</p>.<p>ಪುರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>