<p><strong>ಮಾನ್ವಿ (ರಾಯಚೂರು ಜಿಲ್ಲೆ):</strong> ಪಟ್ಟಣದ ಅಕ್ಬರಿ ಮಸೀದಿಯಲ್ಲಿ ಭಾನುವಾರ ಪ್ರಥಮ ದರ್ಜೆ ಸಿವಿಲ್ ಗುತ್ತಿಗೆದಾರ ಸೈಯದ್ ಅಕ್ಬರ್ ಪಾಷಾ ಅವರು ತಮ್ಮ ಪುತ್ರನ ಮದುವೆ ಅಂಗವಾಗಿ ದಾರುಸ್ಸಲಾಂ ಫೌಂಡೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಮದುವೆಯಲ್ಲಿ ಮುಸ್ಲಿಂ ಸಮುದಾಯದ 121 ಜೋಡಿಗಳು ದಾಂಪತ್ಯಕ್ಕೆ ಪದಾರ್ಪಣೆ ಮಾಡಿದವು.</p>.<p>ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಮುಸ್ಲಿಂ ಸಮುದಾಯದ ಅತೀ ಹೆಚ್ಚಿನ ಸಂಖ್ಯೆಯ ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.</p>.<p>ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಯ ಮುಸ್ಲಿಂ ವಧು–ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು.</p>.<p>ಮದುವೆ ಕಾರ್ಯದಲ್ಲಿ ಟ್ರಸ್ಟ್ ವತಿಯಿಂದ ಎಲ್ಲ ನವ ವಧುಗಳಿಗೆ ತಲಾ 2 ಜೊತೆ ಸೀರೆ, ವರರಿಗೆ ಜುಬ್ಬಾ, ಪೈಜಾಮ, ಜಾಕೆಟ್ ಹಾಗೂ ಟೋಪಿ, ಮನೆಗೆ ಅಲ್ಮೇರಾ, ಪಲ್ಲಂಗ, ಗಾದಿ ಹಾಗೂ ಹೊದಿಕೆಗಳು, ದಿನಬಳಕೆಯ ಪಾತ್ರೆಗಳನ್ನು ಉಡುಗೊರೆಯಾಗಿ ನೀಡಲಾಯಿತು.</p>.<p>ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಸತೀಶ ಜಾರಕಿಹೊಳಿ, ಎನ್.ಎಸ್. ಬೋಸರಾಜು, ಶಾಸಕರಾದ ಜಿ.ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ವಿಜಯಾನಂದ ಕಾಶಪ್ಪನವರ ಸೇರಿದಂತೆ ಹಲವಾರು ಗಣ್ಯರು, ಧರ್ಮಗುರುಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ (ರಾಯಚೂರು ಜಿಲ್ಲೆ):</strong> ಪಟ್ಟಣದ ಅಕ್ಬರಿ ಮಸೀದಿಯಲ್ಲಿ ಭಾನುವಾರ ಪ್ರಥಮ ದರ್ಜೆ ಸಿವಿಲ್ ಗುತ್ತಿಗೆದಾರ ಸೈಯದ್ ಅಕ್ಬರ್ ಪಾಷಾ ಅವರು ತಮ್ಮ ಪುತ್ರನ ಮದುವೆ ಅಂಗವಾಗಿ ದಾರುಸ್ಸಲಾಂ ಫೌಂಡೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಮದುವೆಯಲ್ಲಿ ಮುಸ್ಲಿಂ ಸಮುದಾಯದ 121 ಜೋಡಿಗಳು ದಾಂಪತ್ಯಕ್ಕೆ ಪದಾರ್ಪಣೆ ಮಾಡಿದವು.</p>.<p>ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಮುಸ್ಲಿಂ ಸಮುದಾಯದ ಅತೀ ಹೆಚ್ಚಿನ ಸಂಖ್ಯೆಯ ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.</p>.<p>ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಯ ಮುಸ್ಲಿಂ ವಧು–ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು.</p>.<p>ಮದುವೆ ಕಾರ್ಯದಲ್ಲಿ ಟ್ರಸ್ಟ್ ವತಿಯಿಂದ ಎಲ್ಲ ನವ ವಧುಗಳಿಗೆ ತಲಾ 2 ಜೊತೆ ಸೀರೆ, ವರರಿಗೆ ಜುಬ್ಬಾ, ಪೈಜಾಮ, ಜಾಕೆಟ್ ಹಾಗೂ ಟೋಪಿ, ಮನೆಗೆ ಅಲ್ಮೇರಾ, ಪಲ್ಲಂಗ, ಗಾದಿ ಹಾಗೂ ಹೊದಿಕೆಗಳು, ದಿನಬಳಕೆಯ ಪಾತ್ರೆಗಳನ್ನು ಉಡುಗೊರೆಯಾಗಿ ನೀಡಲಾಯಿತು.</p>.<p>ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಸತೀಶ ಜಾರಕಿಹೊಳಿ, ಎನ್.ಎಸ್. ಬೋಸರಾಜು, ಶಾಸಕರಾದ ಜಿ.ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ವಿಜಯಾನಂದ ಕಾಶಪ್ಪನವರ ಸೇರಿದಂತೆ ಹಲವಾರು ಗಣ್ಯರು, ಧರ್ಮಗುರುಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>