<p><strong>ಕವಿತಾಳ:</strong> ‘ಕೆಲವು ಮಕ್ಕಳು ಗಣಿತ ವಿಷಯದ ಬಗ್ಗೆ ಅನಗತ್ಯ ಆತಂಕ ಪಡುತ್ತಾರೆ. ಸರಳ ರೀತಿಯಲ್ಲಿ ಅರ್ಥೈಸಿಕೊಂಡರೆ ಗಣಿತ ಕಲಿಕೆ ಸುಲಭವಾಗಲಿದೆ’ ಎಂದು ಮುಖ್ಯಶಿಕ್ಷಕ ಆಂಜನೇಯ ಹೇಳಿದರು.</p>.<p>ಸಿರವಾರ ತಾಲ್ಲೂಕಿನ ಹಿರೇಹಣಿಗಿ ಗ್ರಾಮ ಪಂಚಾಯಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಗಣಿತ ಕಲಿಕಾ ಆಂದೋಲನದಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಗಣಿತ ಕಲಿಕಾ ಆಂದೋಲನ ನಡೆಸಲಾಗುತ್ತಿದೆ. ತರಗತಿಗಳಲ್ಲಿ ಗಣಿತ ವಿಷಯವನ್ನು ಪರಿಣಾಮಕಾರಿಯಾಗಿ ಮತ್ತು ಸರಳವಾಗಿ ಬೋಧಿಸುವ ಕುರಿತು ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಆಂದೋಲನದಿಂದ ಮಕ್ಕಳಿಗೆ ಪ್ರಯೋಜನವಾಗಲಿದೆ’ ಎಂದರು.</p>.<p>ಪಂಚಾಯಿತಿ ವ್ಯಾಪ್ತಿಯ 8 ಶಾಲೆಗಳ 4, 5 ಮತ್ತು 6ನೇ ತರಗತಿಯ ಅಂದಾಜು 120 ಮಕ್ಕಳು ಆಂದೋಲನದಲ್ಲಿ ಪಾಲ್ಗೊಂಡಿದ್ದರು. ಗಣಿತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ₹1 ಸಾವಿರ (ಪ್ರಥಮ), ₹600 (ದ್ವಿತೀಯ) ಮತ್ತು ₹400 (ತೃತೀಯ) ನಗದು ಬಹುಮಾನ ನೀಡಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷ ಮೆಹಬೂಬಸಾಬ್, ಕಾರ್ಯದರ್ಶಿ ಬಿ.ನಿತ್ಯಾನಂದ, ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಸ್ವಾಮಿ, ಮುಖಂಡರಾದ ಆಂಜನೇಯ, ರಾಜಮಹ್ಮದ್, ಶಿಕ್ಷಕರಾದ ಅನಂತರಾಜ, ಮಹಾಂತೇಶ, ಸವಿತಾ, ನಾಗರಾಜ, ಸುಧಾಕರ, ಪ್ರಭಾವತಿ, ಅನುಸೂಯಾ, ಶ್ರೀದೇವಿ, ನರಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ‘ಕೆಲವು ಮಕ್ಕಳು ಗಣಿತ ವಿಷಯದ ಬಗ್ಗೆ ಅನಗತ್ಯ ಆತಂಕ ಪಡುತ್ತಾರೆ. ಸರಳ ರೀತಿಯಲ್ಲಿ ಅರ್ಥೈಸಿಕೊಂಡರೆ ಗಣಿತ ಕಲಿಕೆ ಸುಲಭವಾಗಲಿದೆ’ ಎಂದು ಮುಖ್ಯಶಿಕ್ಷಕ ಆಂಜನೇಯ ಹೇಳಿದರು.</p>.<p>ಸಿರವಾರ ತಾಲ್ಲೂಕಿನ ಹಿರೇಹಣಿಗಿ ಗ್ರಾಮ ಪಂಚಾಯಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಗಣಿತ ಕಲಿಕಾ ಆಂದೋಲನದಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಗಣಿತ ಕಲಿಕಾ ಆಂದೋಲನ ನಡೆಸಲಾಗುತ್ತಿದೆ. ತರಗತಿಗಳಲ್ಲಿ ಗಣಿತ ವಿಷಯವನ್ನು ಪರಿಣಾಮಕಾರಿಯಾಗಿ ಮತ್ತು ಸರಳವಾಗಿ ಬೋಧಿಸುವ ಕುರಿತು ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಆಂದೋಲನದಿಂದ ಮಕ್ಕಳಿಗೆ ಪ್ರಯೋಜನವಾಗಲಿದೆ’ ಎಂದರು.</p>.<p>ಪಂಚಾಯಿತಿ ವ್ಯಾಪ್ತಿಯ 8 ಶಾಲೆಗಳ 4, 5 ಮತ್ತು 6ನೇ ತರಗತಿಯ ಅಂದಾಜು 120 ಮಕ್ಕಳು ಆಂದೋಲನದಲ್ಲಿ ಪಾಲ್ಗೊಂಡಿದ್ದರು. ಗಣಿತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ₹1 ಸಾವಿರ (ಪ್ರಥಮ), ₹600 (ದ್ವಿತೀಯ) ಮತ್ತು ₹400 (ತೃತೀಯ) ನಗದು ಬಹುಮಾನ ನೀಡಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷ ಮೆಹಬೂಬಸಾಬ್, ಕಾರ್ಯದರ್ಶಿ ಬಿ.ನಿತ್ಯಾನಂದ, ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಸ್ವಾಮಿ, ಮುಖಂಡರಾದ ಆಂಜನೇಯ, ರಾಜಮಹ್ಮದ್, ಶಿಕ್ಷಕರಾದ ಅನಂತರಾಜ, ಮಹಾಂತೇಶ, ಸವಿತಾ, ನಾಗರಾಜ, ಸುಧಾಕರ, ಪ್ರಭಾವತಿ, ಅನುಸೂಯಾ, ಶ್ರೀದೇವಿ, ನರಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>