<p><strong>ರಾಯಚೂರು:</strong>ಆಟೋಗಳಲ್ಲಿ ಆರಕ್ಕಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ. ಆಟೋ, ಮ್ಯಾಕ್ಸಿಕ್ಯಾಬ್ ಸೇರಿದಂತೆ ಇತರೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಶಾಲೆಯ ಮುಖ್ಯದ್ವಾರದ ಮುಂದೆ ನಿಲ್ಲಿಸದೆ, ಶಾಲೆಯ ಆವರಣದಲ್ಲಿ ಸುರಕ್ಷಿತವಾಗಿ ಬಿಡಬೇಕು ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಸೂಚನೆ ನೀಡಿದರು.</p>.<p>ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಶಾಲೆಯ ಮುಖ್ಯಗುರುಗಳು, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಆಟೋ ಚಾಲಕರು ಮತ್ತು ಮಾಲಿಕರ ಸಭೆಯಲ್ಲಿ ಮಾತನಾಡಿದರು.</p>.<p>ಒಂದು ವೇಳೆ ಗೇಟ್ ಮುಂಭಾಗದ ರಸ್ತೆಯಲ್ಲಿ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡ್ಡಿ ಪಡಿಸಿದ ಮಾಲಿಕರು ಮತ್ತು ಆಟೋ, ಮ್ಯಾಕ್ಸಿಕ್ಯಾಬ್ ಚಾಲಕರು ಮತ್ತು ಮಾಲೀಕರ ವಿರುದ್ಧವೂ ನಿರ್ದಾಕ್ಷಿಣವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಶಾಲೆಯ ಮುಖ್ಯಗುರುಗಳು ಅಥವಾ ಸಂಸ್ಥೆಯ ಮುಖ್ಯಸ್ಥರು ತಮ್ಮ ಶಾಲೆಯ ಆವರಣದಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸದೆ ಇದ್ದಲ್ಲಿ ಮೊದಲು ₹5 ಸಾವಿರ ದಂಡ ಹಾಗೂ ಎರಡನೇ ಅವಧಿಗೆ ₹10 ಸಾವಿರ ದಂಡ ವಿಧಿಸಲಾಗುತ್ತದೆ. ಆದರೂ ಸಿಸಿಟಿವಿ ಅಳವಡಿಸದಿದ್ದಲ್ಲೆ ಸಂಸ್ಥೆಯ ಅನುಮತಿ ರದ್ದುಪಡಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗುವುದು ಎಂದರು.</p>.<p>ಮಕ್ಕಳ ಅಪಹರಣ ಇತರೆ ಚಟುವಟಿಕೆಗಳು ಕಂಡುಬಂದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆ 9480803800 ಸಂಪರ್ಕಿಸಬೇಕು. ಆಟೋ, ಮ್ಯಾಕ್ಸಿಕ್ಯಾಬ್ ಸೇರಿದಂತೆ ಇನ್ನಿತರ ವಾಹನಗಳ ಚಾಲಕರು ಮತ್ತು ಮಾಲೀಕರು ತಮ್ಮ ವಾಹನಗಳಲ್ಲಿ ದಾಖಲಾತಿಗಳನ್ನು ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.</p>.<p>ಸರಕು ವಾಹನಗಳಲ್ಲಿ ಮಕ್ಕಳನ್ನು ಕರದುಕೊಂಡು ಹೋಗುವಂತಿಲ್ಲ. ಹಾಗೆನಾದರೂ ಕಂಡುಬಂದಲ್ಲಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದೇ ರೀತಿ ಲಿಂಗಸೂಗೂರು, ಸಿಂಧನೂರು ಉಪವಿಭಾಗ ಹಾಗೂ ಎಲ್ಲ ಠಾಣೆಗಳಲ್ಲಿ ಸಹ ಸಭೆಯನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಡಿವೈಎಸ್ಪಿ ಶೀಲವಂತ, ಸಿಪಿಐ, ಪಿಎಸ್ಐ, ಆರ್ಟಿಒ ಅಧಿಕಾರಿ, ವಾಯುಮಾಲಿನ್ಯ ತಪಾಸಣೆ ಅಧಿಕಾರಿ, ಶಾಲೆಯ ಮುಖ್ಯಗುರುಗಳು, ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong>ಆಟೋಗಳಲ್ಲಿ ಆರಕ್ಕಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ. ಆಟೋ, ಮ್ಯಾಕ್ಸಿಕ್ಯಾಬ್ ಸೇರಿದಂತೆ ಇತರೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಶಾಲೆಯ ಮುಖ್ಯದ್ವಾರದ ಮುಂದೆ ನಿಲ್ಲಿಸದೆ, ಶಾಲೆಯ ಆವರಣದಲ್ಲಿ ಸುರಕ್ಷಿತವಾಗಿ ಬಿಡಬೇಕು ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಸೂಚನೆ ನೀಡಿದರು.</p>.<p>ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಶಾಲೆಯ ಮುಖ್ಯಗುರುಗಳು, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಆಟೋ ಚಾಲಕರು ಮತ್ತು ಮಾಲಿಕರ ಸಭೆಯಲ್ಲಿ ಮಾತನಾಡಿದರು.</p>.<p>ಒಂದು ವೇಳೆ ಗೇಟ್ ಮುಂಭಾಗದ ರಸ್ತೆಯಲ್ಲಿ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡ್ಡಿ ಪಡಿಸಿದ ಮಾಲಿಕರು ಮತ್ತು ಆಟೋ, ಮ್ಯಾಕ್ಸಿಕ್ಯಾಬ್ ಚಾಲಕರು ಮತ್ತು ಮಾಲೀಕರ ವಿರುದ್ಧವೂ ನಿರ್ದಾಕ್ಷಿಣವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಶಾಲೆಯ ಮುಖ್ಯಗುರುಗಳು ಅಥವಾ ಸಂಸ್ಥೆಯ ಮುಖ್ಯಸ್ಥರು ತಮ್ಮ ಶಾಲೆಯ ಆವರಣದಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸದೆ ಇದ್ದಲ್ಲಿ ಮೊದಲು ₹5 ಸಾವಿರ ದಂಡ ಹಾಗೂ ಎರಡನೇ ಅವಧಿಗೆ ₹10 ಸಾವಿರ ದಂಡ ವಿಧಿಸಲಾಗುತ್ತದೆ. ಆದರೂ ಸಿಸಿಟಿವಿ ಅಳವಡಿಸದಿದ್ದಲ್ಲೆ ಸಂಸ್ಥೆಯ ಅನುಮತಿ ರದ್ದುಪಡಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗುವುದು ಎಂದರು.</p>.<p>ಮಕ್ಕಳ ಅಪಹರಣ ಇತರೆ ಚಟುವಟಿಕೆಗಳು ಕಂಡುಬಂದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆ 9480803800 ಸಂಪರ್ಕಿಸಬೇಕು. ಆಟೋ, ಮ್ಯಾಕ್ಸಿಕ್ಯಾಬ್ ಸೇರಿದಂತೆ ಇನ್ನಿತರ ವಾಹನಗಳ ಚಾಲಕರು ಮತ್ತು ಮಾಲೀಕರು ತಮ್ಮ ವಾಹನಗಳಲ್ಲಿ ದಾಖಲಾತಿಗಳನ್ನು ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.</p>.<p>ಸರಕು ವಾಹನಗಳಲ್ಲಿ ಮಕ್ಕಳನ್ನು ಕರದುಕೊಂಡು ಹೋಗುವಂತಿಲ್ಲ. ಹಾಗೆನಾದರೂ ಕಂಡುಬಂದಲ್ಲಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದೇ ರೀತಿ ಲಿಂಗಸೂಗೂರು, ಸಿಂಧನೂರು ಉಪವಿಭಾಗ ಹಾಗೂ ಎಲ್ಲ ಠಾಣೆಗಳಲ್ಲಿ ಸಹ ಸಭೆಯನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಡಿವೈಎಸ್ಪಿ ಶೀಲವಂತ, ಸಿಪಿಐ, ಪಿಎಸ್ಐ, ಆರ್ಟಿಒ ಅಧಿಕಾರಿ, ವಾಯುಮಾಲಿನ್ಯ ತಪಾಸಣೆ ಅಧಿಕಾರಿ, ಶಾಲೆಯ ಮುಖ್ಯಗುರುಗಳು, ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>