ಮಾನ್ವಿ: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ನಿಷೇಧಕ್ಕೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್ ಸಂತೋಷರಾಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬೆಳಗಾವಿಯಲ್ಲಿ ಗಡಿವಿಚಾರಕ್ಕೆ ಸಂಬಂಧಿಸಿದಂತೆ ಎಂಇಎಸ್ ಸಂಘಟನೆಯ ಯುವ ಘಟಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಚಳವಳಿ ಅಭಿಯಾನ ಹಮ್ಮಿಕೊಂಡಿರುವು ಖಂಡನೀಯ.
ಬೆಳಗಾವಿಯಲ್ಲಿ ಕಾನೂನು ಬಾಹಿರವಾಗಿ ನಿರಂತರವಾಗಿ ಪುಂಡಾಟಿಕೆ ಮೆರೆಯುತ್ತಿರುವ ಎಂಇಎಸ್ ಸಂಘಟನೆಯ ಮುಖಂಡರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಲಾಯಿತು.
ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಇತರ ಪದಾಧಿಕಾರಿಗಳಾದ ಆನಂದಗೌಡ, ರವಿಚಂದ್ರ ನಾಯಕ, ಅಮರೇಶ ಗೂಳಿ, ಚನ್ನಬಸವನಾಯಕ ಜಾನೇಕಲ್, ವೆಂಕಟೇಶ ನಾಯಕ, ಮಲ್ಲಿಕಾರ್ಜುನಗೌಡ ಮತ್ತಿತರರು ಇದ್ದರು.