<p><strong>ರಾಯಚೂರು</strong>: ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶನಿವಾರ ಮೇಯರ್ ನರಸಮ್ಮ ನರಸಿಂಹಲು ಅವರು ಬಿ. ಖಾತಾ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಮಹಾನಗರ ಪಾಲಿಕೆಯ ಆಯುಕ್ತ ಜುಬಿನ ಮೊಹಾಪಾತ್ರ ಮಾತನಾಡಿ, ‘ನಗರಸಭೆ ಸದಸ್ಯರು ರಾಜ್ಯ ಸರ್ಕಾರದ ಬಿ-ಖಾತಾ ಅಭಿಯಾನ ಸದುಪಯೋಗ ಪಡೆಯುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು’ ಎಂದರು ಹೇಳಿದರು.</p>.<p>‘ಬರುವ ದಿನಗಳಲ್ಲಿ ಅರ್ಜಿ ಸಲ್ಲಿಸಿದ ಮೂರು ದಿನಗಳಲ್ಲಿ ಖಾತಾಗಳನ್ನು ವಿತರಿಸಲಾಗುವುದು. ಯಾವುದೇ ಸಮಸ್ಯೆ ಇದ್ದರೆ ಸದಸ್ಯರು ನೇರವಾಗಿ ಆಯುಕ್ತರು, ವಲಯ ಆಯುಕ್ತರು ಮತ್ತು ಕಂದಾಯ ಅಧಿಕಾರಿಯ ಗಮನಕ್ಕೆ ತರಬಹುದು. ಸಹಾಯವಾಣಿ ಸಂಖ್ಯೆ: 08532200551, 9448195967 ಕರೆ ಮಾಡಬಹುದು’ ಎಂದು ತಿಳಿಸಿದರು.</p>.<p>ಉಪ ಮೇಯರ್ ಸಾಜೀದ್ ಸಮೀರ್, ಪಾಲಿಕೆ ಸದಸ್ಯರಾದ ಎನ್.ನಾಗರಾಜ, ವಿ.ನಾಗರಾಜ, ಮುಖಂಡರಾದ ಬಿ.ತಿಮ್ಮಾರೆಡ್ಡಿ, ಶಂಕರಪ್ಪ, ವಲಯ ಆಯುಕ್ತ ಸಲೀಂ ಪಾಷಾ, ಉಭಯ ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಕರ ವಸೂಲಿಗಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶನಿವಾರ ಮೇಯರ್ ನರಸಮ್ಮ ನರಸಿಂಹಲು ಅವರು ಬಿ. ಖಾತಾ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಮಹಾನಗರ ಪಾಲಿಕೆಯ ಆಯುಕ್ತ ಜುಬಿನ ಮೊಹಾಪಾತ್ರ ಮಾತನಾಡಿ, ‘ನಗರಸಭೆ ಸದಸ್ಯರು ರಾಜ್ಯ ಸರ್ಕಾರದ ಬಿ-ಖಾತಾ ಅಭಿಯಾನ ಸದುಪಯೋಗ ಪಡೆಯುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು’ ಎಂದರು ಹೇಳಿದರು.</p>.<p>‘ಬರುವ ದಿನಗಳಲ್ಲಿ ಅರ್ಜಿ ಸಲ್ಲಿಸಿದ ಮೂರು ದಿನಗಳಲ್ಲಿ ಖಾತಾಗಳನ್ನು ವಿತರಿಸಲಾಗುವುದು. ಯಾವುದೇ ಸಮಸ್ಯೆ ಇದ್ದರೆ ಸದಸ್ಯರು ನೇರವಾಗಿ ಆಯುಕ್ತರು, ವಲಯ ಆಯುಕ್ತರು ಮತ್ತು ಕಂದಾಯ ಅಧಿಕಾರಿಯ ಗಮನಕ್ಕೆ ತರಬಹುದು. ಸಹಾಯವಾಣಿ ಸಂಖ್ಯೆ: 08532200551, 9448195967 ಕರೆ ಮಾಡಬಹುದು’ ಎಂದು ತಿಳಿಸಿದರು.</p>.<p>ಉಪ ಮೇಯರ್ ಸಾಜೀದ್ ಸಮೀರ್, ಪಾಲಿಕೆ ಸದಸ್ಯರಾದ ಎನ್.ನಾಗರಾಜ, ವಿ.ನಾಗರಾಜ, ಮುಖಂಡರಾದ ಬಿ.ತಿಮ್ಮಾರೆಡ್ಡಿ, ಶಂಕರಪ್ಪ, ವಲಯ ಆಯುಕ್ತ ಸಲೀಂ ಪಾಷಾ, ಉಭಯ ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಕರ ವಸೂಲಿಗಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>