<p><strong>ಹಟ್ಟಿ ಚಿನ್ನದ ಗಣಿ:</strong> ಗೌಡೂರು ಗ್ರಾಮದ ಚಿಕ್ಕ ಮಕ್ಕಳ ಹೊಟ್ಟೆ ಸೇರಬೇಕಾದ ಮಿಲೆಟ್ ಲಡ್ಡು ಆಹಾರ ಪದಾರ್ಥದಲ್ಲಿ ಹುಳುಗಳು ಕಂಡು ಬಂದಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಗೌಡೂರು ಗ್ರಾಮದ ವೀರಭದ್ರೇಶ್ವರ ದೇವಸ್ಧಾನದ ಹತ್ತಿರದ 3ನೇ ಅಂಗನವಾಡಿ ಕೇಂದ್ರದಲ್ಲಿ ಅವಧಿ ಮುಗಿದ ಮಿಲೆಟ್ ಲಡ್ಡು ಮಿಶ್ರಣ ಪ್ಯಾಕೆಟ್ ವಿತರಣೆ ಮಾಡಲಾಗಿದೆ. ಇಂಥ ಆಹಾರ ಪದಾರ್ಥ ತಿಂದು ಚಿಕ್ಕ ಮಕ್ಕಳ ಜೀವಕ್ಕೆ ಹಾನಿಯಾದರೆ ಹೊಣೆಯಾರು ಎಂದು ಗ್ರಾಮಸ್ಧರು ದೂರಿದ್ದಾರೆ.</p>.<p>‘ಅಂಗನವಾಡಿ ಶಿಕ್ಷಕಿಗೆ ಸಮಸ್ಯೆ ಬಗ್ಗೆ ಹಲವು ಬಾರಿ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದೇ ಅವಧಿ ಮುಗಿದ ಪ್ಯಾಕೆಟ್ ನೀಡುತ್ತಿದ್ದಾರೆ. ವಿಚಾರಿಸಿದರೆ ನೀವು ಯಾರಿಗೂ ಬೇಕಾದರೂ ಹೇಳಿಕೊಳ್ಳಿ ಎಂದು ನಮ್ಮನ್ನೆ ಗದರಿಸುತ್ತಾರೆ ಎನ್ನುತ್ತಾರೆ ನೊಂದ ಮಕ್ಕಳ ಪಾಲಕರು.</p>.<p>‘ಅಂಗನವಾಡಿ ಕೇಂದ್ರದಲ್ಲಿ ಸಮಸ್ಯೆ ಇದೆ ಸಂಬಂಧಪಟ್ಟ ಮೇಲಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಸಮಸ್ಯೆಯನ್ನು ಕೇಳುವವರೆ ಇಲ್ಲದಂತಾಗಿದೆ’ ಎಂದು ಗರ್ಭಿಣಿ ಮಹಿಳೆಯರು ನೋವನ್ನು ತೊಡಿಕೊಂಡರು.</p>.<p>ಸಂಬಂದಪಟ್ಟ ಮೇಲಾಧಿಕಾರಿಗಳು ಇತ್ತ ಕಡೆ ಗಮನಹರಿಸಿ ಅಂಗನವಾಡಿ ಕೇಂದ್ರಗಳಿಗೆ ಗುಣ ಮಟ್ಟದ ಆಹಾರ ವಿತರಣೆ ಮಾಡಬೇಕು ಎಂದು ಗ್ರಾಮಸ್ಧರು ಒತ್ತಾಯಿಸಿದ್ದಾರೆ.</p>.<p>‘ಗೌಡೂರು ಗ್ರಾಮದಲ್ಲಿ ಅವಧಿ ಮುಗಿದ ಮಿಲೆಟ್ ಪ್ಯಾಕೆಟ್ ವಿತರಣೆ ಮಾಡಿದರ ಬಗ್ಗೆ ಜನರಿಂದ ದೂರುಗಳು ಬಂದಿವೆ. ಅಂಗನವಾಡಿ ಕೇಂದ್ರದ ಸಿಬ್ಬಂದಿಗೆ ಅವಧಿ ಮುಗಿದ ಪ್ಯಾಕೆಟ್ ವಿತರಣೆ ಮಾಡದಂತೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಮುಂದೆ ಈ ತರಹದ ಘಟನೆಗಳು ಮರು ಕಳುಹಿಸದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಡಿಪಿಒ ನಾಗರತ್ನ ಭರವಸೆ ನೀಡಿದರು.</p>.<div><blockquote>ಗೌಡೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅವಧಿ ಮುಗಿದ ಆಹಾರ ಪ್ಯಾಕೆಟ್ ವಿತರಣೆ ಮಾಡಲಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಕ್ರಮಕ್ಕೆ ಮುಂದಾಗಲಿ </blockquote><span class="attribution">ದುರುಗಪ್ಪ ಗ್ರಾಮಸ್ಧ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಗೌಡೂರು ಗ್ರಾಮದ ಚಿಕ್ಕ ಮಕ್ಕಳ ಹೊಟ್ಟೆ ಸೇರಬೇಕಾದ ಮಿಲೆಟ್ ಲಡ್ಡು ಆಹಾರ ಪದಾರ್ಥದಲ್ಲಿ ಹುಳುಗಳು ಕಂಡು ಬಂದಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಗೌಡೂರು ಗ್ರಾಮದ ವೀರಭದ್ರೇಶ್ವರ ದೇವಸ್ಧಾನದ ಹತ್ತಿರದ 3ನೇ ಅಂಗನವಾಡಿ ಕೇಂದ್ರದಲ್ಲಿ ಅವಧಿ ಮುಗಿದ ಮಿಲೆಟ್ ಲಡ್ಡು ಮಿಶ್ರಣ ಪ್ಯಾಕೆಟ್ ವಿತರಣೆ ಮಾಡಲಾಗಿದೆ. ಇಂಥ ಆಹಾರ ಪದಾರ್ಥ ತಿಂದು ಚಿಕ್ಕ ಮಕ್ಕಳ ಜೀವಕ್ಕೆ ಹಾನಿಯಾದರೆ ಹೊಣೆಯಾರು ಎಂದು ಗ್ರಾಮಸ್ಧರು ದೂರಿದ್ದಾರೆ.</p>.<p>‘ಅಂಗನವಾಡಿ ಶಿಕ್ಷಕಿಗೆ ಸಮಸ್ಯೆ ಬಗ್ಗೆ ಹಲವು ಬಾರಿ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದೇ ಅವಧಿ ಮುಗಿದ ಪ್ಯಾಕೆಟ್ ನೀಡುತ್ತಿದ್ದಾರೆ. ವಿಚಾರಿಸಿದರೆ ನೀವು ಯಾರಿಗೂ ಬೇಕಾದರೂ ಹೇಳಿಕೊಳ್ಳಿ ಎಂದು ನಮ್ಮನ್ನೆ ಗದರಿಸುತ್ತಾರೆ ಎನ್ನುತ್ತಾರೆ ನೊಂದ ಮಕ್ಕಳ ಪಾಲಕರು.</p>.<p>‘ಅಂಗನವಾಡಿ ಕೇಂದ್ರದಲ್ಲಿ ಸಮಸ್ಯೆ ಇದೆ ಸಂಬಂಧಪಟ್ಟ ಮೇಲಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಸಮಸ್ಯೆಯನ್ನು ಕೇಳುವವರೆ ಇಲ್ಲದಂತಾಗಿದೆ’ ಎಂದು ಗರ್ಭಿಣಿ ಮಹಿಳೆಯರು ನೋವನ್ನು ತೊಡಿಕೊಂಡರು.</p>.<p>ಸಂಬಂದಪಟ್ಟ ಮೇಲಾಧಿಕಾರಿಗಳು ಇತ್ತ ಕಡೆ ಗಮನಹರಿಸಿ ಅಂಗನವಾಡಿ ಕೇಂದ್ರಗಳಿಗೆ ಗುಣ ಮಟ್ಟದ ಆಹಾರ ವಿತರಣೆ ಮಾಡಬೇಕು ಎಂದು ಗ್ರಾಮಸ್ಧರು ಒತ್ತಾಯಿಸಿದ್ದಾರೆ.</p>.<p>‘ಗೌಡೂರು ಗ್ರಾಮದಲ್ಲಿ ಅವಧಿ ಮುಗಿದ ಮಿಲೆಟ್ ಪ್ಯಾಕೆಟ್ ವಿತರಣೆ ಮಾಡಿದರ ಬಗ್ಗೆ ಜನರಿಂದ ದೂರುಗಳು ಬಂದಿವೆ. ಅಂಗನವಾಡಿ ಕೇಂದ್ರದ ಸಿಬ್ಬಂದಿಗೆ ಅವಧಿ ಮುಗಿದ ಪ್ಯಾಕೆಟ್ ವಿತರಣೆ ಮಾಡದಂತೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಮುಂದೆ ಈ ತರಹದ ಘಟನೆಗಳು ಮರು ಕಳುಹಿಸದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಡಿಪಿಒ ನಾಗರತ್ನ ಭರವಸೆ ನೀಡಿದರು.</p>.<div><blockquote>ಗೌಡೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅವಧಿ ಮುಗಿದ ಆಹಾರ ಪ್ಯಾಕೆಟ್ ವಿತರಣೆ ಮಾಡಲಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಕ್ರಮಕ್ಕೆ ಮುಂದಾಗಲಿ </blockquote><span class="attribution">ದುರುಗಪ್ಪ ಗ್ರಾಮಸ್ಧ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>