ರಾಯಚೂರು: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂತ್ರಾಲಯದಲ್ಲಿ ಶನಿವಾರ ಗುರುರಾಯರ ದರ್ಶನ ಪಡೆದರು.
ಆನಂತರ ಮಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಗೆ ಫಲಪುಷ್ಪ ನೀಡಿ ಆಶೀರ್ವಾದ ಪಡೆದರು.
ರಾಯಚೂರಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿರುವ ಸಿರಿಧಾನ್ಯಗಳ ಅಭಿಯಾನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು, ಮಾರ್ಗಮಧ್ಯೆ ಮಂತ್ರಾಲಯಕ್ಕೂ ಭೇಟಿ ನೀಡಿದರು.