ಆಸ್ಪತ್ರೆ ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸುವ ಕೆಲಸ ಮಾಡಬೇಕಿದೆ. ಎಂಬಿಬಿಎಸ್ ವೈದ್ಯರನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.ದಂತ ವೈದ್ಯರ ನೇರ ನೇಮಕಾತಿ ನಡೆಸಲಾಗುವುದು.ರಾಜ್ಯದಲ್ಲಿ 1700 ಸರ್ಕಾರಿ ವೈದ್ಯರಿದ್ದಾರೆ. ಆಸ್ಪತ್ರೆಗಳಲ್ಲಿ ಬಡವರಿಗೆ ಮೂಲ ಸೌಲಭ್ಯಗಳು ಸಿಗಬೇಕು. ಅದನ್ನು ಅರ್ಥಮಾಡಿಕೊಳ್ಳಲು ವಾಸ್ತವ್ಯ ಮಾಡುತ್ತಿದ್ದೇನೆ ಎಂದರು.