ರಾಯಚೂರು:ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಮಾನ್ವಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಿತು. ‘ಗುತ್ತಿಗೆದಾರರು ಜೆಡಿಎಸ್ ಕಾರ್ಯಕರ್ತರಾಗಿದ್ದಾರೆ’ ಎಂದು ಪಂಚಾಯತ್ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಸ್ತಾಪಿಸುತ್ತಿದ್ದಂತೆ ಶಾಸಕ ರಾಜಾ ವೆಂಕಟಪ್ಪ ನಾಯಕ ಆಕ್ರೋಶದಿಂದ ಎದ್ದು ನಿಂತರು.