<p>ಮಾನ್ವಿ: ತಾಲ್ಲೂಕಿನ ರಾಜೋಳಿಬಂಡಾ ತಿರುವು ನಾಲಾ ಯೋಜನೆಯ ಅಣೆಕಟ್ಟೆಯ ಬಲಭಾಗದಲ್ಲಿ ಆಂಧ್ರಪ್ರದೇಶ ಸರ್ಕಾರ ಅಕ್ರಮವಾಗಿ ಕೈಗೊಂಡಿರುವ ಕಾಲುವೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಬಸನಗೌಡ ದದ್ದಲ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.</p>.<p>ರಾಜೋಳ್ಳಿಬಂಡಾ ತಿರುವು ನಾಲಾ ಯೋಜನೆ(ಆರ್ಡಿಎಸ್) ಅಣೆಕಟ್ಟೆಗೆ ಭೇಟಿ ನೀಡಿ ಅವರು ಅಧಿಕಾರಿಗಳು ಹಾಗೂ ರೈತರ ಜತೆಗೆ ಚರ್ಚಿಸಿದರು.</p>.<p>ಈ ಅಂತರರಾಜ್ಯ ನೀರಾವರಿ ಯೋಜನೆಗಾಗಿ 1976ರಲ್ಲಿ ಕೆಡಬ್ಲೂಟಿ ಅವಾರ್ಡ್-1ರ ಪ್ರಕಾರ ಒಟ್ಟು 17.10ಟಿಎಂಸಿ ನೀರು ಹಂಚಿಕೆ ಮಾಡಲಾಗಿತ್ತು. ಆಗಿನ ಆಂಧ್ರಪ್ರದೇಶಕ್ಕೆ (ಈಗಿನ ತೆಲಂಗಾಣ ಸರ್ಕಾರ) 15.90 ಟಿಎಂಸಿ ಹಾಗೂ ಕರ್ನಾಟಕಕ್ಕೆ 1.20 ಟಿಎಂಸಿ ನೀರು ಹಂಚಿಕೆ ನಿಗದಿಪಡಿಸಲಾಗಿತ್ತು.</p>.<p>2014ರ ಕೆಡಬ್ಲೂಟಿ ಅವಾರ್ಡ್-2ರ ಅನ್ವಯ ಆಂಧ್ರಪ್ರದೇಶ ಸರ್ಕಾರಕ್ಕೆ ಆರ್ಡಿಎಸ್ ಅಣೆಕಟ್ಟೆಯ ಕೆಳಭಾಗದಲ್ಲಿ 4ಟಿಎಂಸಿ ನೀರು ಬಳಕೆಗೆ ನಿಗದಿಪಡಿಸಲಾಗಿದೆ. ಆದರೆ ಈಗ ಆಂಧ್ರಪ್ರದೇಶ ಸರ್ಕಾರವು ತನ್ನ ಪಾಲಿನ 4ಟಿಎಂಸಿ ನೀರು ಬಳಕೆಗಾಗಿ ಅಣೆಕಟ್ಟೆಯ ಮೇಲ್ಭಾಗದಲ್ಲಿ ಬಲಭಾಗದಿಂದ ಅಕ್ರಮವಾಗಿ ಕಾಲುವೆ ನಿರ್ಮಾಣ ಹಾಗೂ 4 ಏತನೀರಾವರಿ ಯೋಜನೆಗಳ ನಿರ್ಮಾಣ ಕಾರ್ಯ ಕೈಗೊಂಡಿದೆ.</p>.<p>ಇದು ಕಾನೂನುಬಾಹಿರವಾಗಿದ್ದು ಎರಡು ರಾಜ್ಯಗಳ ರೈತರ ನಿಗದಿತ ಪ್ರಮಾಣದ ನೀರಿನ ಬೇಡಿಕೆಗೆ ತೊಂದರೆಯಾಗಲಿದೆ. ರಾಜ್ಯ ಸರ್ಕಾರ ಈ ಕಾಮಗಾರಿಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಸನಗೌಡ ದದ್ದಲ ಪತ್ರದಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ತಾಲ್ಲೂಕಿನ ರಾಜೋಳಿಬಂಡಾ ತಿರುವು ನಾಲಾ ಯೋಜನೆಯ ಅಣೆಕಟ್ಟೆಯ ಬಲಭಾಗದಲ್ಲಿ ಆಂಧ್ರಪ್ರದೇಶ ಸರ್ಕಾರ ಅಕ್ರಮವಾಗಿ ಕೈಗೊಂಡಿರುವ ಕಾಲುವೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಬಸನಗೌಡ ದದ್ದಲ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.</p>.<p>ರಾಜೋಳ್ಳಿಬಂಡಾ ತಿರುವು ನಾಲಾ ಯೋಜನೆ(ಆರ್ಡಿಎಸ್) ಅಣೆಕಟ್ಟೆಗೆ ಭೇಟಿ ನೀಡಿ ಅವರು ಅಧಿಕಾರಿಗಳು ಹಾಗೂ ರೈತರ ಜತೆಗೆ ಚರ್ಚಿಸಿದರು.</p>.<p>ಈ ಅಂತರರಾಜ್ಯ ನೀರಾವರಿ ಯೋಜನೆಗಾಗಿ 1976ರಲ್ಲಿ ಕೆಡಬ್ಲೂಟಿ ಅವಾರ್ಡ್-1ರ ಪ್ರಕಾರ ಒಟ್ಟು 17.10ಟಿಎಂಸಿ ನೀರು ಹಂಚಿಕೆ ಮಾಡಲಾಗಿತ್ತು. ಆಗಿನ ಆಂಧ್ರಪ್ರದೇಶಕ್ಕೆ (ಈಗಿನ ತೆಲಂಗಾಣ ಸರ್ಕಾರ) 15.90 ಟಿಎಂಸಿ ಹಾಗೂ ಕರ್ನಾಟಕಕ್ಕೆ 1.20 ಟಿಎಂಸಿ ನೀರು ಹಂಚಿಕೆ ನಿಗದಿಪಡಿಸಲಾಗಿತ್ತು.</p>.<p>2014ರ ಕೆಡಬ್ಲೂಟಿ ಅವಾರ್ಡ್-2ರ ಅನ್ವಯ ಆಂಧ್ರಪ್ರದೇಶ ಸರ್ಕಾರಕ್ಕೆ ಆರ್ಡಿಎಸ್ ಅಣೆಕಟ್ಟೆಯ ಕೆಳಭಾಗದಲ್ಲಿ 4ಟಿಎಂಸಿ ನೀರು ಬಳಕೆಗೆ ನಿಗದಿಪಡಿಸಲಾಗಿದೆ. ಆದರೆ ಈಗ ಆಂಧ್ರಪ್ರದೇಶ ಸರ್ಕಾರವು ತನ್ನ ಪಾಲಿನ 4ಟಿಎಂಸಿ ನೀರು ಬಳಕೆಗಾಗಿ ಅಣೆಕಟ್ಟೆಯ ಮೇಲ್ಭಾಗದಲ್ಲಿ ಬಲಭಾಗದಿಂದ ಅಕ್ರಮವಾಗಿ ಕಾಲುವೆ ನಿರ್ಮಾಣ ಹಾಗೂ 4 ಏತನೀರಾವರಿ ಯೋಜನೆಗಳ ನಿರ್ಮಾಣ ಕಾರ್ಯ ಕೈಗೊಂಡಿದೆ.</p>.<p>ಇದು ಕಾನೂನುಬಾಹಿರವಾಗಿದ್ದು ಎರಡು ರಾಜ್ಯಗಳ ರೈತರ ನಿಗದಿತ ಪ್ರಮಾಣದ ನೀರಿನ ಬೇಡಿಕೆಗೆ ತೊಂದರೆಯಾಗಲಿದೆ. ರಾಜ್ಯ ಸರ್ಕಾರ ಈ ಕಾಮಗಾರಿಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಸನಗೌಡ ದದ್ದಲ ಪತ್ರದಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>