<p><strong>ಮಸ್ಕಿ</strong>: ಪಟ್ಟಣದ ಸರ್ಕಾರಿ ಆಸ್ಪತ್ರೆ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಶಾಸಕರ ನೇತೃತ್ವದಲ್ಲಿ ಭೂ ಮಾಲೀಕರ ಮನವೊಲಿಸುವ ಯತ್ನ ಶನಿವಾರ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.</p>.<p>ಶಾಸಕ ಆರ್. ಬಸನಗೌಡ ತುರುವಿಹಾಳ ಹಾಗೂ ಜಿಲ್ಲಾಧಿಕಾರಿ ನಿತೀಶ್ ಕೆ. ನೇತೃತ್ವದಲ್ಲಿ ಸುಮಾರು 1 ಗಂಟೆ ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಭೂ ಮಾಲೀಕ ಅಪ್ಪಾಜಿಗೌಡ ಪಾಟೀಲ ಇತರರು ಪಾಲ್ಗೊಂಡಿದ್ದರು.</p>.<p>ನಾಲ್ಕು ಎಕರೆ ನನ್ನ ಜಾಗವನ್ನು ಆರೋಗ್ಯ ಇಲಾಖೆ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದೆ. ನನಗೆ ಭೂ ಪರಿಹಾರ ಕೊಟ್ಟರೆ ಮಾತ್ರ ಸರ್ಕಾರಿ ಆಸ್ಪತ್ರೆಗೆ ಜಾಗ ಬಿಟ್ಟು ಕೊಡುವುದಾಗಿ ಭೂ ಮಾಲೀಕ ಅಪ್ಪಾಜಿಗೌಡ ಪಟ್ಟು ಹಿಡಿದರು ಎಂದು ತಿಳಿದು ಬಂದಿದೆ.</p>.<p>ಒಂದು ಹಂತದಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿ ಅವರು ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿದ್ದು ಶೀಘ್ರ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಭೂ ಮಾಲೀಕರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.</p>.<p>ಭೂ ವಿವಾದ ಹಿನ್ನೆಲೆ: ತಾಲ್ಲೂಕು ಕೇಂದ್ರ ಸ್ಥಾನವಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಭೂಮಿ ತಮಗೆ ಸೇರಿದ್ದು ಎಂದು ಅಪ್ಪಾಜಿಗೌಡ ಪಾಟೀಲ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದರಿಂದ ನಿರ್ಮಾಣ ಹಂತದಲ್ಲಿದ್ದ 30 ಹಾಸಿಗೆ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿತ್ತು.</p>.<p>ಹೈಕೋರ್ಟ್ ತಡೆ ನೀಡಿದ್ದರಿಂದ ಈಗಿನ 6 ಹಾಸಿಗೆಯ ಆಸ್ಪತ್ರೆ ಕಟ್ಟಡ ಹೊರತುಪಡಿಸಿ ಶವಪರೀಕ್ಷಾ ಕೇಂದ್ರ ಸೇರಿದಂತೆ ಉಳಿದ ಖಾಲಿ ಜಾಗಕ್ಕೆ ಭೂ ಮಾಲೀಕರು ತಂತಿ ಬೇಲಿ ಹಾಕಿದ್ದರು.</p>.<p>ಈ ಕುರಿತು ‘ಪ್ರಜಾವಾಣಿ’ಯು ಜುಲೈ 13ರಂದು ‘ಆಸ್ಪರ್ತೆ ಭೂ ವಿವಾದ: ಕಾಮಗಾರಿಗೆ ಗ್ರಹಣ’ ಶೀರ್ಷಿಕೆಯಡಿ ಮುಖಪುಟದಲ್ಲಿ ವರದಿ ಪ್ರಕಟಿಸಿತ್ತು.</p>.<p><strong>ನಾನು ಮತ್ತು ಶಾಸಕ ಆರ್. ಬಸನಗೌಡ ತುರುವಿಹಾಳ ಸೇರಿ ಭೂ ಮಾಲೀಕರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವ ಯತ್ನ ಮಾಡಿದ್ದೇವೆ. ಮಾತುಕತೆ ಒಂದು ಹಂತಕ್ಕೆ ಬಂದಿದ್ದು ಶೀಘ್ರ ಸಮಸ್ಯೆ ಇತ್ಯರ್ಥವಾಗುವ ಭರವಸೆ ಇದೆ </strong></p><p><strong>-ನಿತೀಶ್ ಕೆ. ಜಿಲ್ಲಾಧಿಕಾರಿ ರಾಯಚೂರು</strong></p>.<p> <strong>ಸರ್ಕಾರಿ ಆಸ್ಪತ್ರೆ ಭೂ ವಿವಾದವನ್ನು ಇತ್ಯರ್ಥಪಡಿಸಿ ಶೀಘ್ರ ಮಸ್ಕಿ ಆಸ್ಪತ್ರೆಯನ್ನು ನೂರು ಹಾಸಿಗೆಗಳ ಆಸ್ಪತ್ರೆಯನ್ನಾಗಿಸಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ.</strong></p><p><strong>- ಆರ್.ಬಸನಗೌಡ ತುರುವಿಹಾಳ ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಪಟ್ಟಣದ ಸರ್ಕಾರಿ ಆಸ್ಪತ್ರೆ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಶಾಸಕರ ನೇತೃತ್ವದಲ್ಲಿ ಭೂ ಮಾಲೀಕರ ಮನವೊಲಿಸುವ ಯತ್ನ ಶನಿವಾರ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.</p>.<p>ಶಾಸಕ ಆರ್. ಬಸನಗೌಡ ತುರುವಿಹಾಳ ಹಾಗೂ ಜಿಲ್ಲಾಧಿಕಾರಿ ನಿತೀಶ್ ಕೆ. ನೇತೃತ್ವದಲ್ಲಿ ಸುಮಾರು 1 ಗಂಟೆ ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಭೂ ಮಾಲೀಕ ಅಪ್ಪಾಜಿಗೌಡ ಪಾಟೀಲ ಇತರರು ಪಾಲ್ಗೊಂಡಿದ್ದರು.</p>.<p>ನಾಲ್ಕು ಎಕರೆ ನನ್ನ ಜಾಗವನ್ನು ಆರೋಗ್ಯ ಇಲಾಖೆ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದೆ. ನನಗೆ ಭೂ ಪರಿಹಾರ ಕೊಟ್ಟರೆ ಮಾತ್ರ ಸರ್ಕಾರಿ ಆಸ್ಪತ್ರೆಗೆ ಜಾಗ ಬಿಟ್ಟು ಕೊಡುವುದಾಗಿ ಭೂ ಮಾಲೀಕ ಅಪ್ಪಾಜಿಗೌಡ ಪಟ್ಟು ಹಿಡಿದರು ಎಂದು ತಿಳಿದು ಬಂದಿದೆ.</p>.<p>ಒಂದು ಹಂತದಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿ ಅವರು ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿದ್ದು ಶೀಘ್ರ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಭೂ ಮಾಲೀಕರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.</p>.<p>ಭೂ ವಿವಾದ ಹಿನ್ನೆಲೆ: ತಾಲ್ಲೂಕು ಕೇಂದ್ರ ಸ್ಥಾನವಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಭೂಮಿ ತಮಗೆ ಸೇರಿದ್ದು ಎಂದು ಅಪ್ಪಾಜಿಗೌಡ ಪಾಟೀಲ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದರಿಂದ ನಿರ್ಮಾಣ ಹಂತದಲ್ಲಿದ್ದ 30 ಹಾಸಿಗೆ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿತ್ತು.</p>.<p>ಹೈಕೋರ್ಟ್ ತಡೆ ನೀಡಿದ್ದರಿಂದ ಈಗಿನ 6 ಹಾಸಿಗೆಯ ಆಸ್ಪತ್ರೆ ಕಟ್ಟಡ ಹೊರತುಪಡಿಸಿ ಶವಪರೀಕ್ಷಾ ಕೇಂದ್ರ ಸೇರಿದಂತೆ ಉಳಿದ ಖಾಲಿ ಜಾಗಕ್ಕೆ ಭೂ ಮಾಲೀಕರು ತಂತಿ ಬೇಲಿ ಹಾಕಿದ್ದರು.</p>.<p>ಈ ಕುರಿತು ‘ಪ್ರಜಾವಾಣಿ’ಯು ಜುಲೈ 13ರಂದು ‘ಆಸ್ಪರ್ತೆ ಭೂ ವಿವಾದ: ಕಾಮಗಾರಿಗೆ ಗ್ರಹಣ’ ಶೀರ್ಷಿಕೆಯಡಿ ಮುಖಪುಟದಲ್ಲಿ ವರದಿ ಪ್ರಕಟಿಸಿತ್ತು.</p>.<p><strong>ನಾನು ಮತ್ತು ಶಾಸಕ ಆರ್. ಬಸನಗೌಡ ತುರುವಿಹಾಳ ಸೇರಿ ಭೂ ಮಾಲೀಕರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವ ಯತ್ನ ಮಾಡಿದ್ದೇವೆ. ಮಾತುಕತೆ ಒಂದು ಹಂತಕ್ಕೆ ಬಂದಿದ್ದು ಶೀಘ್ರ ಸಮಸ್ಯೆ ಇತ್ಯರ್ಥವಾಗುವ ಭರವಸೆ ಇದೆ </strong></p><p><strong>-ನಿತೀಶ್ ಕೆ. ಜಿಲ್ಲಾಧಿಕಾರಿ ರಾಯಚೂರು</strong></p>.<p> <strong>ಸರ್ಕಾರಿ ಆಸ್ಪತ್ರೆ ಭೂ ವಿವಾದವನ್ನು ಇತ್ಯರ್ಥಪಡಿಸಿ ಶೀಘ್ರ ಮಸ್ಕಿ ಆಸ್ಪತ್ರೆಯನ್ನು ನೂರು ಹಾಸಿಗೆಗಳ ಆಸ್ಪತ್ರೆಯನ್ನಾಗಿಸಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ.</strong></p><p><strong>- ಆರ್.ಬಸನಗೌಡ ತುರುವಿಹಾಳ ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>