ರಾಯಚೂರು: ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸದಸ್ಯರೂ ಆಗಿರುವ ಶಾಸಕ ಗೂಳಿಹಟ್ಟಿ ಶೇಖರ್ ಅವರು, 'ರಾಯಚೂರು ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಚರ್ಚ್ ಗಳಿವೆ. ಅದರಲ್ಲಿ ಎಷ್ಟು ನೈಜವಾಗಿವೆ ಎಂಬುದನ್ನು ಪರಿಶೀಲಿಸಬೇಕು. ಮೂಲ ಕ್ತೈಸ್ತರು ಎಷ್ಟಿದ್ದಾರೆ ಹಾಗೂ ಮತಾಂತರಗೊಂಡವರು ಎಷ್ಟಿದ್ದಾರೆ ಎಂಬುದನ್ನು ಪಟ್ಟಿ ಮಾಡಿ ಕಳುಹಿಸಿ' ಎಂದು ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗೆ ಸೂಚಿಸಿದರು.