<p><strong>ಸಿಂಧನೂರು:</strong> ಸಿಂಧನೂರಿನಲ್ಲಿ ಮೊದಲ ಬಾರಿಗೆ ದಸರಾ ಮಹೋತ್ಸವವನ್ನು 9 ದಿನಗಳವರೆಗೆ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ತಾಲ್ಲೂಕಿನ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳು ಉತ್ಸವದ ಯಶಸ್ಸಿಗೆ ಸಹಕರಿಸಬೇಕು’ ಎಂದು ಶಾಸಕ ಹಂಪನಗೌಡ ಬಾದರ್ಲಿ ಮನವಿ ಮಾಡಿದರು.</p>.<p>ನಗರದ ಸರ್ಕಿಟ್ ಹೌಸ್ನಲ್ಲಿ ಗುರುವಾರ ನಡೆದ ಸರ್ವ ಪಕ್ಷಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮೈಸೂರು ದಸರಾ ಜಗತ್ಪ್ರಸಿದ್ಧವಾಗಿದ್ದು, ಇದೇ ಮಾದರಿಯಲ್ಲಿ ಸಿಂಧನೂರಿನಲ್ಲಿ ಆಚರಿಸುವ ಮೂಲಕ ಹೊಸ ಸಾಂಸ್ಕೃತಿಕ ಲೋಕವನ್ನು ಸೃಷ್ಟಿಸುವ ಉದ್ದೇಶವಿದೆ. ಈ ಸಂಬಂಧ ಅ.4ರಿಂದ 12ರವರೆಗೆ ನಡೆಯಲಿರುವ ಉತ್ಸವಕ್ಕೆ ಸಿದ್ಧತೆ ಆರಂಭಿಸಲಾಗಿದೆ’ ಎಂದು ವಿವರಿಸಿದರು.</p>.<p>ಆರ್ಜಿಎಂ ಶಾಲಾ ಮೈದಾನದಲ್ಲಿ ಉದ್ಘಾಟನೆ, ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಲಾ ತಂಡಗಳು ಉತ್ಸವಕ್ಕೆ ಮೆರಗು ತರಲಿವೆ. ಅ. 4ರಂದು ಕಲ್ಯಾಣ ದಸರಾ, 5ರಂದು ಸಾಂಸ್ಕೃತಿಕ ದಸರಾ, 6ರಂದು ರೈತ ದಸರಾ, 7ರಂದು ಮಹಿಳಾ ದಸರಾ, 8ರಂದು ನೌಕರ ದಸರಾ, 9ರಂದು ಕ್ರೀಡಾ ದಸರಾ, 10ರಂದು ಕಲಾ ದಸರಾ, 11ರಂದು ಯುವ ದಸರಾ, 12ರಂದು ಸಮಾರೋಪ ಸಮಾರಂಭ ನಡೆಯಲಿದೆ. ಅಂದು ಸಂಜೆ ಸಿದ್ಧಪರ್ವತ ಅಂಬಾಮಠದ ಅಂಬಾದೇವಿಯ ಮೂರ್ತಿಯನ್ನು ಅಂಬಾರಿ ಮೇಲೆ ಇಟ್ಟು ಮಿನಿವಿಧಾನಸೌದಿಂದ ಆರ್ಜಿಎಂ ಶಾಲಾ ಮೈದಾನದವರೆಗೆ ವಿವಿಧ ಕಲಾ ತಂಡಗಳು, ಸ್ತಬ್ದಚಿತ್ರಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಗುವುದು’ ಎಂದರು.</p>.<p>ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹಾಗೂ ಮಾಜಿ ಶಾಸಕ ವೆಂಕಟರಾವ ನಾಡಗೌಡ ಮಾತನಾಡಿದರು. ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ, ತಹಶೀಲ್ದಾರ್ ಅರುಣ ಎಚ್. ದೇಸಾಯಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಡಿವೈಎಸ್ಪಿ ಬಿ.ಎಸ್. ತಳವಾರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಜಿ.ಪಂ ಮಾಜಿ ಸದಸ್ಯ ಎನ್. ಶಿವನಗೌಡ ಗೊರೇಬಾಳ, ಬಿಜೆಪಿ ಮುಖಂಡ ರಾಜೇಶ ಹಿರೇಮಠ, ಮುಖಂಡರಾದ ಎಸ್.ದೇವೇಂದ್ರಗೌಡ, ಆರ್.ಸಿ. ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ಸಿಂಧನೂರಿನಲ್ಲಿ ಮೊದಲ ಬಾರಿಗೆ ದಸರಾ ಮಹೋತ್ಸವವನ್ನು 9 ದಿನಗಳವರೆಗೆ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ತಾಲ್ಲೂಕಿನ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳು ಉತ್ಸವದ ಯಶಸ್ಸಿಗೆ ಸಹಕರಿಸಬೇಕು’ ಎಂದು ಶಾಸಕ ಹಂಪನಗೌಡ ಬಾದರ್ಲಿ ಮನವಿ ಮಾಡಿದರು.</p>.<p>ನಗರದ ಸರ್ಕಿಟ್ ಹೌಸ್ನಲ್ಲಿ ಗುರುವಾರ ನಡೆದ ಸರ್ವ ಪಕ್ಷಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮೈಸೂರು ದಸರಾ ಜಗತ್ಪ್ರಸಿದ್ಧವಾಗಿದ್ದು, ಇದೇ ಮಾದರಿಯಲ್ಲಿ ಸಿಂಧನೂರಿನಲ್ಲಿ ಆಚರಿಸುವ ಮೂಲಕ ಹೊಸ ಸಾಂಸ್ಕೃತಿಕ ಲೋಕವನ್ನು ಸೃಷ್ಟಿಸುವ ಉದ್ದೇಶವಿದೆ. ಈ ಸಂಬಂಧ ಅ.4ರಿಂದ 12ರವರೆಗೆ ನಡೆಯಲಿರುವ ಉತ್ಸವಕ್ಕೆ ಸಿದ್ಧತೆ ಆರಂಭಿಸಲಾಗಿದೆ’ ಎಂದು ವಿವರಿಸಿದರು.</p>.<p>ಆರ್ಜಿಎಂ ಶಾಲಾ ಮೈದಾನದಲ್ಲಿ ಉದ್ಘಾಟನೆ, ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಲಾ ತಂಡಗಳು ಉತ್ಸವಕ್ಕೆ ಮೆರಗು ತರಲಿವೆ. ಅ. 4ರಂದು ಕಲ್ಯಾಣ ದಸರಾ, 5ರಂದು ಸಾಂಸ್ಕೃತಿಕ ದಸರಾ, 6ರಂದು ರೈತ ದಸರಾ, 7ರಂದು ಮಹಿಳಾ ದಸರಾ, 8ರಂದು ನೌಕರ ದಸರಾ, 9ರಂದು ಕ್ರೀಡಾ ದಸರಾ, 10ರಂದು ಕಲಾ ದಸರಾ, 11ರಂದು ಯುವ ದಸರಾ, 12ರಂದು ಸಮಾರೋಪ ಸಮಾರಂಭ ನಡೆಯಲಿದೆ. ಅಂದು ಸಂಜೆ ಸಿದ್ಧಪರ್ವತ ಅಂಬಾಮಠದ ಅಂಬಾದೇವಿಯ ಮೂರ್ತಿಯನ್ನು ಅಂಬಾರಿ ಮೇಲೆ ಇಟ್ಟು ಮಿನಿವಿಧಾನಸೌದಿಂದ ಆರ್ಜಿಎಂ ಶಾಲಾ ಮೈದಾನದವರೆಗೆ ವಿವಿಧ ಕಲಾ ತಂಡಗಳು, ಸ್ತಬ್ದಚಿತ್ರಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಗುವುದು’ ಎಂದರು.</p>.<p>ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹಾಗೂ ಮಾಜಿ ಶಾಸಕ ವೆಂಕಟರಾವ ನಾಡಗೌಡ ಮಾತನಾಡಿದರು. ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ, ತಹಶೀಲ್ದಾರ್ ಅರುಣ ಎಚ್. ದೇಸಾಯಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಡಿವೈಎಸ್ಪಿ ಬಿ.ಎಸ್. ತಳವಾರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಜಿ.ಪಂ ಮಾಜಿ ಸದಸ್ಯ ಎನ್. ಶಿವನಗೌಡ ಗೊರೇಬಾಳ, ಬಿಜೆಪಿ ಮುಖಂಡ ರಾಜೇಶ ಹಿರೇಮಠ, ಮುಖಂಡರಾದ ಎಸ್.ದೇವೇಂದ್ರಗೌಡ, ಆರ್.ಸಿ. ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>