<p><strong>ರಾಯಚೂರು:</strong> ಚುನಾಯಿತ ಜನಪ್ರತಿನಿಧಿಗಳು ಜನರ ಸೇವಕರು. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ನಗರದ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ತಂದಿದ್ದು ವಾಪಸ್ ಹೋಗದಂತೆ ಕೆಲಸ ಮಾಡಲಾಗುವುದು ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ ತಿಳಿಸಿದರು.</p>.<p>ನಗರದ ವಾರ್ಡ್ ನಂಬರ್ 7ರ ಅಂದ್ರೂನ್ ಕಿಲ್ಲಾ ಬಡಾವಣೆಯ ಜಾಮಿಯಾ ಮಸೀದಿಯ ₹ 10ಲಕ್ಷ ವೆಚ್ಚದ ಹೈಟೆಕ್ ಶೌಚಾಲಯ ಉದ್ಘಾಟಿಸಿ ಮಾತನಾಡಿದರು.</p>.<p>ಶಾಸಕರ ಅನುದಾನದಡಿ ಈ ವಾರ್ಡ್ ಗೆ ₹86 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ಭಾಗದ ನಗರಸಭೆ ಸದಸ್ಯರು ಸಹಕಾರ ನೀಡದ ಕಾರಣ ಬೇರೆ ವಾರ್ಡ್ಗೆ ಕಾಮಗಾರಿ ವರ್ಗಾಯಿಸಲಾಗಿದೆ. ಮಸೀದಿಯ ಮುಂಭಾಗದ ರಸ್ತೆಯ ಅಭಿವೃದ್ಧಿಗೆ ₹ 1 ಕೋಟಿ ಬಿಡುಗಡೆ ಮಾಡಲಾಗುವುದು ಸಂಬಂಧಿಸಿದವರು ಜಬಾವ್ದಾರಿ ವಹಿಸಿಕೊಳ್ಳಬೇಕು ಎಂದರು.</p>.<p>ಒಂದೇ ಜಾತಿ, ಧರ್ಮಕ್ಕೆ ಸೀಮಿತವಾದ ನಾಯಕನಲ್ಲ. ನನಗೆ ಮತ ಹಾಕಿದ, ಹಾಕದ ಜನರ ಬಡಾವಣೆಯ ಅಭಿವೃದ್ಧಿ ನನ್ನ ಕರ್ತವ್ಯ. ನೂರಾರು ಜನರು ನನ್ನ ಕಚೇರಿಗೆ ಭೇಟಿ ನೀಡುತ್ತಾರೆ. ಎಲ್ಲರ ಸಮಸ್ಯೆ ಆಲಿಸಿ ಪರಿಹಾರ ಸೂಚಿಸುತ್ತೇನೆಎಂದು ಹೇಳಿದರು.</p>.<p>ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಸೈಯದ್ ಮುಕ್ತಿಯಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೆ. ಗೋಪಾಲರೆಡ್ಡಿ, ಮಸೀದಿಯ ಇಮಾಮ್ ರಫೀಕ್ ಸಾಬ್, ಗುತ್ತೇದಾರದ ಮುಜಿಬುದ್ದೀನ್, ಅಹಮದ್ ಬೇಗ್, ಜಾವಿದ್ ರಫೀಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಚುನಾಯಿತ ಜನಪ್ರತಿನಿಧಿಗಳು ಜನರ ಸೇವಕರು. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ನಗರದ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ತಂದಿದ್ದು ವಾಪಸ್ ಹೋಗದಂತೆ ಕೆಲಸ ಮಾಡಲಾಗುವುದು ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ ತಿಳಿಸಿದರು.</p>.<p>ನಗರದ ವಾರ್ಡ್ ನಂಬರ್ 7ರ ಅಂದ್ರೂನ್ ಕಿಲ್ಲಾ ಬಡಾವಣೆಯ ಜಾಮಿಯಾ ಮಸೀದಿಯ ₹ 10ಲಕ್ಷ ವೆಚ್ಚದ ಹೈಟೆಕ್ ಶೌಚಾಲಯ ಉದ್ಘಾಟಿಸಿ ಮಾತನಾಡಿದರು.</p>.<p>ಶಾಸಕರ ಅನುದಾನದಡಿ ಈ ವಾರ್ಡ್ ಗೆ ₹86 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ಭಾಗದ ನಗರಸಭೆ ಸದಸ್ಯರು ಸಹಕಾರ ನೀಡದ ಕಾರಣ ಬೇರೆ ವಾರ್ಡ್ಗೆ ಕಾಮಗಾರಿ ವರ್ಗಾಯಿಸಲಾಗಿದೆ. ಮಸೀದಿಯ ಮುಂಭಾಗದ ರಸ್ತೆಯ ಅಭಿವೃದ್ಧಿಗೆ ₹ 1 ಕೋಟಿ ಬಿಡುಗಡೆ ಮಾಡಲಾಗುವುದು ಸಂಬಂಧಿಸಿದವರು ಜಬಾವ್ದಾರಿ ವಹಿಸಿಕೊಳ್ಳಬೇಕು ಎಂದರು.</p>.<p>ಒಂದೇ ಜಾತಿ, ಧರ್ಮಕ್ಕೆ ಸೀಮಿತವಾದ ನಾಯಕನಲ್ಲ. ನನಗೆ ಮತ ಹಾಕಿದ, ಹಾಕದ ಜನರ ಬಡಾವಣೆಯ ಅಭಿವೃದ್ಧಿ ನನ್ನ ಕರ್ತವ್ಯ. ನೂರಾರು ಜನರು ನನ್ನ ಕಚೇರಿಗೆ ಭೇಟಿ ನೀಡುತ್ತಾರೆ. ಎಲ್ಲರ ಸಮಸ್ಯೆ ಆಲಿಸಿ ಪರಿಹಾರ ಸೂಚಿಸುತ್ತೇನೆಎಂದು ಹೇಳಿದರು.</p>.<p>ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಸೈಯದ್ ಮುಕ್ತಿಯಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೆ. ಗೋಪಾಲರೆಡ್ಡಿ, ಮಸೀದಿಯ ಇಮಾಮ್ ರಫೀಕ್ ಸಾಬ್, ಗುತ್ತೇದಾರದ ಮುಜಿಬುದ್ದೀನ್, ಅಹಮದ್ ಬೇಗ್, ಜಾವಿದ್ ರಫೀಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>