<p><strong>ದೇವದುರ್ಗ:</strong> ಜಿಲ್ಲೆಯಲ್ಲಿಯೇ ತಾಲ್ಲೂಕಿನಲ್ಲಿ ಅತಿ ಹೆಚ್ಚು ಜನ ವಲಸೆ ಹೋಗುತ್ತಿರುವ ಹಿನ್ನೆಲೆ ಕಾಯಕ ಬಂಧುಗಳು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ನರೇಗಾ ನರೇಗಾ ಕೆಲಸ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಶಾಸಕಿ ಕರೆಮ್ಮ ಜೆ. ನಾಯಕ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕಾಯಕ ಬಂಧುಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಮೂಹ ಸಂಸ್ಥೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಘಂಟಿ ಮಾತನಾಡಿ, ‘ಅಕ್ರಮ ತಡೆಯಲು ಎನ್ಎಂಎಂಎಸ್ ಆ್ಯಪ್ ಮೂಲಕ ಪ್ರತಿದಿನ ಎನ್ಎಂಆರ್ ಹಾಜರಾತಿ ಕೈಗೊಳ್ಳಲು ಆದೇಶಿದೆ ಕಾಯಕ ಬಂದುಗಳು ಸರ್ಕಾರದ ನಿಯಮಗಳು ಬಗ್ಗೆಯೂ ಕೂಲಿಕಾರ್ಮಿಕರಿಗೆ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಬಸವರಾಜ ಹಟ್ಟಿ ಮಾತನಾಡಿ, ಯೋಜನೆಯ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ತರುವ ನಿಟ್ಟಿನಲ್ಲಿ ರಾಜ್ಯ ಗ್ರಾಮೀಣಾಭಿ ವೃದ್ಧಿ ಇಲಾಖೆಯ ಆಯುಕ್ತರು ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ (ಎನ್ಎಂಎಂಎಸ್) ಆ್ಯಪ್ ಮೂಲಕ ಪ್ರತಿದಿನ ಎರಡು ಬಾರಿ (ಬೆಳಿಗ್ಗೆ 6 ರಿಂದ 10, ಮಧ್ಯಾಹ್ನ 1ರಿಂದ 4 ಗಂಟೆ ಒಳಗೆ) ಕೆಲಸದ ಚಿತ್ರದ ಜೊತೆ ಕೂಲಿಕಾರ್ಮಿಕರ ಹಾಜರಾತಿಯನ್ನು ಅಪ್ಲೋಡ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಯಮಗಳನ್ನು ಕಾರ್ಮಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದರು.</p>.<p>ಗ್ರಾಮ ಸ್ವರಾಜ್ ಅಭಿಯಾನದ ರಾಜ್ಯ ಸಂಯೋಜಕ ಅಶೋಕ ಯರಗಟ್ಟಿ, ನರೇಗಾ ಸಹಾಯಕ ನಿರ್ದೇಶಕ ಅಣ್ಣರಾವ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ (ಪಂ ರಾಜ್) ಮಹೇಶ್ವರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ:</strong> ಜಿಲ್ಲೆಯಲ್ಲಿಯೇ ತಾಲ್ಲೂಕಿನಲ್ಲಿ ಅತಿ ಹೆಚ್ಚು ಜನ ವಲಸೆ ಹೋಗುತ್ತಿರುವ ಹಿನ್ನೆಲೆ ಕಾಯಕ ಬಂಧುಗಳು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ನರೇಗಾ ನರೇಗಾ ಕೆಲಸ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಶಾಸಕಿ ಕರೆಮ್ಮ ಜೆ. ನಾಯಕ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕಾಯಕ ಬಂಧುಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಮೂಹ ಸಂಸ್ಥೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಘಂಟಿ ಮಾತನಾಡಿ, ‘ಅಕ್ರಮ ತಡೆಯಲು ಎನ್ಎಂಎಂಎಸ್ ಆ್ಯಪ್ ಮೂಲಕ ಪ್ರತಿದಿನ ಎನ್ಎಂಆರ್ ಹಾಜರಾತಿ ಕೈಗೊಳ್ಳಲು ಆದೇಶಿದೆ ಕಾಯಕ ಬಂದುಗಳು ಸರ್ಕಾರದ ನಿಯಮಗಳು ಬಗ್ಗೆಯೂ ಕೂಲಿಕಾರ್ಮಿಕರಿಗೆ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಬಸವರಾಜ ಹಟ್ಟಿ ಮಾತನಾಡಿ, ಯೋಜನೆಯ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ತರುವ ನಿಟ್ಟಿನಲ್ಲಿ ರಾಜ್ಯ ಗ್ರಾಮೀಣಾಭಿ ವೃದ್ಧಿ ಇಲಾಖೆಯ ಆಯುಕ್ತರು ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ (ಎನ್ಎಂಎಂಎಸ್) ಆ್ಯಪ್ ಮೂಲಕ ಪ್ರತಿದಿನ ಎರಡು ಬಾರಿ (ಬೆಳಿಗ್ಗೆ 6 ರಿಂದ 10, ಮಧ್ಯಾಹ್ನ 1ರಿಂದ 4 ಗಂಟೆ ಒಳಗೆ) ಕೆಲಸದ ಚಿತ್ರದ ಜೊತೆ ಕೂಲಿಕಾರ್ಮಿಕರ ಹಾಜರಾತಿಯನ್ನು ಅಪ್ಲೋಡ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಯಮಗಳನ್ನು ಕಾರ್ಮಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದರು.</p>.<p>ಗ್ರಾಮ ಸ್ವರಾಜ್ ಅಭಿಯಾನದ ರಾಜ್ಯ ಸಂಯೋಜಕ ಅಶೋಕ ಯರಗಟ್ಟಿ, ನರೇಗಾ ಸಹಾಯಕ ನಿರ್ದೇಶಕ ಅಣ್ಣರಾವ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ (ಪಂ ರಾಜ್) ಮಹೇಶ್ವರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>