<p><strong>ಮಾನ್ವಿ: </strong>ಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಜಿಲ್ಲಾಡಳಿತವು ಕೂಡಲೇ ಭತ್ತ ಹಾಗೂ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಒತ್ತಾಯಿಸಿದ್ದಾರೆ.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಸುಮಾರು 40ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದು,ಅಂದಾಜು 2.3 ಲಕ್ಷ ಟನ್ ಉತ್ಪಾದನೆಯಾಗಲಿದೆ. ಸರ್ಕಾರ ಕೂಡಲೇ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು.</p>.<p>ಜೊತೆಗೆ ‘ಎ’ ಗ್ರೇಡ್ ಭತ್ತಕ್ಕೆ ಪ್ರತಿ ಕ್ವಿಂಟಾಲ್ಗೆ ₹ 2 ಸಾವಿರ ಹಾಗೂ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ₹ 1,980 ನಿಗದಿಗೊಳಿಸಿ ಖರೀದಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ತಾಲ್ಲೂಕಿನಲ್ಲಿ ಒಟ್ಟು 17ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆಯಲಾಗಿದ್ದು, ಪ್ರತಿ ಕ್ವಿಂಟಾಲ್ಗೆ ₹ 3ಸಾವಿರ ನಿಗದಿ ಮಾಡಿ ಖರೀದಿ ಕೇಂದ್ರಗಳ ಮೂಲಕ ಸರ್ಕಾರ ಖರೀದಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಜೆಡಿಎಸ್ ಪಕ್ಷದ ಮುಖಂಡರಾದ ಬಿ.ನಾಗರಾಜ ಹಾಗೂ ನಾರಾಯಣರಾವ್ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ: </strong>ಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಜಿಲ್ಲಾಡಳಿತವು ಕೂಡಲೇ ಭತ್ತ ಹಾಗೂ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಒತ್ತಾಯಿಸಿದ್ದಾರೆ.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಸುಮಾರು 40ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದು,ಅಂದಾಜು 2.3 ಲಕ್ಷ ಟನ್ ಉತ್ಪಾದನೆಯಾಗಲಿದೆ. ಸರ್ಕಾರ ಕೂಡಲೇ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು.</p>.<p>ಜೊತೆಗೆ ‘ಎ’ ಗ್ರೇಡ್ ಭತ್ತಕ್ಕೆ ಪ್ರತಿ ಕ್ವಿಂಟಾಲ್ಗೆ ₹ 2 ಸಾವಿರ ಹಾಗೂ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ₹ 1,980 ನಿಗದಿಗೊಳಿಸಿ ಖರೀದಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ತಾಲ್ಲೂಕಿನಲ್ಲಿ ಒಟ್ಟು 17ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆಯಲಾಗಿದ್ದು, ಪ್ರತಿ ಕ್ವಿಂಟಾಲ್ಗೆ ₹ 3ಸಾವಿರ ನಿಗದಿ ಮಾಡಿ ಖರೀದಿ ಕೇಂದ್ರಗಳ ಮೂಲಕ ಸರ್ಕಾರ ಖರೀದಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಜೆಡಿಎಸ್ ಪಕ್ಷದ ಮುಖಂಡರಾದ ಬಿ.ನಾಗರಾಜ ಹಾಗೂ ನಾರಾಯಣರಾವ್ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>