ದೇಶಕ್ಕೆ ಸಂವಿಧಾನ ಬರೆದವರ ಬಗ್ಗೆ ಈ ರೀತಿ ಮಾಡಿರುವುದು ನಾಡಿನೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇದು ಅತ್ಯಂತ ನೋವಿನ ಸಂಗತಿಯಾಗಿದ್ದು ಮಾನವ ಕುಲಕ್ಕೆ ಅವಮಾನದ ವಿಚಾರ. ಹೀಗಾಗಿ ತಕ್ಷಣವೇ ಹೈಕೋರ್ಟ್ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಿ ಇಂದಿನ ಆಧುನಿಕ ಕಾಲಘಟ್ಟದಲ್ಲೂ ಅಸ್ಪೃಶ್ಯತೆಯ ಮನೋಭಾವ ಉಳಿಸಿಕೊಂಡಿರುವ ಇವರನ್ನು ನ್ಯಾಯಾಂಗ ಇಲಾಖೆಯಿಂದ ವಜಾ ಮಾಡಬೇಕು ಹಾಗೂ ವಿಷಯದ ಕುರಿತು ನಾನು ಸರ್ಕಾರ, ಕಾನೂನು ಇಲಾಖೆಯ ಗಮನಕ್ಕೆ ತಂದು ಪತ್ರ ಬರೆಯುತ್ತೇನೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.