<p><strong>ರಾಯಚೂರು</strong>: ‘ಕೇಂದ್ರದ ನರೇಂದ್ರ ಮೋದಿ ಸರ್ಕಾರ 10 ವರ್ಷದ ಆಡಳಿತದಲ್ಲಿ ಸ್ಲಂ ಜನರಿಗೆ ಶೂನ್ಯ ಕೊಡುಗೆ ನೀಡಿದೆ. ನಾಗರಿಕರ ಹಕ್ಕುಗಳನ್ನು ಕಸಿದುಕೊಂಡು ಕಾರ್ಪೊರೇಟ್ಗಳ ಪರ ಆಡಳಿತ ನಡೆಸಿದೆ’ ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ರಾಜ್ಯ ಘಟಕದ ಸಂಚಾಲಕ ಎ.ನರಸಿಂಹಮೂರ್ತಿ ವಾಗ್ದಾಳಿ ನಡೆಸಿದರು.</p>.<p>ನಗರದ ಕನ್ನಡ ಭವನದಲ್ಲಿ ಸೋಮವಾರ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ‘ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾ’ಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಬಡವರ ಆದಾಯ ಕಡಿಮೆಯಾದರೂ ಖರ್ಚು ಜಾಸ್ತಿಯಾಗುತ್ತಾ ಹೋಗಿದೆ. ಪಿಎಂಎವೈ ಯೋಜನೆ ಬಡವರ ವಿರೋಧಿಯಾಗಿದ್ದು, ದೇಶದ 40 ಕೋಟಿ ಜನರಿಗೆ ಮನೆ ಇಲ್ಲ. ಆದರೆ 10 ವರ್ಷಗಳಲ್ಲಿ 2 ಕೋಟಿ ಜನರಿಗೆ ತಲಾ ₹1.50 ಲಕ್ಷ ಸಬ್ಸಿಡಿ ನೀಡಿದೆ. ಅದರಲ್ಲಿ ₹1.30 ಲಕ್ಷ ಜಿಎಸ್ಟಿ ಮೂಲಕ ಲೂಟಿ ಮಾಡಿದೆ’ ಎಂದು ದೂರಿದರು.</p>.<p>‘ನಮಗೆ ಬೇಕಿರುವುದು ಮೋದಿ ಗ್ಯಾರಂಟಿಗಳಲ್ಲ. ಸಂವಿಧಾನದ ರಕ್ಷಣೆಯ ಗ್ಯಾರಂಟಿ ಬೇಕಿದೆ. ದೇಶದ ಅಭಿವೃದ್ಧಿಯ ಆಯಾಮದಲ್ಲಿ ಲೋಕಸಭಾ ಚುನಾವಣೆ ನಡೆಯದೇ ವ್ಯಕ್ತಿ ಕೇಂದ್ರಿತ ಮೋದಿಕರಣದಲ್ಲಿ ಚುನಾವಣೆ ನಡೆಯುತ್ತಿರುವುದು ವಿಪರ್ಯಾಸ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಸ್ಲಂ ಕ್ರಿಯಾ ವೇದಿಕೆಯ ರಾಜ್ಯ ಮುಖಂಡ ಕೆ.ಪಿ ಅನೀಲಕುಮಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಜನಾರ್ದನ ಹಳ್ಳಿಬೆಂಚಿ, ನೂರ್ ಜಹಾನ್, ನಾಗರಾಜ, ವೆಂಕಟೇಶ ಭಂಡಾರಿ, ಶರಣಬಸವ ರೆಡ್ಡಿ, ಮಣಿಕಂಠ ಸೇರಿದಂತೆ ವಿವಿಧ ಕೊಳೆಗೇರಿ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.</p>.<p>ನಾಗರಾಜ ಸ್ವಾಗತಿಸಿದರು. ಬಸವರಾಜ ಹೊಸೂರು ನಿರೂಪಿಸಿದರು. ಪವನಕುಮಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಕೇಂದ್ರದ ನರೇಂದ್ರ ಮೋದಿ ಸರ್ಕಾರ 10 ವರ್ಷದ ಆಡಳಿತದಲ್ಲಿ ಸ್ಲಂ ಜನರಿಗೆ ಶೂನ್ಯ ಕೊಡುಗೆ ನೀಡಿದೆ. ನಾಗರಿಕರ ಹಕ್ಕುಗಳನ್ನು ಕಸಿದುಕೊಂಡು ಕಾರ್ಪೊರೇಟ್ಗಳ ಪರ ಆಡಳಿತ ನಡೆಸಿದೆ’ ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ರಾಜ್ಯ ಘಟಕದ ಸಂಚಾಲಕ ಎ.ನರಸಿಂಹಮೂರ್ತಿ ವಾಗ್ದಾಳಿ ನಡೆಸಿದರು.</p>.<p>ನಗರದ ಕನ್ನಡ ಭವನದಲ್ಲಿ ಸೋಮವಾರ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ‘ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾ’ಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಬಡವರ ಆದಾಯ ಕಡಿಮೆಯಾದರೂ ಖರ್ಚು ಜಾಸ್ತಿಯಾಗುತ್ತಾ ಹೋಗಿದೆ. ಪಿಎಂಎವೈ ಯೋಜನೆ ಬಡವರ ವಿರೋಧಿಯಾಗಿದ್ದು, ದೇಶದ 40 ಕೋಟಿ ಜನರಿಗೆ ಮನೆ ಇಲ್ಲ. ಆದರೆ 10 ವರ್ಷಗಳಲ್ಲಿ 2 ಕೋಟಿ ಜನರಿಗೆ ತಲಾ ₹1.50 ಲಕ್ಷ ಸಬ್ಸಿಡಿ ನೀಡಿದೆ. ಅದರಲ್ಲಿ ₹1.30 ಲಕ್ಷ ಜಿಎಸ್ಟಿ ಮೂಲಕ ಲೂಟಿ ಮಾಡಿದೆ’ ಎಂದು ದೂರಿದರು.</p>.<p>‘ನಮಗೆ ಬೇಕಿರುವುದು ಮೋದಿ ಗ್ಯಾರಂಟಿಗಳಲ್ಲ. ಸಂವಿಧಾನದ ರಕ್ಷಣೆಯ ಗ್ಯಾರಂಟಿ ಬೇಕಿದೆ. ದೇಶದ ಅಭಿವೃದ್ಧಿಯ ಆಯಾಮದಲ್ಲಿ ಲೋಕಸಭಾ ಚುನಾವಣೆ ನಡೆಯದೇ ವ್ಯಕ್ತಿ ಕೇಂದ್ರಿತ ಮೋದಿಕರಣದಲ್ಲಿ ಚುನಾವಣೆ ನಡೆಯುತ್ತಿರುವುದು ವಿಪರ್ಯಾಸ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಸ್ಲಂ ಕ್ರಿಯಾ ವೇದಿಕೆಯ ರಾಜ್ಯ ಮುಖಂಡ ಕೆ.ಪಿ ಅನೀಲಕುಮಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಜನಾರ್ದನ ಹಳ್ಳಿಬೆಂಚಿ, ನೂರ್ ಜಹಾನ್, ನಾಗರಾಜ, ವೆಂಕಟೇಶ ಭಂಡಾರಿ, ಶರಣಬಸವ ರೆಡ್ಡಿ, ಮಣಿಕಂಠ ಸೇರಿದಂತೆ ವಿವಿಧ ಕೊಳೆಗೇರಿ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.</p>.<p>ನಾಗರಾಜ ಸ್ವಾಗತಿಸಿದರು. ಬಸವರಾಜ ಹೊಸೂರು ನಿರೂಪಿಸಿದರು. ಪವನಕುಮಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>