ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ವಿರುದ್ಧ ಮಾತನಾಡಿದರೆ ಗೌರಿ ಗತಿ: ಶ್ರೀ ಸಿದ್ಧಲಿಂಗ ಸ್ವಾಮೀಜಿ ಎಚ್ಚರಿಕೆ

Last Updated 22 ಫೆಬ್ರುವರಿ 2020, 23:44 IST
ಅಕ್ಷರ ಗಾತ್ರ

ರಾಯಚೂರು: ‘ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್‌ಗೆ ಆದ ಗತಿಯೇ ಆಗುತ್ತದೆ’ ಎಂದು ಶ್ರೀರಾಮ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಅವರು ಮಾಡಿದ್ದಾರೆ ಎನ್ನಲಾದ ಭಾಷಣದ ವಿಡಿಯೊ ತುಣುಕು ವೈರಲ್‌ ಆಗಿದೆ.

ತಾಲ್ಲೂಕಿನ ಶಕ್ತಿನಗರದಲ್ಲಿ ಭಾರತ ಯುವ ವಿವೇಕ ಸಂಘದಿಂದ ಈಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಭಾಷಣ ಮಾಡಿದ್ದರು. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಸಹ ಈ ಸಮಾರಂಭದಲ್ಲಿ ಮಾತನಾಡಿದ್ದರು.

‘ಪ್ರಮೋದ್‌ ಮುತಾಲಿಕ್‌ ಹಾಗೂ ಸಿದ್ಧಲಿಂಗ ಸ್ವಾಮೀಜಿ ಕೋಮುಭಾವನೆ ಕೆರಳಿಸುವ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮುಸ್ಲಿಂ ಸಮಾಜದ ಮುಖಂಡರು ಶಕ್ತಿನಗರ ಠಾಣೆಗೆ ದೂರು ಸಲ್ಲಿಸಿದ್ದರು.

ಆದರೆ, ದೂರು ನೀಡಿದರೂ ಪೊಲೀಸರು ಎಫ್‌ಐಆರ್‌ ದಾಖಲಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT