<p><strong>ರಾಯಚೂರು:</strong> ‘ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬವನ್ನು ಮುಂದಿನ ವರ್ಷ ಒಂದು ವಾರ ಆಯೋಜಿಸಬೇಕು’ ಎಂದು ಶಾಸಕ ಶಿವರಾಜ ಪಾಟೀಲ ಮನವಿ ಮಾಡಿದರು.</p>.<p>ನಗರದ ವೀರ ಆಂಜನೇಯ ಕಲ್ಯಾಣ ಮಂಟಪದಲ್ಲಿ ಮುಂಗಾರು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಾಜಿ ಶಾಸಕ ಎ.ಪಾಪಾರೆಡ್ಡಿ ಮತ್ತು ಮುನ್ನೂರು ಕಾಪು ಹಿರಿಯ ಮುಖಂಡ ಬೆಲ್ಲಂ ನರಸಾರೆಡ್ಡಿ ನಾಯಕತ್ವದಲ್ಲಿ ದಕ್ಷಿಣ ಭಾರತದಲ್ಲೇ ಮಾದರಿಯಾದಂತಹ ಕಾರ್ಯಕ್ರಮ ನಡೆಯಬೇಕು’ ಎಂದು ಹೇಳಿದರು.</p>.<p>‘ರಾಯಚೂರು ಜಿಲ್ಲೆಯ ಇತಿಹಾಸದಲ್ಲಿ ಮುಂಗಾರು ಹಬ್ಬವನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಜಿಲ್ಲೆಯ ಯಾವುದೇ ಸಮುದಾಯ ಆಚರಿಸಿಲ್ಲ. ಮುನ್ನೂರು ಕಾಪು ಸಮಾಜ ಒಗ್ಗಟ್ಟು ಪ್ರದರ್ಶನದ ಮೂಲಕ ಮುಂಗಾರು ಹಬ್ಬವನ್ನು ಅತ್ಯಂತ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ’ ಎಂದರು.</p>.<p>‘ಪಾಪಾರೆಡ್ಡಿ ಅವರ ಸಂಪರ್ಕದಲ್ಲಿ ಒಂದು ಲಕ್ಷ ಜನ ಇದ್ದಾರೆ ಎಂಬುದು ಮಾಹಿತಿ ಇದೆ. ಮುಂಗಾರು ಹಬ್ಬದ ಮೂಲಕ ರಾಯಚೂರು ಜಿಲ್ಲೆಯನ್ನು ಗುರುತಿಸಿದ ಕೀರ್ತಿ ಎ.ಪಾಪಾರೆಡ್ಡಿ ಅವರಿಗೆ ಸಲ್ಲುತ್ತದೆ’ ಎಂದು ತಿಳಿಸಿದರು.</p>.<p>ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಶಾಸಕ ಎ.ಪಾಪಾರೆಡ್ಡಿ, ಸಮಾಜದ ಹಿರಿಯ ಮುಖಂಡ ಬೆಲ್ಲಂ ನರಸರೆಡ್ಡಿ, ಸಮಾಜದ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬವನ್ನು ಮುಂದಿನ ವರ್ಷ ಒಂದು ವಾರ ಆಯೋಜಿಸಬೇಕು’ ಎಂದು ಶಾಸಕ ಶಿವರಾಜ ಪಾಟೀಲ ಮನವಿ ಮಾಡಿದರು.</p>.<p>ನಗರದ ವೀರ ಆಂಜನೇಯ ಕಲ್ಯಾಣ ಮಂಟಪದಲ್ಲಿ ಮುಂಗಾರು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಾಜಿ ಶಾಸಕ ಎ.ಪಾಪಾರೆಡ್ಡಿ ಮತ್ತು ಮುನ್ನೂರು ಕಾಪು ಹಿರಿಯ ಮುಖಂಡ ಬೆಲ್ಲಂ ನರಸಾರೆಡ್ಡಿ ನಾಯಕತ್ವದಲ್ಲಿ ದಕ್ಷಿಣ ಭಾರತದಲ್ಲೇ ಮಾದರಿಯಾದಂತಹ ಕಾರ್ಯಕ್ರಮ ನಡೆಯಬೇಕು’ ಎಂದು ಹೇಳಿದರು.</p>.<p>‘ರಾಯಚೂರು ಜಿಲ್ಲೆಯ ಇತಿಹಾಸದಲ್ಲಿ ಮುಂಗಾರು ಹಬ್ಬವನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಜಿಲ್ಲೆಯ ಯಾವುದೇ ಸಮುದಾಯ ಆಚರಿಸಿಲ್ಲ. ಮುನ್ನೂರು ಕಾಪು ಸಮಾಜ ಒಗ್ಗಟ್ಟು ಪ್ರದರ್ಶನದ ಮೂಲಕ ಮುಂಗಾರು ಹಬ್ಬವನ್ನು ಅತ್ಯಂತ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ’ ಎಂದರು.</p>.<p>‘ಪಾಪಾರೆಡ್ಡಿ ಅವರ ಸಂಪರ್ಕದಲ್ಲಿ ಒಂದು ಲಕ್ಷ ಜನ ಇದ್ದಾರೆ ಎಂಬುದು ಮಾಹಿತಿ ಇದೆ. ಮುಂಗಾರು ಹಬ್ಬದ ಮೂಲಕ ರಾಯಚೂರು ಜಿಲ್ಲೆಯನ್ನು ಗುರುತಿಸಿದ ಕೀರ್ತಿ ಎ.ಪಾಪಾರೆಡ್ಡಿ ಅವರಿಗೆ ಸಲ್ಲುತ್ತದೆ’ ಎಂದು ತಿಳಿಸಿದರು.</p>.<p>ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಶಾಸಕ ಎ.ಪಾಪಾರೆಡ್ಡಿ, ಸಮಾಜದ ಹಿರಿಯ ಮುಖಂಡ ಬೆಲ್ಲಂ ನರಸರೆಡ್ಡಿ, ಸಮಾಜದ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>