<p><strong>ರಾಯಚೂರು: </strong>ಮಗುವಿನ ಪ್ರಾಥಮಿಕ ಹಂತದಲ್ಲಿ ಉತ್ತಮ ಸಂಸ್ಕಾರ ನೀಡಬೇಕು. ಮಗುವಿನ ಉಜ್ವಲ ಭವಿಷ್ಯ ನಿರ್ಮಾಣ ಮಾಡುವಲ್ಲಿ ತಾಯಿ ನೀಡುವ ಸಂಸ್ಕಾರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕ ಸಂತೋಷ ಕುಮಾರ್ ಹೇಳಿದರು.</p>.<p>ನಗರದ ದೇವರ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಭಾನುವಾರ ಏರ್ಪಡಿಸಿದ್ದ ವಿಶ್ವ ತಾಯಂದಿರ ದಿನಾಚರಣೆ ಮತ್ತು ಮಾತೆಯರನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ತಾಯಿಯ ಸ್ಥಾನವನ್ನು ಜಗತ್ತಿನ ಯಾವ ಸಂಪತ್ತೂ ತುಂಬಿಸಲಾಗದು. ಅಂತಹ ಅಪೂರ್ವ ಸಂಪತ್ತಿಗಾಗಿ ಮಿಸಲಿರುವ ದಿನ ಇದಾಗಿದೆ. ಅಜ್ಞಾನದ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಬೆಳಕನ್ನು ಹರಿಸಲು ತಾಯಿ ಎನ್ನುವ ಎರಡಕ್ಷರದ ಮಹಾವಂತ್ರವೇ ಸಾಕು. ತಾಯಿ ಎಂದರೆ ಮಾತೃ ಸ್ವರೂಪಿ ಕ್ಷೇಮಯಾಧರಿತ್ರಿ ಎಂದು ನುಡಿದರು</p>.<p>ತಾಲ್ಲೂಕು ಯೋಜನಾಧಿಕಾರಿ ರಘುಪತಿ ಗೌಡ, ಒಕ್ಕೂಟದ ಅಧ್ಯಕ್ಷೆ ಹುಸೇನ್ ಬಾನು, ಅನ್ನಪೂರ್ಣ ಇದ್ದರು.</p>.<p>ಲಕ್ಷ್ಮೀ ಸ್ವಾಗತಿಸಿದರು. ಈಶಪ್ಪ ನಿರೂಪಿಸಿದರು. ಮಹಾಂತೇಶ ಪಿ. ಹಿರೇಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಮಗುವಿನ ಪ್ರಾಥಮಿಕ ಹಂತದಲ್ಲಿ ಉತ್ತಮ ಸಂಸ್ಕಾರ ನೀಡಬೇಕು. ಮಗುವಿನ ಉಜ್ವಲ ಭವಿಷ್ಯ ನಿರ್ಮಾಣ ಮಾಡುವಲ್ಲಿ ತಾಯಿ ನೀಡುವ ಸಂಸ್ಕಾರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕ ಸಂತೋಷ ಕುಮಾರ್ ಹೇಳಿದರು.</p>.<p>ನಗರದ ದೇವರ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಭಾನುವಾರ ಏರ್ಪಡಿಸಿದ್ದ ವಿಶ್ವ ತಾಯಂದಿರ ದಿನಾಚರಣೆ ಮತ್ತು ಮಾತೆಯರನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ತಾಯಿಯ ಸ್ಥಾನವನ್ನು ಜಗತ್ತಿನ ಯಾವ ಸಂಪತ್ತೂ ತುಂಬಿಸಲಾಗದು. ಅಂತಹ ಅಪೂರ್ವ ಸಂಪತ್ತಿಗಾಗಿ ಮಿಸಲಿರುವ ದಿನ ಇದಾಗಿದೆ. ಅಜ್ಞಾನದ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಬೆಳಕನ್ನು ಹರಿಸಲು ತಾಯಿ ಎನ್ನುವ ಎರಡಕ್ಷರದ ಮಹಾವಂತ್ರವೇ ಸಾಕು. ತಾಯಿ ಎಂದರೆ ಮಾತೃ ಸ್ವರೂಪಿ ಕ್ಷೇಮಯಾಧರಿತ್ರಿ ಎಂದು ನುಡಿದರು</p>.<p>ತಾಲ್ಲೂಕು ಯೋಜನಾಧಿಕಾರಿ ರಘುಪತಿ ಗೌಡ, ಒಕ್ಕೂಟದ ಅಧ್ಯಕ್ಷೆ ಹುಸೇನ್ ಬಾನು, ಅನ್ನಪೂರ್ಣ ಇದ್ದರು.</p>.<p>ಲಕ್ಷ್ಮೀ ಸ್ವಾಗತಿಸಿದರು. ಈಶಪ್ಪ ನಿರೂಪಿಸಿದರು. ಮಹಾಂತೇಶ ಪಿ. ಹಿರೇಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>