ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಮುಖಂಡರು ಪೆಟ್ರೋಲ್ ಹಾಗೂ ಬೆಂಕಿ ಪಟ್ಟಣವನ್ನು ಜೇಬಿನಲ್ಲಿ ಇಟ್ಟುಕೊಂಡಿರುತ್ತಾರೆ. ಯಾವಾಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೋ ಅಲ್ಲಿ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುವ ಕೆಲಸ ಮಾಡಿಕೊಂಡು ಬಂದಿದ್ದಾರೆ‘ ಎಂದು ಅವರು ಆರೋಪಿಸಿದರು.