<p><strong>ರಾಯಚೂರು:</strong> ‘ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಸಲು ಅಗತ್ಯ ಕ್ರಮವಹಿಸಬೇಕು’ ಎಂದು ಜಿಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬಿಳಿಜೋಳ ಖರೀದಿ ಕುರಿತು ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರವು 2025-26ನೇ ಸಾಲಿನ ಮುಂಗಾರು ಋತುವಿನಲಿ ಪ್ರತಿ ಕ್ವಿಂಟಾಲ್ ಹೈಬ್ರಿಡ್ ಬಿಳಿಜೋಳಕ್ಕೆ ₹3699 ಹಾಗೂ ಮಾಲ್ದಂಡಿ ಬಿಳಿಜೋಳಕ್ಕೆ ₹ 3749 ನಿಗದಿ ಮಾಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಬಿಳಿಜೋಳವನ್ನು ಅಧಿಕೃತ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಮುಖಾಂತರ ಖರೀದಿಸಲು ಅನುಮೋದನೆ ನೀಡಲಾಗಿದೆ’ ಎಂದರು.</p>.<p>‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಸಂಬಂಧಿಸಿದಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಎಮ್ಸಿ, ಪಿಎಸಿಎಸ್, ಎಫ್ಪಿಒಎಸ್, ಎಸ್ಹೆಚ್ಜಿಎಸ್ಗಳಿಂದ ಜಿಲ್ಲೆಯಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆದು ಡಿಸೆಂಬರ್ 1 ರಿಂದ 2026ರ ಮಾರ್ಚ ಅಂತ್ಯದ ರವರೆಗೆ ಬಿಳಿಜೋಳ ಖರೀದಿಗೆ ರೈತರ ನೋಂದಣಿ ಕೈಗೊಳ್ಳಬೇಕು‘ ಎಂದರು.</p>.<p>‘ಸರ್ಕಾರದಿಂದ ನೇಮಿಸಲ್ಪಟ್ಟ ನೋಡಲ್ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಕೇಂದ್ರ ಸರ್ಕಾರವು ನಿಗಧಿಪಡಿಸಿದ ಮಾನದಂಡಗಳನ್ವಯ ಬಿಳಿಜೋಳವನ್ನು ಖರೀದಿ ಹಂತದಲ್ಲಿ ಎಫ್ಎಕ್ಕೂ ಗುಣಮಟ್ಟವನ್ನು ದೃಢೀಕರಿಸಿ ಪ್ರತಿ ಕೇಂದ್ರದಲ್ಲಿ ಮೂರನೇ ವ್ಯಕ್ತಿ ಗುಣಮಟ್ಟ ಪರೀಕ್ಷಕರನ್ನು ನೇಮಿಸಲು ಟೆಂಡರ್ ಕರೆಯಬೇಕು‘ ಎಂದು ಸೂಚಿಸಿದರು.</p>.<p>‘ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ಜಿಲ್ಲೆಗಳಲ್ಲಿನ ಕಾರ್ಯ ಪ್ರಗತಿ ಬಗ್ಗೆ ಆಗ್ನಿಂದಾಗೆ ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಬಯೊಮೆಟ್ರಿಕ್ ಆಧಾರದಲಿಯೇ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್ ಅವರು ಮಾತನಾಡಿ, ‘ಪ್ರತಿ ರೈತರಿಂದ ಹಿಡುವಳಿಯನ್ನಾಧರಿಸಿ ಪ್ರತಿ ಎಕರೆಗೆ 15 ಕ್ವಿಂಟಾಲ್ನಂತೆ ಗರಿಷ್ಠ 150 ಕ್ವಿಂಟಲ್ ಬಿಳಿಜೋಳ ಖರೀದಿಸಬೇಕು. ಬಿಳಿಜೋಳ ಸರಬರಾಜು ಮಾಡಿದ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಮಾಡಲಾಗುವುದು’ ಎಂದರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಪ್ರಕಾಶ ಚವ್ಹಾಣ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಮ್ಮದ್ ಅಲಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ಪ್ರಕಾಶ , ಎಪಿಎಂಸಿ ಸಹಾಯಕ ನಿರ್ದೇಶಕ ಕೃಷ್ಣ, ರಾಯಚೂರಿನ ಸಹಕಾರ ಸಂಘಗಳ ಉಪ ನಿಬಂಧಕ ಮನೋಹರ, ಲಿಂಗಸುಗೂರು ಉಪ ವಿಭಾಗಾಧಿಕಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಸಲು ಅಗತ್ಯ ಕ್ರಮವಹಿಸಬೇಕು’ ಎಂದು ಜಿಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬಿಳಿಜೋಳ ಖರೀದಿ ಕುರಿತು ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರವು 2025-26ನೇ ಸಾಲಿನ ಮುಂಗಾರು ಋತುವಿನಲಿ ಪ್ರತಿ ಕ್ವಿಂಟಾಲ್ ಹೈಬ್ರಿಡ್ ಬಿಳಿಜೋಳಕ್ಕೆ ₹3699 ಹಾಗೂ ಮಾಲ್ದಂಡಿ ಬಿಳಿಜೋಳಕ್ಕೆ ₹ 3749 ನಿಗದಿ ಮಾಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಬಿಳಿಜೋಳವನ್ನು ಅಧಿಕೃತ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಮುಖಾಂತರ ಖರೀದಿಸಲು ಅನುಮೋದನೆ ನೀಡಲಾಗಿದೆ’ ಎಂದರು.</p>.<p>‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಸಂಬಂಧಿಸಿದಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಎಮ್ಸಿ, ಪಿಎಸಿಎಸ್, ಎಫ್ಪಿಒಎಸ್, ಎಸ್ಹೆಚ್ಜಿಎಸ್ಗಳಿಂದ ಜಿಲ್ಲೆಯಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆದು ಡಿಸೆಂಬರ್ 1 ರಿಂದ 2026ರ ಮಾರ್ಚ ಅಂತ್ಯದ ರವರೆಗೆ ಬಿಳಿಜೋಳ ಖರೀದಿಗೆ ರೈತರ ನೋಂದಣಿ ಕೈಗೊಳ್ಳಬೇಕು‘ ಎಂದರು.</p>.<p>‘ಸರ್ಕಾರದಿಂದ ನೇಮಿಸಲ್ಪಟ್ಟ ನೋಡಲ್ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಕೇಂದ್ರ ಸರ್ಕಾರವು ನಿಗಧಿಪಡಿಸಿದ ಮಾನದಂಡಗಳನ್ವಯ ಬಿಳಿಜೋಳವನ್ನು ಖರೀದಿ ಹಂತದಲ್ಲಿ ಎಫ್ಎಕ್ಕೂ ಗುಣಮಟ್ಟವನ್ನು ದೃಢೀಕರಿಸಿ ಪ್ರತಿ ಕೇಂದ್ರದಲ್ಲಿ ಮೂರನೇ ವ್ಯಕ್ತಿ ಗುಣಮಟ್ಟ ಪರೀಕ್ಷಕರನ್ನು ನೇಮಿಸಲು ಟೆಂಡರ್ ಕರೆಯಬೇಕು‘ ಎಂದು ಸೂಚಿಸಿದರು.</p>.<p>‘ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ಜಿಲ್ಲೆಗಳಲ್ಲಿನ ಕಾರ್ಯ ಪ್ರಗತಿ ಬಗ್ಗೆ ಆಗ್ನಿಂದಾಗೆ ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಬಯೊಮೆಟ್ರಿಕ್ ಆಧಾರದಲಿಯೇ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್ ಅವರು ಮಾತನಾಡಿ, ‘ಪ್ರತಿ ರೈತರಿಂದ ಹಿಡುವಳಿಯನ್ನಾಧರಿಸಿ ಪ್ರತಿ ಎಕರೆಗೆ 15 ಕ್ವಿಂಟಾಲ್ನಂತೆ ಗರಿಷ್ಠ 150 ಕ್ವಿಂಟಲ್ ಬಿಳಿಜೋಳ ಖರೀದಿಸಬೇಕು. ಬಿಳಿಜೋಳ ಸರಬರಾಜು ಮಾಡಿದ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಮಾಡಲಾಗುವುದು’ ಎಂದರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಪ್ರಕಾಶ ಚವ್ಹಾಣ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಮ್ಮದ್ ಅಲಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ಪ್ರಕಾಶ , ಎಪಿಎಂಸಿ ಸಹಾಯಕ ನಿರ್ದೇಶಕ ಕೃಷ್ಣ, ರಾಯಚೂರಿನ ಸಹಕಾರ ಸಂಘಗಳ ಉಪ ನಿಬಂಧಕ ಮನೋಹರ, ಲಿಂಗಸುಗೂರು ಉಪ ವಿಭಾಗಾಧಿಕಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>