<p><strong>ಮುದಗಲ್</strong>: ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಕಟ್ಟಡ ಐದು ವರ್ಷದಿಂದ ಉದ್ಘಾಟನೆ ಭಾಗ್ಯ ಕಂಡಿಲ್ಲ.</p>.<p>2020ರ ಕೆಕೆಆರ್ಡಿಬಿ ಯೋಜನೆಯ ₹2 ಕೋಟಿ ಅನುದಾನದಲ್ಲಿ ಕಟ್ಟಡ ಕಾಮಗಾರಿ ನಡೆದಿದೆ. ಆರಂಭದಲ್ಲಿ ಕಳಕಪ್ಪ ಎಂಬುವರು ಕಟ್ಟಡ ಕಾಮಗಾರಿ ನಿಲ್ಲಿಸಬೇಕು ಎಂದು ನ್ಯಾಯಾಲಯದಿಂದ ತಡೆ ತಂದಿದ್ದರು. ಇದರಿಂದ ಮೂರು ತಿಂಗಳು ಕಾಮಗಾರಿ ನಿಲ್ಲಿಸಲಾಗಿತ್ತು. ತಡೆ ತೆರವುಗೊಂಡ ನಂತರ ಮಾಜಿ ಶಾಸಕ ಹೂಲಗೇರಿ ಅವರ ಬೆಂಬಲಿಗರೊಬ್ಬರು ಗುತ್ತಿಗೆದಾರರಿಂದ ಉಪ ಗುತ್ತಿಗೆ ಪಡೆದು ಕಾಮಗಾರಿ ಆರಂಭಿಸಿದರು. ಕಾಮಗಾರಿ ಪೂರ್ಣಗೊಳಿಸಿ, ಇಲಾಖೆಗೆ ಹಸ್ತಾಂತರ ಮಾಡುತ್ತಿಲ್ಲ.</p>.<p>ಹೊಸ ಕಟ್ಟಡದಲ್ಲಿ 16 ಕೊಠಡಿಗಳು, ಒಂದು ಊಟದ ಹಾಲ್, ಒಂದು ಅಡುಗೆ ಕೋಣೆ ಇದೆ. ನಾಲ್ಕು ವರ್ಷಗಳಿಂದ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಕಿಟಕಿಯ ಗ್ಲಾಸ್ ಒಡೆದು ಹೋಗಿವೆ. ನಿರ್ಮಾಣ ಕಾಮಗಾರಿ ನಡೆಯುತ್ತಿದೆ.</p>.<p>ಬಾಲಕಿಯರ ವಸತಿ ನಿಲಯ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಆರು ಕೊಠಡಿಗಳಲ್ಲಿ 60 ವಿದ್ಯಾರ್ಥಿಗಳು ವಾಸಿಸುತ್ತಾರೆ. ಈ ವಿದ್ಯಾರ್ಥಿನಿಯರಿಗೆ ಐದು ಸ್ನಾನ ಗೃಹ ಹಾಗೂ ನಾಲ್ಕು ಶೌಚಾಲಯಗಳಿವೆ. ಶೌಚ ಹಾಗೂ ಸ್ನಾನಕ್ಕೆ ಪಾಳೆ ಹಚ್ಚಬೇಕಾಗಿದೆ.</p>.<p>ಬಾಡಿಗೆ ಕಟ್ಟಡ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದೆ. ರಸ್ತೆಯಲ್ಲಿ ಸಂಚರಿಸುವ ವಾಹನದ ಶಬ್ದದಿಂದ ಓದಲು ಆಗುತ್ತಿಲ್ಲ. ಓದಲು ಉತ್ತರ ಪರಿಸರ ಇಲ್ಲ. ಇದರಿಂದ ಅಭ್ಯಾಸ ಮಾಡಲು ಹಿನ್ನಡೆಯಾಗುತ್ತಿದೆ.</p>.<p>ನೂತನ ಕಟ್ಟಡ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ, ಉದ್ಘಾಟನೆ ಮಾಡಿ ಕೊಡಿ ಎಂದು ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ ಅವರಿಗೆ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿನಿಯರು ಹೇಳಿದರು.</p>.<p>ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಂದಗತಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯನ್ನು ಶೀಘ್ರವೇ ಮುಗಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಿ, ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಡಿ.ಎಸ್.ಎಸ್ ಮುಖಂಡ ಬಸವರಾಜ ಬಂಕದಮನಿ ಒತ್ತಾಯಿಸಿದರು.</p>.<div><blockquote>ವಸತಿ ನಿಲಯ ಕಟ್ಟಡ ಕಾಮಗಾರಿ ಶೀಘ್ರವೇ ಮುಗಿಸಿ ನಮ್ಮ ಸುಪರ್ದಿಗೆ ನೀಡಿ ಎಂದು ಗುತ್ತಿಗೆದಾರರಿಗೆ ಹೇಳಿದ್ದೇನೆ </blockquote><span class="attribution">ಮರಿಯಮ್ಮ, ತಾಲ್ಲೂಕಾಧಿಕಾರಿ ಹಿಂದುಳಿದ ವರ್ಗಗ ಕಲ್ಯಾಣ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದಗಲ್</strong>: ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಕಟ್ಟಡ ಐದು ವರ್ಷದಿಂದ ಉದ್ಘಾಟನೆ ಭಾಗ್ಯ ಕಂಡಿಲ್ಲ.</p>.<p>2020ರ ಕೆಕೆಆರ್ಡಿಬಿ ಯೋಜನೆಯ ₹2 ಕೋಟಿ ಅನುದಾನದಲ್ಲಿ ಕಟ್ಟಡ ಕಾಮಗಾರಿ ನಡೆದಿದೆ. ಆರಂಭದಲ್ಲಿ ಕಳಕಪ್ಪ ಎಂಬುವರು ಕಟ್ಟಡ ಕಾಮಗಾರಿ ನಿಲ್ಲಿಸಬೇಕು ಎಂದು ನ್ಯಾಯಾಲಯದಿಂದ ತಡೆ ತಂದಿದ್ದರು. ಇದರಿಂದ ಮೂರು ತಿಂಗಳು ಕಾಮಗಾರಿ ನಿಲ್ಲಿಸಲಾಗಿತ್ತು. ತಡೆ ತೆರವುಗೊಂಡ ನಂತರ ಮಾಜಿ ಶಾಸಕ ಹೂಲಗೇರಿ ಅವರ ಬೆಂಬಲಿಗರೊಬ್ಬರು ಗುತ್ತಿಗೆದಾರರಿಂದ ಉಪ ಗುತ್ತಿಗೆ ಪಡೆದು ಕಾಮಗಾರಿ ಆರಂಭಿಸಿದರು. ಕಾಮಗಾರಿ ಪೂರ್ಣಗೊಳಿಸಿ, ಇಲಾಖೆಗೆ ಹಸ್ತಾಂತರ ಮಾಡುತ್ತಿಲ್ಲ.</p>.<p>ಹೊಸ ಕಟ್ಟಡದಲ್ಲಿ 16 ಕೊಠಡಿಗಳು, ಒಂದು ಊಟದ ಹಾಲ್, ಒಂದು ಅಡುಗೆ ಕೋಣೆ ಇದೆ. ನಾಲ್ಕು ವರ್ಷಗಳಿಂದ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಕಿಟಕಿಯ ಗ್ಲಾಸ್ ಒಡೆದು ಹೋಗಿವೆ. ನಿರ್ಮಾಣ ಕಾಮಗಾರಿ ನಡೆಯುತ್ತಿದೆ.</p>.<p>ಬಾಲಕಿಯರ ವಸತಿ ನಿಲಯ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಆರು ಕೊಠಡಿಗಳಲ್ಲಿ 60 ವಿದ್ಯಾರ್ಥಿಗಳು ವಾಸಿಸುತ್ತಾರೆ. ಈ ವಿದ್ಯಾರ್ಥಿನಿಯರಿಗೆ ಐದು ಸ್ನಾನ ಗೃಹ ಹಾಗೂ ನಾಲ್ಕು ಶೌಚಾಲಯಗಳಿವೆ. ಶೌಚ ಹಾಗೂ ಸ್ನಾನಕ್ಕೆ ಪಾಳೆ ಹಚ್ಚಬೇಕಾಗಿದೆ.</p>.<p>ಬಾಡಿಗೆ ಕಟ್ಟಡ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದೆ. ರಸ್ತೆಯಲ್ಲಿ ಸಂಚರಿಸುವ ವಾಹನದ ಶಬ್ದದಿಂದ ಓದಲು ಆಗುತ್ತಿಲ್ಲ. ಓದಲು ಉತ್ತರ ಪರಿಸರ ಇಲ್ಲ. ಇದರಿಂದ ಅಭ್ಯಾಸ ಮಾಡಲು ಹಿನ್ನಡೆಯಾಗುತ್ತಿದೆ.</p>.<p>ನೂತನ ಕಟ್ಟಡ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ, ಉದ್ಘಾಟನೆ ಮಾಡಿ ಕೊಡಿ ಎಂದು ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ ಅವರಿಗೆ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿನಿಯರು ಹೇಳಿದರು.</p>.<p>ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಂದಗತಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯನ್ನು ಶೀಘ್ರವೇ ಮುಗಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಿ, ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಡಿ.ಎಸ್.ಎಸ್ ಮುಖಂಡ ಬಸವರಾಜ ಬಂಕದಮನಿ ಒತ್ತಾಯಿಸಿದರು.</p>.<div><blockquote>ವಸತಿ ನಿಲಯ ಕಟ್ಟಡ ಕಾಮಗಾರಿ ಶೀಘ್ರವೇ ಮುಗಿಸಿ ನಮ್ಮ ಸುಪರ್ದಿಗೆ ನೀಡಿ ಎಂದು ಗುತ್ತಿಗೆದಾರರಿಗೆ ಹೇಳಿದ್ದೇನೆ </blockquote><span class="attribution">ಮರಿಯಮ್ಮ, ತಾಲ್ಲೂಕಾಧಿಕಾರಿ ಹಿಂದುಳಿದ ವರ್ಗಗ ಕಲ್ಯಾಣ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>