<p><strong>ಮುದಗಲ್:</strong> ಪುರಸಭೆಯಲ್ಲಿ ಬಾಕಿ ಉಳಿದ ತೆರಿಗೆ ವಸೂಲಾತಿಗೆ ಜಿಲ್ಲಾ ಯೋಜನಾಧಿಕಾರಿ ಜಿಲ್ಲಾ ಮಟ್ಟದ ತಂಡ ರಚನೆ ಮಾಡಿ ವಸೂಲಾತಿಗೆ ಮುಂದಾಗಿದ್ದಾರೆ.</p>.<p>ಪುರಸಭೆಯಲ್ಲಿ ತೆರಿಗೆ ವಸೂಲಾತಿ ತುಂಬಾ ಕಡಿಮೆ ಇದೆ. ಈ ವಿಷಯ ಕುರಿತು ಜಿಲ್ಲೆಯಲ್ಲಿ ಸಭೆ ನಡೆಸಿ, ಸಭೆಯಲ್ಲಿ ಮುದಗಲ್ ಪುರಸಭೆ ಕರ ವಸೂಲಿಗರರು ಕುಪ್ಪಣ್ಣ ಹಾಗೂ ಮಾಳಿಂಗರಾಯ ಅವರು ಕರ್ತವ್ಯ ಲೋಪ ಎಸಗಿದ್ದರಿಂದ ತರಾಟೆ ತೆಗೆದುಕೊಂಡಿದ್ದಾರೆ.</p>.<p>ಪುರಸಭೆಯ ವಿವಿಧ ತೆರಿಗೆಗಳಿಗೆ ಸಂಬಂಧಿಸಿದಂತೆ ಬೇಡಿಕೆ, ವಸೂಲಾತಿಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.</p>.<p>ಹೊಸ ಪುಸ್ತಕಗಳ ಪ್ರಕಾರ 9434 ಆಸ್ತಿಗಳಿದ್ದು, ಹಳೆ ಬೇಡಿಕೆ ಪುಸ್ತಕ ಪುರಸಭೆಯಲ್ಲಿ ಲಭ್ಯವಿಲ್ಲದ್ದರಿಂದ ಆಕ್ರೋಶಗೊಂಡರು ಎಂದು ತಿಳಿದುಬಂದಿದೆ.</p>.<p>ಮುಖ್ಯಾಧಿಕಾರಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೂ.24ರಿಂದ ತೆರಿಗೆ ವಸೂಲಾತಿಗೆ ತಂಡಗಳು ಬರಲಿವೆ ಎಂದು ಜಿಲ್ಲಾ ಯೋಜನಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದಗಲ್:</strong> ಪುರಸಭೆಯಲ್ಲಿ ಬಾಕಿ ಉಳಿದ ತೆರಿಗೆ ವಸೂಲಾತಿಗೆ ಜಿಲ್ಲಾ ಯೋಜನಾಧಿಕಾರಿ ಜಿಲ್ಲಾ ಮಟ್ಟದ ತಂಡ ರಚನೆ ಮಾಡಿ ವಸೂಲಾತಿಗೆ ಮುಂದಾಗಿದ್ದಾರೆ.</p>.<p>ಪುರಸಭೆಯಲ್ಲಿ ತೆರಿಗೆ ವಸೂಲಾತಿ ತುಂಬಾ ಕಡಿಮೆ ಇದೆ. ಈ ವಿಷಯ ಕುರಿತು ಜಿಲ್ಲೆಯಲ್ಲಿ ಸಭೆ ನಡೆಸಿ, ಸಭೆಯಲ್ಲಿ ಮುದಗಲ್ ಪುರಸಭೆ ಕರ ವಸೂಲಿಗರರು ಕುಪ್ಪಣ್ಣ ಹಾಗೂ ಮಾಳಿಂಗರಾಯ ಅವರು ಕರ್ತವ್ಯ ಲೋಪ ಎಸಗಿದ್ದರಿಂದ ತರಾಟೆ ತೆಗೆದುಕೊಂಡಿದ್ದಾರೆ.</p>.<p>ಪುರಸಭೆಯ ವಿವಿಧ ತೆರಿಗೆಗಳಿಗೆ ಸಂಬಂಧಿಸಿದಂತೆ ಬೇಡಿಕೆ, ವಸೂಲಾತಿಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.</p>.<p>ಹೊಸ ಪುಸ್ತಕಗಳ ಪ್ರಕಾರ 9434 ಆಸ್ತಿಗಳಿದ್ದು, ಹಳೆ ಬೇಡಿಕೆ ಪುಸ್ತಕ ಪುರಸಭೆಯಲ್ಲಿ ಲಭ್ಯವಿಲ್ಲದ್ದರಿಂದ ಆಕ್ರೋಶಗೊಂಡರು ಎಂದು ತಿಳಿದುಬಂದಿದೆ.</p>.<p>ಮುಖ್ಯಾಧಿಕಾರಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೂ.24ರಿಂದ ತೆರಿಗೆ ವಸೂಲಾತಿಗೆ ತಂಡಗಳು ಬರಲಿವೆ ಎಂದು ಜಿಲ್ಲಾ ಯೋಜನಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>