<p>ಮುದಗಲ್: ಸಮೀಪದ ಛತರ, ನಾಗಲಾಪುರ, ವ್ಯಾಕರನಾಳ ಹಾಗೂ ಬೆಳ್ಳಿಹಾಳ ಗ್ರಾಮಗಳಲ್ಲಿ 2025-26ನೇ ಸಾಲಿನ ಕೆಕೆಆರ್ಡಿಬಿ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಭಾನುವಾರ ಲಿಂಗಸುಗೂರು ಶಾಸಕ ಮಾನಪ್ಪ ಡಿ.ವಜ್ಜಲ ಚಾಲನೆ ನೀಡಿದರು.</p>.<p>ವ್ಯಾಕರನಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿ ಗ್ರಾಮಕ್ಕೆ ತಲಾ ₹50 ಲಕ್ಷ ಮೊತ್ತದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳು ನಡೆಯುವ ವೇಳೆ ಸಾರ್ವಜನಿಕರಿಗೆ ಮತ್ತು ಸ್ಥಳೀಯ ನಿವಾಸಿಗಳಿಗೆ ಸಮಸ್ಯೆಯಾಗದಂತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.</p>.<p>ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ: ಮುದಗಲ್ ಸಮೀಪದ ನಾಗಲಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ವ್ಯಾಕರನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.</p>.<p>ಕಳೆದ ವರ್ಷ ಗ್ರಾಮದಿಂದ ಅಂಕಲಿಮಠಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಕೊಳವೆ ಬಾವಿ ಕೊರಿಸಲಾಗಿದೆ. ಇದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಇದರಿಂದ ನೀರಿನ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕರ ಮುಂದೆ ಆಳಲು ತೋಡಿಕೊಂಡರು.</p>.<p>ಅಧಿಕಾರಿಗಳಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.</p>.<p>ಗಿರಿಮಲ್ಲನಗೌಡ, ಲಿಂಗಸುಗೂರು ಬಿಜೆಪಿ ಮಂಡಲ ಅಧ್ಯಕ್ಷ ನಾಗಭೂಷಣ ಕರಿಯಪ್ಪ ಯಾದವ, ನಾಗರಾಜ ತಳವಾರ, ಚಂದಾವಲಿ ಸಾಬ ಮುದಗಲ್, ಲಿಂಗಣ್ಣ ದೇವಿಕೇರಿ, ಬಾಲಚಂದ್ರ ಕಂದಗಲ್, ನಬೀಸಾಬ, ಶಂಕ್ರಪ್ಪ ತುರುವಿಹಾಳ, ಬಸವರಾಜ ಮಡಿವಾಳರ ಸೇರಿದಂತೆ ಹಲವರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-32-980480792</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದಗಲ್: ಸಮೀಪದ ಛತರ, ನಾಗಲಾಪುರ, ವ್ಯಾಕರನಾಳ ಹಾಗೂ ಬೆಳ್ಳಿಹಾಳ ಗ್ರಾಮಗಳಲ್ಲಿ 2025-26ನೇ ಸಾಲಿನ ಕೆಕೆಆರ್ಡಿಬಿ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಭಾನುವಾರ ಲಿಂಗಸುಗೂರು ಶಾಸಕ ಮಾನಪ್ಪ ಡಿ.ವಜ್ಜಲ ಚಾಲನೆ ನೀಡಿದರು.</p>.<p>ವ್ಯಾಕರನಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿ ಗ್ರಾಮಕ್ಕೆ ತಲಾ ₹50 ಲಕ್ಷ ಮೊತ್ತದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳು ನಡೆಯುವ ವೇಳೆ ಸಾರ್ವಜನಿಕರಿಗೆ ಮತ್ತು ಸ್ಥಳೀಯ ನಿವಾಸಿಗಳಿಗೆ ಸಮಸ್ಯೆಯಾಗದಂತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.</p>.<p>ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ: ಮುದಗಲ್ ಸಮೀಪದ ನಾಗಲಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ವ್ಯಾಕರನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.</p>.<p>ಕಳೆದ ವರ್ಷ ಗ್ರಾಮದಿಂದ ಅಂಕಲಿಮಠಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಕೊಳವೆ ಬಾವಿ ಕೊರಿಸಲಾಗಿದೆ. ಇದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಇದರಿಂದ ನೀರಿನ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕರ ಮುಂದೆ ಆಳಲು ತೋಡಿಕೊಂಡರು.</p>.<p>ಅಧಿಕಾರಿಗಳಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.</p>.<p>ಗಿರಿಮಲ್ಲನಗೌಡ, ಲಿಂಗಸುಗೂರು ಬಿಜೆಪಿ ಮಂಡಲ ಅಧ್ಯಕ್ಷ ನಾಗಭೂಷಣ ಕರಿಯಪ್ಪ ಯಾದವ, ನಾಗರಾಜ ತಳವಾರ, ಚಂದಾವಲಿ ಸಾಬ ಮುದಗಲ್, ಲಿಂಗಣ್ಣ ದೇವಿಕೇರಿ, ಬಾಲಚಂದ್ರ ಕಂದಗಲ್, ನಬೀಸಾಬ, ಶಂಕ್ರಪ್ಪ ತುರುವಿಹಾಳ, ಬಸವರಾಜ ಮಡಿವಾಳರ ಸೇರಿದಂತೆ ಹಲವರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-32-980480792</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>