<p>ಮುದಗಲ್: ಪಟ್ಟಣ ಸಮೀಪದ ಸುಕ್ಷೇತ್ರ ಅಂಕಲಗಿ ಮಠದಲ್ಲಿ (ತಲೆಕಟ್ಟ ಗ್ರಾಮ) ವನಸಿರಿ ಫೌಂಡೇಷನ್ ಹಾಗೂ ಮುದಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್ಎಸ್ಎಸ್ ಘಟಕದಿಂದ ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಅಭಿಯಾನ ಗುರುವಾರ ಜರುಗಿತು.</p>.<p>ಪಕೀರೇಶ್ವರ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಸ್ವಾಮೀಜಿ, ‘ಪರಿಸರ ನಾಶದಿಂದ ಜೀವ ಸಂಕುಲ ಸಂಕಷ್ಟಗಳಿಗೆ ತುತ್ತಾಗುತ್ತಿದೆ. ಮನುಷ್ಯನ ಜೀವನಮಟ್ಟ ಸುಧಾರಿಸಲು ಪ್ರಕೃತಿ ಸಂರಕ್ಷಣೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಬಳಿಕ ತಲೆಕಟ್ಟ ಗ್ರಾಮದ ಶಾಲೆಯ ಆವರಣದಲ್ಲಿ 200 ಸಸಿಗಳನ್ನು ನಾಟಿ ಮಾಡಲಾಯಿತು.</p>.<p>ವನಸಿರಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ, ಮುದಗಲ್ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಸಿದ್ದರಾಮ ಪಾಟೀಲ, ಪ್ರಸಾದ್ ಶಿವರಾಮನಗರ ಕ್ಯಾಂಪ್, ನಿರುಪಾದಿ ಸಾಸಲಮರಿ, ಉಪನ್ಯಾಸಕಿ ಸಿದ್ದಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದಗಲ್: ಪಟ್ಟಣ ಸಮೀಪದ ಸುಕ್ಷೇತ್ರ ಅಂಕಲಗಿ ಮಠದಲ್ಲಿ (ತಲೆಕಟ್ಟ ಗ್ರಾಮ) ವನಸಿರಿ ಫೌಂಡೇಷನ್ ಹಾಗೂ ಮುದಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್ಎಸ್ಎಸ್ ಘಟಕದಿಂದ ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಅಭಿಯಾನ ಗುರುವಾರ ಜರುಗಿತು.</p>.<p>ಪಕೀರೇಶ್ವರ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಸ್ವಾಮೀಜಿ, ‘ಪರಿಸರ ನಾಶದಿಂದ ಜೀವ ಸಂಕುಲ ಸಂಕಷ್ಟಗಳಿಗೆ ತುತ್ತಾಗುತ್ತಿದೆ. ಮನುಷ್ಯನ ಜೀವನಮಟ್ಟ ಸುಧಾರಿಸಲು ಪ್ರಕೃತಿ ಸಂರಕ್ಷಣೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಬಳಿಕ ತಲೆಕಟ್ಟ ಗ್ರಾಮದ ಶಾಲೆಯ ಆವರಣದಲ್ಲಿ 200 ಸಸಿಗಳನ್ನು ನಾಟಿ ಮಾಡಲಾಯಿತು.</p>.<p>ವನಸಿರಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ, ಮುದಗಲ್ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಸಿದ್ದರಾಮ ಪಾಟೀಲ, ಪ್ರಸಾದ್ ಶಿವರಾಮನಗರ ಕ್ಯಾಂಪ್, ನಿರುಪಾದಿ ಸಾಸಲಮರಿ, ಉಪನ್ಯಾಸಕಿ ಸಿದ್ದಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>