<p><strong>ಮಸ್ಕಿ: </strong>ಡಿ. 27ರಂದು ಪುರಸಭೆ ಚುನಾವಣೆ ನಡೆಯುವ ಕಾರಣ ಪಟ್ಟಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.</p>.<p>ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು, ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿವೆ. ಬುಧವಾರ ಸರಣಿ ಸಭೆಗಳನ್ನು ನಡೆಸಿವೆ.</p>.<p>ಇಲ್ಲಿನ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹಾಗೂ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ನೇತೃತ್ವದಲ್ಲಿ ಮುಖಂಡರು ಹಾಗೂ ವಾರ್ಡ್ವಾರು ಆಕಾಂಕ್ಷಿಗಳ ಸಭೆ ನಡೆಯಿತು.</p>.<p>‘ಬಿಜೆಪಿ ಎಲ್ಲ ಕೋನಗಳಿಂದಲೂ ಚಿಂತಿಸಿ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ’ ಎಂದು ಪಕ್ಷದ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ತಿಳಿಸಿದರು.</p>.<p>ಶಾಸಕ ಆರ್.ಬಸನಗೌಡ ಹಾಗೂ ಪಕ್ಷದ ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಅವರ ನೇತೃತ್ವದಲ್ಲಿ ಗುಪ್ತ ಸ್ಥಳದಲ್ಲಿ ಕಾಂಗ್ರೆಸ್ ಪಕ್ಷ ಮುಖಂಡರು, ಆಕಾಂಕ್ಷಿಗಳ ಸಭೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ಗೆ ಪುರಸಭೆ ಚುನಾವಣೆಯಲ್ಲಿ ಗೆಲುವು ಖಚಿತ’ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.</p>.<p>ವಾರ್ಡ್ವಾರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಾಂಗ್ರೆಸ್ಗೆ ಸುಲಭವಲ್ಲ ಎನ್ನಲಾಗುತ್ತಿದೆ.</p>.<p><strong>ಕಬ್ಬಿಣದ ಕಡಲೆ: </strong>ಪುರಸಭೆ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆ ಎರಡು ಪಕ್ಷಗಳಿಗೂ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ. ಪ್ರತಿ ವಾರ್ಡ್ನಿಂದ ಒಂದೊಂದು ಪಕ್ಷದಲ್ಲಿ 5 ರಿಂದ 6 ಜನ ಆಕಾಂಕ್ಷಿಗಳಿದ್ದಾರೆ. ಎರಡು ಪಕ್ಷಗಳಿಗೂ ಬಂಡಾಯದ ಬಿಸಿ ತಟ್ಟುವ ಲಕ್ಷಣಗಳು ಹೆಚ್ಚಾಗಿವೆ. ಪಕ್ಷದ ಮುಖಂಡರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.</p>.<p class="Subhead"><strong>ಜೆಡಿಎಸ್ ಅಖಾಡಕ್ಕೆ: </strong>ಈ ನಡುವೆ ಎರಡೂ ಪಕ್ಷಗಳ ಬಂಡಾಯದ ಲಾಭ ಪಡೆಯಲು ಜೆಡಿಎಸ್ ಕಾದು ಕುಳಿತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>ಡಿ. 27ರಂದು ಪುರಸಭೆ ಚುನಾವಣೆ ನಡೆಯುವ ಕಾರಣ ಪಟ್ಟಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.</p>.<p>ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು, ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿವೆ. ಬುಧವಾರ ಸರಣಿ ಸಭೆಗಳನ್ನು ನಡೆಸಿವೆ.</p>.<p>ಇಲ್ಲಿನ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹಾಗೂ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ನೇತೃತ್ವದಲ್ಲಿ ಮುಖಂಡರು ಹಾಗೂ ವಾರ್ಡ್ವಾರು ಆಕಾಂಕ್ಷಿಗಳ ಸಭೆ ನಡೆಯಿತು.</p>.<p>‘ಬಿಜೆಪಿ ಎಲ್ಲ ಕೋನಗಳಿಂದಲೂ ಚಿಂತಿಸಿ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ’ ಎಂದು ಪಕ್ಷದ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ತಿಳಿಸಿದರು.</p>.<p>ಶಾಸಕ ಆರ್.ಬಸನಗೌಡ ಹಾಗೂ ಪಕ್ಷದ ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಅವರ ನೇತೃತ್ವದಲ್ಲಿ ಗುಪ್ತ ಸ್ಥಳದಲ್ಲಿ ಕಾಂಗ್ರೆಸ್ ಪಕ್ಷ ಮುಖಂಡರು, ಆಕಾಂಕ್ಷಿಗಳ ಸಭೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ಗೆ ಪುರಸಭೆ ಚುನಾವಣೆಯಲ್ಲಿ ಗೆಲುವು ಖಚಿತ’ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.</p>.<p>ವಾರ್ಡ್ವಾರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಾಂಗ್ರೆಸ್ಗೆ ಸುಲಭವಲ್ಲ ಎನ್ನಲಾಗುತ್ತಿದೆ.</p>.<p><strong>ಕಬ್ಬಿಣದ ಕಡಲೆ: </strong>ಪುರಸಭೆ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆ ಎರಡು ಪಕ್ಷಗಳಿಗೂ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ. ಪ್ರತಿ ವಾರ್ಡ್ನಿಂದ ಒಂದೊಂದು ಪಕ್ಷದಲ್ಲಿ 5 ರಿಂದ 6 ಜನ ಆಕಾಂಕ್ಷಿಗಳಿದ್ದಾರೆ. ಎರಡು ಪಕ್ಷಗಳಿಗೂ ಬಂಡಾಯದ ಬಿಸಿ ತಟ್ಟುವ ಲಕ್ಷಣಗಳು ಹೆಚ್ಚಾಗಿವೆ. ಪಕ್ಷದ ಮುಖಂಡರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.</p>.<p class="Subhead"><strong>ಜೆಡಿಎಸ್ ಅಖಾಡಕ್ಕೆ: </strong>ಈ ನಡುವೆ ಎರಡೂ ಪಕ್ಷಗಳ ಬಂಡಾಯದ ಲಾಭ ಪಡೆಯಲು ಜೆಡಿಎಸ್ ಕಾದು ಕುಳಿತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>