ಶಾಲಾ ಆವರಣದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಇಡೀ ಆವರಣ ಪಾಚಿಗಟ್ಟಿ ಸೊಳ್ಳೆಗಳ ಉತ್ಪತ್ತಿ ತಾಣವಾಗಿತ್ತು. ಈ ಕುರಿತು ‘ಪ್ರಜಾವಾಣಿ’ ಯ ಸೋಮವಾರದ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಆದ್ದರಿಂದ ತಹಶೀಲ್ದಾರ್ ಕವಿತಾ.ಆರ್ ಅವರು ಸ್ವಚ್ಛ ಮಾಡಿಸುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚಿಸಿದ್ದರು. ಎಚ್ಚೆತ್ತ ಅಧಿಕಾರಿಗಳು ಸಿಬ್ಬಂದಿಯಿಂದ ಆವರಣ ಸ್ವಚ್ಛ ಮಾಡಿಸಿದರು.