<p><strong>ರಾಯಚೂರು:</strong> ಆರೋಗ್ಯಕ್ಕೆ ಅಗತ್ಯವಾದ ಅಣಬೆಯನ್ನು ಎಲ್ಲರೂ ಬೆಳೆಯಬೇಕು. ಮನೆಗಳು ಹಾಗೂ ಶಾಲೆಗಳಲ್ಲಿ ಕೈತೋಟ ಮಾಡಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಜಿ. ಎಸ್. ಯಡಹಳ್ಳಿ ಹೇಳಿದರು.</p>.<p>ರಾಯಚೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಈಚೆಗೆ ಆಯೋಜಿಸಿದ್ದ ‘ಆರೋಗ್ಯದಾಯಕ ಅಣಬೆ ಮತ್ತು ಮನೆಯ ಕೈತೋಟ’ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನ ವಿಭಾಗದ ವಿಜ್ಞಾನಿ ಡಾ. ಅನುಪಮಾ ಸಿ.ಮಾತನಾಡಿ, ನ್ಯೂನಪೋಷಣೆ ಹೆಚ್ಚಾಗಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪೋಷಕಾಂಶ ಸುಭದ್ರತೆಗಾಗಿ ಅಣಬೆ ಮತ್ತು ಮನೆಯ ಕೈತೋಟ ಮಾಡುವುದರ ಮಹತ್ವ ವಿವರಿಸಿದರು.</p>.<p>ಮುನಿರಾಬಾದ್ನ ಪ್ರಗತಿಪರ ಅಣಬೆ ಕೃಷಿಕ ಟಿ. ಸತ್ಯನಾರಾಯಣ ಮಾತನಾಡಿದರು. ತರಬೇತಿಯಲ್ಲಿ ರೈತ ಹಾಗೂ ರೈತ ಮಹಿಳೆಯರಿಗೆ ಅಣಬೆಯ ಪ್ರಾತ್ಯಕ್ಷಿಕೆಯ ಮುಖಾಂತರ ಉತ್ಪಾದನೆ ಮತ್ತು ಮಾರಾಟದ ಕುರಿತು ತಿಳಿಸಿ ಕೊಡಲಾಯಿತು.</p>.<p>ಕೀಟಶಾಸ್ತ್ರ ವಿಜ್ಞಾನಿ ಡಾ.ಶ್ರೀವಾಣಿ ಜಿ.ಎನ್. ಮತ್ತು ಕೃಷಿ ವಿಜ್ಞಾನ ಕೇಂದ್ರದ ವ್ಯವಸ್ಥಾಪಕ ಎಂ.ಸಿ. ಪಾಟೀಲ ಹಾಗೂ 40 ರೈತರು ಮತ್ತು ರೈತ ಮಹಿಳೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಆರೋಗ್ಯಕ್ಕೆ ಅಗತ್ಯವಾದ ಅಣಬೆಯನ್ನು ಎಲ್ಲರೂ ಬೆಳೆಯಬೇಕು. ಮನೆಗಳು ಹಾಗೂ ಶಾಲೆಗಳಲ್ಲಿ ಕೈತೋಟ ಮಾಡಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಜಿ. ಎಸ್. ಯಡಹಳ್ಳಿ ಹೇಳಿದರು.</p>.<p>ರಾಯಚೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಈಚೆಗೆ ಆಯೋಜಿಸಿದ್ದ ‘ಆರೋಗ್ಯದಾಯಕ ಅಣಬೆ ಮತ್ತು ಮನೆಯ ಕೈತೋಟ’ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನ ವಿಭಾಗದ ವಿಜ್ಞಾನಿ ಡಾ. ಅನುಪಮಾ ಸಿ.ಮಾತನಾಡಿ, ನ್ಯೂನಪೋಷಣೆ ಹೆಚ್ಚಾಗಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪೋಷಕಾಂಶ ಸುಭದ್ರತೆಗಾಗಿ ಅಣಬೆ ಮತ್ತು ಮನೆಯ ಕೈತೋಟ ಮಾಡುವುದರ ಮಹತ್ವ ವಿವರಿಸಿದರು.</p>.<p>ಮುನಿರಾಬಾದ್ನ ಪ್ರಗತಿಪರ ಅಣಬೆ ಕೃಷಿಕ ಟಿ. ಸತ್ಯನಾರಾಯಣ ಮಾತನಾಡಿದರು. ತರಬೇತಿಯಲ್ಲಿ ರೈತ ಹಾಗೂ ರೈತ ಮಹಿಳೆಯರಿಗೆ ಅಣಬೆಯ ಪ್ರಾತ್ಯಕ್ಷಿಕೆಯ ಮುಖಾಂತರ ಉತ್ಪಾದನೆ ಮತ್ತು ಮಾರಾಟದ ಕುರಿತು ತಿಳಿಸಿ ಕೊಡಲಾಯಿತು.</p>.<p>ಕೀಟಶಾಸ್ತ್ರ ವಿಜ್ಞಾನಿ ಡಾ.ಶ್ರೀವಾಣಿ ಜಿ.ಎನ್. ಮತ್ತು ಕೃಷಿ ವಿಜ್ಞಾನ ಕೇಂದ್ರದ ವ್ಯವಸ್ಥಾಪಕ ಎಂ.ಸಿ. ಪಾಟೀಲ ಹಾಗೂ 40 ರೈತರು ಮತ್ತು ರೈತ ಮಹಿಳೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>