<p><strong>ಮಸ್ಕಿ</strong>: ಪಟ್ಟಣದ ಹೃದಯ ಭಾಗದಲ್ಲಿರುವ ಪ್ರಾಚ್ಯವಸ್ತು ಇಲಾಖೆಯ ನಿಷೇಧಿತ ಜಾಗಕ್ಕೆ ಹೊಂದಿಕೊಂಡಿರುವ ಬೆಟ್ಟವನ್ನು ಖಾಸಗಿ ವ್ಯಕ್ತಿಯೊಬ್ಬರು ಯಂತ್ರಗಳ ಮೂಲಕ ಅಗೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೌನ ವಹಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಸರ್ವೆ ನಂ. 402/1, 402/2 ಜಮೀನು ಖಾಸಗಿ ವ್ಯಕ್ತಿಗಳಿಗೆ ಸೇರಿದ್ದರೂ ಇಲ್ಲಿ ಗುಂಡಿ ಅಗೆಯಬೇಕಾದರೆ ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳ ಪರವಾನಗಿ ಪಡೆಯಬೇಕು ಎಂಬ ನಿಯಮವಿದೆ.</p>.<p>ಜಮೀನು ಮಾಲೀಕರು ಜಮೀನು ಸ್ವಚ್ಛಗೊಳಿಸುವ ನೆಪದಲ್ಲಿ ಜೆಸಿಬಿ ಯಂತ್ರಗಳ ಮೂಲಕ ಜಮೀನಿನ ಪಕ್ಕದಲ್ಲಿ ಮಲ್ಲಿಕಾರ್ಜುನ ದೇವರ ಬೆಟ್ಟ ಅಗೆಯುವ ಕಾರ್ಯ ರಾಜಾರೋಷವಾಗಿ ನಡೆಸಿದ್ದು, ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳು ಈ ಕಡೆ ಗಮನ ಕೊಡದೆ ಭೂಮಿ ಅಗೆಯಲು ಸಹಕರಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಖಾಸಗಿ ವ್ಯಕ್ತಿಗಳು ಬಡಾವಣೆ ನಿರ್ಮಿಸಲು ಈ ಜಮೀನನ್ನು ಎನ್.ಎ ಮಾಡಿಸಿದ್ದಾರೆ. ಆದರೆ, ಪ್ರಾಚ್ಯವಸ್ತು ಇಲಾಖೆ ಅಧೀನಕ್ಕೆ ಒಳಪಟ್ಟ ಈ ಸರ್ವೇ ನಂಬರ್ಗೆ ಇಲಾಖೆ ಅಧಿಕಾರಿಗಳು ಅನುಮತಿ (ಎನ್ಒಸಿ) ನೀಡಿದ್ದು, ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಹೋರಾಟಗಾರ ಜಮದಗ್ನಿ ಗೋನಾಳ ತಿಳಿಸಿದ್ದಾರೆ.</p>.<p>ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಗೆ ಒಳಪಟ್ಟ ಈ ಜಾಗದಲ್ಲಿ ಬಡಾವಣೆ ನಿರ್ಮಿಸಲು ಜಮೀನಿನ ಮಾಲೀಕರು ಮುಂದಾಗಿದ್ದಾರೆ. ಇಲಾಖೆ ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿದು ಎನ್ಒಸಿ ನೀಡಿದ್ದಾರೆ ಎಂದು ಪುರಸಭೆ ಮಾಜಿ ಸದಸ್ಯ ಎಂ.ಅಮರೇಶ ಆರೋಪಿಸಿದ್ದಾರೆ.</p>.<div><blockquote>ಜಮೀನಿನ ಮಾಲೀಕರು ಎನ್.ಎ ಮಾಡಿಸಿದ್ದು ಜಾಗ ಸ್ವಚ್ಛ ಮಾಡಿ ಬಡಾವಣೆ ನಿರ್ಮಿಸಲು ಪರವಾನಗಿ ಪಡೆದಿದ್ದಾರೆ. ಬೆಟ್ಟ ಅಗೆಯುತ್ತಿರುವ ಬಗ್ಗೆ ದೂರುಗಳ ಬಂದ ಹಿನ್ನೆಲೆಯಲ್ಲಿ ಕೆಲಸ ಬಂದ್ ಮಾಡಿಸಲಾಗಿದೆ</blockquote><span class="attribution">ಮಂಜುನಾಥ ಬೋಗಾವತಿ, ತಹಶೀಲ್ದಾರ್ ಮಸ್ಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಪಟ್ಟಣದ ಹೃದಯ ಭಾಗದಲ್ಲಿರುವ ಪ್ರಾಚ್ಯವಸ್ತು ಇಲಾಖೆಯ ನಿಷೇಧಿತ ಜಾಗಕ್ಕೆ ಹೊಂದಿಕೊಂಡಿರುವ ಬೆಟ್ಟವನ್ನು ಖಾಸಗಿ ವ್ಯಕ್ತಿಯೊಬ್ಬರು ಯಂತ್ರಗಳ ಮೂಲಕ ಅಗೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೌನ ವಹಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಸರ್ವೆ ನಂ. 402/1, 402/2 ಜಮೀನು ಖಾಸಗಿ ವ್ಯಕ್ತಿಗಳಿಗೆ ಸೇರಿದ್ದರೂ ಇಲ್ಲಿ ಗುಂಡಿ ಅಗೆಯಬೇಕಾದರೆ ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳ ಪರವಾನಗಿ ಪಡೆಯಬೇಕು ಎಂಬ ನಿಯಮವಿದೆ.</p>.<p>ಜಮೀನು ಮಾಲೀಕರು ಜಮೀನು ಸ್ವಚ್ಛಗೊಳಿಸುವ ನೆಪದಲ್ಲಿ ಜೆಸಿಬಿ ಯಂತ್ರಗಳ ಮೂಲಕ ಜಮೀನಿನ ಪಕ್ಕದಲ್ಲಿ ಮಲ್ಲಿಕಾರ್ಜುನ ದೇವರ ಬೆಟ್ಟ ಅಗೆಯುವ ಕಾರ್ಯ ರಾಜಾರೋಷವಾಗಿ ನಡೆಸಿದ್ದು, ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳು ಈ ಕಡೆ ಗಮನ ಕೊಡದೆ ಭೂಮಿ ಅಗೆಯಲು ಸಹಕರಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಖಾಸಗಿ ವ್ಯಕ್ತಿಗಳು ಬಡಾವಣೆ ನಿರ್ಮಿಸಲು ಈ ಜಮೀನನ್ನು ಎನ್.ಎ ಮಾಡಿಸಿದ್ದಾರೆ. ಆದರೆ, ಪ್ರಾಚ್ಯವಸ್ತು ಇಲಾಖೆ ಅಧೀನಕ್ಕೆ ಒಳಪಟ್ಟ ಈ ಸರ್ವೇ ನಂಬರ್ಗೆ ಇಲಾಖೆ ಅಧಿಕಾರಿಗಳು ಅನುಮತಿ (ಎನ್ಒಸಿ) ನೀಡಿದ್ದು, ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಹೋರಾಟಗಾರ ಜಮದಗ್ನಿ ಗೋನಾಳ ತಿಳಿಸಿದ್ದಾರೆ.</p>.<p>ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಗೆ ಒಳಪಟ್ಟ ಈ ಜಾಗದಲ್ಲಿ ಬಡಾವಣೆ ನಿರ್ಮಿಸಲು ಜಮೀನಿನ ಮಾಲೀಕರು ಮುಂದಾಗಿದ್ದಾರೆ. ಇಲಾಖೆ ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿದು ಎನ್ಒಸಿ ನೀಡಿದ್ದಾರೆ ಎಂದು ಪುರಸಭೆ ಮಾಜಿ ಸದಸ್ಯ ಎಂ.ಅಮರೇಶ ಆರೋಪಿಸಿದ್ದಾರೆ.</p>.<div><blockquote>ಜಮೀನಿನ ಮಾಲೀಕರು ಎನ್.ಎ ಮಾಡಿಸಿದ್ದು ಜಾಗ ಸ್ವಚ್ಛ ಮಾಡಿ ಬಡಾವಣೆ ನಿರ್ಮಿಸಲು ಪರವಾನಗಿ ಪಡೆದಿದ್ದಾರೆ. ಬೆಟ್ಟ ಅಗೆಯುತ್ತಿರುವ ಬಗ್ಗೆ ದೂರುಗಳ ಬಂದ ಹಿನ್ನೆಲೆಯಲ್ಲಿ ಕೆಲಸ ಬಂದ್ ಮಾಡಿಸಲಾಗಿದೆ</blockquote><span class="attribution">ಮಂಜುನಾಥ ಬೋಗಾವತಿ, ತಹಶೀಲ್ದಾರ್ ಮಸ್ಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>